ಕರಾವಳಿ ಕೈತಪ್ಪುವ ಆತಂಕ ಸದ್ಯ ದೂರ: ಸಂತ್ರಸ್ತರು, ಭೂಮಾಲಕರ ಸಭೆಯಲ್ಲಿ ನಿರ್ಧಾರ

ಪಾದೂರು ಯೋಜನೆ ವಿಸ್ತರಣೆ: ಉತ್ತಮ ಭೂಮೌಲ್ಯ ನೀಡಲು ಸಮ್ಮತಿ

Team Udayavani, Jun 11, 2022, 7:20 AM IST

ಕರಾವಳಿ ಕೈತಪ್ಪುವ ಆತಂಕ ಸದ್ಯ ದೂರ: ಸಂತ್ರಸ್ತರು, ಭೂಮಾಲಕರ ಸಭೆಯಲ್ಲಿ ನಿರ್ಧಾರ

ಕಾಪು: ಪಾದೂರು ಕಚ್ಚಾತೈಲ ಸಂಗ್ರಹ ಘಟಕ (ಐಎಸ್‌ಪಿಆರ್‌ಎಲ್‌)ದ ಎರಡನೇ ಹಂತದ ವಿಸ್ತರಣೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾಗುವ ಜಮೀನಿಗೆ ಹೆಚ್ಚಿನ ದರ ನಿಗದಿಪಡಿಸಲು ಶಾಸಕರು ಮತ್ತು ಸಂಸದರ ಸಲಹೆಯಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹೀಗಾಗಿ ಈ ಮಹತ್ವದ ಯೋಜನೆ ರಾಜ್ಯ ಕರಾವಳಿಯ ಕೈತಪ್ಪುವ ಆತಂಕ ಸದ್ಯ ದೂರವಾಗಿದೆ. ಪಾದೂರು ತೈಲ ಸಂಸ್ಕರಣ ಘಟಕವು ರಾಷ್ಟ್ರ ಮಟ್ಟದಲ್ಲಿ ಮಹತ್ವದ್ದು ಎಂಬ ಕಾರಣದಿಂದ ಪ್ರಥಮ ಹಂತದ ಭೂಸ್ವಾಧೀನ ಸಂದರ್ಭ ಸ್ಥಳೀಯರು ಶರತ್ತುಗಳಿಲ್ಲದೆ ಭೂಮಿ ಒದಗಿಸಿ ದ್ದರು. ಬಳಿಕ ಘಟಕವನ್ನು ವಿಸ್ತರಿಸಲು ನಿರ್ಧರಿಸಿ, ಅದಕ್ಕಾಗಿ ಸುತ್ತಮುತ್ತಲಿನ ಪಾದೂರು ಮತ್ತು ಕಳತ್ತೂರು ಗ್ರಾಮಗಳ ಜಾಗ ವನ್ನು ಗುರುತಿಸಲಾಗಿತ್ತು. ಎರಡನೇ ಹಂತದ ವಿಸ್ತರಣೆಗೆ 210 ಎಕ್ರೆ ಭೂ ಸ್ವಾಧೀನ ಆಗಬೇಕಿತ್ತು.

ಈ ಭೂಮಿಗೆ ಕನಿಷ್ಠ ದರವನ್ನು ನಿಗದಿಪಡಿಸಲಾಗಿದ್ದು, ಭೂಮಾಲಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಯುತ ಗರಿಷ್ಠ ಮೌಲ್ಯವನ್ನು ನಿಗದಿಪಡಿಸುವಂತೆ ಕಳತ್ತೂರು ಜನಜಾಗೃತಿ ಸಮಿತಿ, ಜನಹಿತ ಸಮಿತಿಯ ನೇತೃತ್ವದಲ್ಲಿ ಭೂ ಮಾಲಕರು ಮತ್ತು ಸ್ಥಳೀಯರು ಮಜೂರು ಗ್ರಾ.ಪಂ. ಮತ್ತು ಜನಪ್ರತಿನಿಧಿಗಳ ಸಹಿತ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಸಂಸದೆ ಶೋಭಾ ಕರಂದ್ಲಾಜೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಅಧಿಕ ಮೌಲ್ಯವನ್ನು ನಿಗದಿಪಡಿಸುವಂತೆ ಶಾಸಕ ಲಾಲಾಜಿ ಮೆಂಡನ್‌ ಜಿಲ್ಲಾಧಿಕಾರಿ ಮತ್ತು ಸರಕಾರವನ್ನು ಒತ್ತಾಯಿಸಿದ್ದರು. ಜಿಲ್ಲಾಡಳಿತದ ಜತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದ ಶಾಸಕರು, ಭೂ ಮಾಲಕರು ಮತ್ತು ಸ್ಥಳೀಯರ ಸಭೆ ಕರೆದು ಭೂಮಿ ಕಳೆದುಕೊಳ್ಳುವವರಿಗೆ ನ್ಯಾಯಯುತವಾದ ಉತ್ತಮ ಭೂಮೌಲ್ಯ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದ್ದರು.

ಈಗ ಹೆಚ್ಚಿನ ದರ ನಿಗದಿ ಪಡಿಸಿರುವುದರಿಂದ ಯೋಜನೆಗಾಗಿ ಜಮೀನು ಕಳೆದುಕೊಳ್ಳುವವರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾದೂರು ಜನಹಿತ ಸಮಿತಿಯ ಅಧ್ಯಕ್ಷ ಸುರೇಂದ್ರ ಕುಮಾರ್‌ ಜೈನ್‌, ಮಾಜಿ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಮಾಜಿ ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಉಪಾಧ್ಯಕ್ಷ ಮಧುಸೂದನ್‌ ಸಾಲ್ಯಾನ್‌, ಪ್ರಮುಖರಾದ ಪ್ರಸಾದ್‌ ವಳದೂರು, ಸಂದೀಪ್‌ ರಾವ್‌, ಅರುಣ್‌ ಶೆಟ್ಟಿ, ಅನಸೂಯಾ, ಮರ್ವಿನ್‌ ಕೋರ್ಡ, ಜನಹಿತ ಸಮಿತಿ, ಜನ ಜಾಗೃತಿ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಉತ್ತಮ ಭೂಮೌಲ್ಯ ನಿಗದಿ ಪಡಿಸುವಲ್ಲಿ ಸಹಕರಿಸಿದವರಿಗೆ ಶಾಸಕ ಲಾಲಾಜಿ ಮೆಂಡನ್‌ ಅವರು ಕೃತಜ್ಞತೆ ಸಲ್ಲಿಸಿದರಲ್ಲದೇ ಯೋಜನೆಯ ವಿಸ್ತರಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಸಭೆಯ ನಿರ್ಧಾರಗಳು
ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಅಪರ ಜಿಲ್ಲಾಧಿಕಾರಿ ವೀಣಾ, ಪ್ರಭಾರ ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌ ನೇತೃತ್ವದಲ್ಲಿ ಭೂ ಸಂತ್ರಸ್ತರೊಂದಿಗೆ ನಡೆಸಿದ ಸಭೆಯಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಗರಿಷ್ಠ ಭೂ ಮೌಲ್ಯ ನೀಡಿಕೆ, ಮನೆ ಕಳೆದುಕೊಳ್ಳುವವರಿಗೆ ಪಿಡಬ್ಲ್ಯುಡಿ ಮೂಲಕ ಸರ್ವೇ ನಡೆಸಿ ಮೌಲ್ಯ ನಿಗದಿ ಮತ್ತು ಹೆಚ್ಚುವರಿ ಧನಸಹಾಯ ಹಾಗೂ ನಿರ್ವಸಿತರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.