ಹಿಜಾಬ್ ವಿವಾದ ಸೃಷ್ಟಿಯಾಗಿದ್ದ ಉಡುಪಿ ಸ. ಬಾಲಕಿಯರ ಪಿಯು ಕಾಲೇಜಿನಲ್ಲಿ ದಾಖಲೆಯ ದಾಖಲಾತಿ
Team Udayavani, Jun 10, 2022, 7:20 AM IST
ಉಡುಪಿ: ಹಿಜಾಬ್ ವಿವಾದ ಸೃಷ್ಟಿಯಾಗಿ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಮಾಡಿರುವ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು 2022- 23ನೇ ಸಾಲಿನಲ್ಲಿ ದಾಖಲೆಯ ದಾಖಲಾತಿ ಕಾಣುತ್ತಿದೆ.
ನಿಯಮ ಮೀರಿ ಹಿಜಾಬ್ ಧರಿಸಿ ಕೊಂಡು ಬಂದ ವಿದ್ಯಾರ್ಥಿನಿಯರಿಂದ ಸೃಷ್ಟಿಯಾದ ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್ನಲ್ಲಿದೆ. ವಿವಾದ ಸೃಷ್ಟಿಯಾದ ಅನಂತರ ರಾಜ್ಯ ಸರಕಾರ ಕೂಡ ಸಮವಸ್ತ್ರಕ್ಕೆ ಸಂಬಂಧಿಸಿದ ನಿಯಮವನ್ನು ಜಾರಿಗೆ ಮಾಡಿದೆ. ಜೂನ್ 15ರ ವರೆಗೂ ದಾಖಲಾತಿ ನಡೆಯಲಿದೆ. ಆದರೆ ಈಗಾಗಲೇ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ವಾಣಿಜ್ಯ ವಿಭಾಗಕ್ಕೆ ಬೇಡಿಕೆ :
ಕಲಾ ವಿಭಾಗಕ್ಕೆ 65 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗ ಬಿಜಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಅರ್ಥಶಾಸ್ತ್ರ ಇತ್ಯಾದಿ ವಿಭಾಗಕ್ಕೆ 68, ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ಗೆ 40, ರಾಜ್ಯಶಾಸ್ತ್ರಕ್ಕೆ 16, ಸಮಾಜ ಶಾಸ್ತ್ರಕ್ಕೆ 20 ಒಟ್ಟಾರೆಯಾಗಿ ವಾಣಿಜ್ಯ ವಿಭಾಗಕ್ಕೆ 144 ಮಂದಿ ದಾಖಲಾಗಿ ದ್ದಾರೆ. ವಿಜ್ಞಾನ ವಿಭಾಗದಲ್ಲಿ 142
ಮಂದಿ ಸೇರಿದಂತೆ ಜೂನ್ 9ರ ವರೆಗೆ ಒಟ್ಟು 354 ಮಂದಿ ದಾಖಲಾಗಿದ್ದಾರೆ. ಇನ್ನೂ ಒಂದು ವಾರ ಕಾಲ ದಾಖಲಾತಿ ಪ್ರಕ್ರಿಯೆ ನಡೆಯುವುದರಿಂದ ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರುವ ನಿರೀಕ್ಷೆಯಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರೊಬ್ಬರು ಮಾಹಿತಿ ನೀಡಿದರು.
ಯಾರನ್ನೂ ನಿರಾಕರಿಸುವಂತಿಲ್ಲ :
ಸರಕಾರಿ ಕಾಲೇಜಾಗಿದ್ದರಿಂದ ಪ್ರವೇಶ ಬಯಸಿ ಯಾರೇ ಬಂದರೂ ನಿರಾಕರಿಸುವಂತಿಲ್ಲ. ಕಳೆದ ವರ್ಷ ಅಂತಿಮವಾಗಿ 340 ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಅವಕಾಶ ನೀಡಲಾಗಿತ್ತು. ಮೆರಿಟ್ ಆಧಾರದಲ್ಲಿ ಸರಕಾರದ ನಿಯಮದಂತೆ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಾಲೇಜಿನ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಂದ ಮುಚ್ಚಳಿಕೆ :
ಎಲ್ಲ ವಿದ್ಯಾರ್ಥಿಗಳು ಮತ್ತು ಪಾಲಕರಿಂದ, “ಯಾವುದೇ ಕಾರಣಕ್ಕೂ ನಿಯಮ ಮೀರಿ ವರ್ತಿಸುವುದಿಲ್ಲ ಹಾಗೂ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತೇವೆ’ ಎಂದು ಮುಚ್ಚಳಿಕೆ ಪಡೆದುಕೊಳ್ಳಲಾಗುತ್ತಿದೆ.
ನಮ್ಮ ಕಾಲೇಜು ಸೇರಲು ವಿದ್ಯಾರ್ಥಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 350ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವ ಬಗ್ಗೆ ದಾಖಲಾತಿಯ ಸಂದರ್ಭದಲ್ಲೇ ಸೂಚನೆ ನೀಡುತ್ತಿದ್ದೇವೆ.– ರುದ್ರೇಗೌಡ, ಪ್ರಾಂಶುಪಾಲ, ಬಾಲಕಿಯರ ಪಿಯು ಕಾಲೇಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.