![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 10, 2022, 11:45 AM IST
ನಟ ಕಂ ನಿರ್ದೇಶಕ ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ಇದೇ ಜೂನ್ 24ರಂದು ಬಿಡುಗಡೆಯಾಗುತ್ತಿದೆ. ಸದ್ಯ ಬಿಡುಗಡೆಗೂ ಮುನ್ನ ತನ್ನ ಹಾಡುಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆಯಲು ಮುಂದಾಗಿರುವ ಚಿತ್ರತಂಡ, ರವಿಚಂದ್ರನ್ ಹುಟ್ಟುಹಬ್ಬದ ಪ್ರಯುಕ್ತ “ಮಮ್ಮಿ ಪ್ಲೀಸ್ ಮಮ್ಮಿ…’ ಎಂಬ ವೀಡಿಯೋ ಸಾಂಗ್ ರಿಲೀಸ್ ಮಾಡಿತ್ತು. ಇದೀಗ ಚಿತ್ರತಂಡ ಚೇತನ್ ಕುಮಾರ್ ಸಾಹಿತ್ಯವಿರುವ “ತ್ರಿವಿಕ್ರಮ’ನ “ಹನಿ ಬನಿ ಫೀಲ್ ಮೈ ಲವ್…’ ಎಂಬ ಮತ್ತೂಂದು ಹಾಡನ್ನು ಬಿಡುಗಡೆ ಮಾಡಿದೆ.
ಸುಮಾರು 20ಕ್ಕೂ ಹೆಚ್ಚು ಸೆಲೆಬ್ರಿಟಿಗಳು ವರ್ಚುವಲ್ ರಿಲೀಸ್ ಮಾಡುವ ಮೂಲಕ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಹಾಡಿಗೆ ಸಂಜಿತ್ ಹೆಗ್ಡೆ ದನಿಯಾಗಿದ್ದಾರೆ.
ನೃತ್ಯ ನಿರ್ದೇಶಕ ಭೂಷಣ್ ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಬ್ಯಾಂಕಾಕ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿರುವ, ಕಲರ್ಫುಲ್ ಆಗಿ ಮೂಡಿಬಂದಿರುವ ಈ ಹಾಡು ಬಿಡುಗಡೆಯಾಗುತ್ತಿದ್ದಂತೆ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ:777 ಚಾರ್ಲಿ ಚಿತ್ರ ವಿಮರ್ಶೆ: ಭಾವ-ಜೀವದ ನವನವೀನ ಪಯಣ
ಸಿನಿಪ್ರಿಯರು ಮಾತ್ರವಲ್ಲದೆ ಪ್ರೇಮ್, ರಕ್ಷಿತಾ, ಗಣೇಶ್, ಸೃಜನ್ ಲೋಕೇಶ್, ಚಂದನ್ ಶೆಟ್ಟಿ, ನವೀನ್ ಸಜ್ಜು, ಮೇಘಾ ಶೆಟ್ಟಿ ಹಾಗೂ ಅನುಪಮಾ ಗೌಡ ಸೇರಿದಂತೆ ಸಾಕಷ್ಟು ತಾರೆಯರು ಹಾಡನ್ನು ಕೇಳಿ, ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಹಿಂದೆ “ರೋಸ್’, “ಮಾಸ್ ಲೀಡರ್’ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿರುವ ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. “ಸೋಮಣ್ಣ ಟಾಕೀಸ್’ ಬ್ಯಾನರ್ ಅಡಿಯಲ್ಲಿ ರಾಮ್ಕೋ ಸೋಮಣ್ಣ “ತ್ರಿವಿಕ್ರಮ’ನಿಗೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು “ತ್ರಿವಿಕ್ರಮ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.