![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 10, 2022, 12:29 PM IST
ಬೆಂಗಳೂರು: ಅಶ್ಲೀಲ ಕಮೆಂಟ್ ಹಾಕಿ ಟ್ಯಾಗ್ ಮಾಡಿದ ವ್ಯಕ್ತಿಯ ವಿರುದ್ಧ ನಟಿ ರಮ್ಯಾ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಸೆನ್ ಠಾಣೆಗೆ ನಟಿ ರಮ್ಯಾ ಖುದ್ದು ಹಾಜರಾಗಿ ದೂರು ನೀಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೂ”ನಮ್ಮ ಮೆಟ್ರೋ’ ವಿಸ್ತರಿಸಲು ಚಿಂತನೆ; ಸಿಎಂ ಬೊಮ್ಮಾಯಿ
ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ರಮ್ಯಾ ದಿವ್ಯ ಸ್ಪಂದನಾ ಎಂಬ ಹೆಸರಿನ ಖಾತೆ ಹೊಂದಿದ್ದಾರೆ. ಇತ್ತೀಚೆಗೆ ಚಾರ್ಲಿ 777 ಕನ್ನಡ ಚಲನ ಚಿತ್ರ ಚೆನ್ನಾಗಿದೆ ಎಂದು ಜೂ.6ರಂದು ರಮ್ಯಾ ಪ್ರಕಟಿಸಿದ್ದರು.
ಜೂ.8ರಂದು ಪ್ರೀತಮ್ ಡಾಟ್ ಪ್ರಿನ್ಸ್ ಡಾಟ್ ಕೆ ಹೆಸರಿನ ಇನ್ ಸ್ಟ್ರಾಗ್ರಾಂ ಖಾತೆ ಹೊಂದಿರುವ ವ್ಯಕ್ತಿ ರಮ್ಯಾ ಬಗ್ಗೆ ಅಶ್ಲೀಲ ಪದಗಳಿಂದ ಕಮೆಂಟ್ ಮಾಡಿ, ಪೋಸ್ಟ್ ಮಾಡಿ, ರಮ್ಯಾಗೆ ಟ್ಯಾಗ್ ಮಾಡಿದ್ದ. ಈ ಹಿನ್ನೆಲೆಯಲ್ಲಿ “ನನ್ನ ಮಾನಕ್ಕೆ ಧಕ್ಕೆಯುಂಟು ಮಾಡಿದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ’ ರಮ್ಯಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ರಮ್ಯಾ ದೂರಿನ ಅನ್ವಯ ಎಫ್ ಐಆರ್ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೆನ್ ಠಾಣೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸುವ ಮೊದಲು ನಟಿ ರಮ್ಯಾ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯನ್ನು ಭೇಟಿಯಾಗಿ ಕೆಲ ಹೊತ್ತು ಚರ್ಚಿಸಿದ್ದರು. ಆರೋಪಿಯನ್ನು ಬಂಧಿಸುವಂತೆ ಕಮಿಷನರ್ಗೂ ಮನವಿ ಮಾಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.