ಸೊಸೈಟಿಗಳ ಸಮಸ್ಯೆ ಇತ್ಯರ್ಥಕ್ಕೆ ಮನವಿ
Team Udayavani, Jun 12, 2022, 11:26 AM IST
ಆಳಂದ: ಸರ್ಕಾರಗಳು ಕೈಗೊಂಡ ಸಾಲಮನ್ನಾ ಫಲಾನುಭವಿಗಳಿಗೆ ಅನ್ವಯಿಸುವುಂತೆ ಕ್ರಮ ಸೇರಿದಂತೆ ಸೊಸೈಟಿಗಳ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಬೇಕು ಎಂದು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ನೂತನ ಎಂಡಿ ಶರಣಬಸಪ್ಪ ಬೆಣ್ಣೂರ ಅವರಿಗೆ ಮಾದನಹಿಪ್ಪರಗಾ ಸೊಸೈಟಿ ಸಂಘದ ಅಧ್ಯಕ್ಷ ಲಿಂಗರಾಜ ಪಾಟೀಲ ಝಳಕಿ ನೇತೃತ್ವದ ನಿಯೋಗವು ಭೇಟಿ ಮಾಡಿ ಮನವಿ ಮಾಡಿದೆ.
ಈ ಕುರಿತು ನೂತನ ಎಂಡಿ ಶರಣಬಸಪ್ಪ ಬೆಣ್ಣೂರ ಅವರಿಗೆ ಸನ್ಮಾನಿಸಿ ಗೌರವಿಸಿದ ನಿಯೋಗದ ಮುಖಂಡ ಲಿಂಗರಾಜ ಪಾಟೀಲ ಅವರು, ರೈತರಿಗೆ ಅನುಕೂಲವಾಗುವ ಹೊಸ ಯೋಜನೆಗಳನ್ನು ಕೈಗೊಳ್ಳಬೇಕು. ಮಾದನಹಿಪ್ಪರಗಾ ಸೊಸೈಟಿಗೆ ರಸಗೊಬ್ಬರ ವಿತರಣೆ ಅನುಮತಿ ನೀಡಬೇಕು. ಸರ್ಕಾರ ಕೈಗೊಂಡ ಸಾಲಮನ್ನಾ ಯೋಜನೆ ಅನೇಕ ಫಲಾನುಭವಿಗಳ ಸಾಲಮನ್ನಾವಾಗಿಲ್ಲ. ಇಂಥ ಫಲಾನುಭವಿಗಳಿಗೆ ಶೀಘ್ರವೇ ಸಾಲಮನ್ನಾ ಮಂಜೂರಾತಿ ನೀಡಲು ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ಈಡೇರಿಕೆಗೆ ಮನವಿ ಮಾಡಿದರು.
ನಿಯೋಗದ ಅಹವಾಲು ಆಲಿಸಿದ ಬೆಣ್ಣೂರ ಅವರು, ಸೊಸೈಟಿಗಳ ಬೇಡಿಕೆ ಕುರಿತು ವಾರದಲ್ಲಿ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಾದನಹಿಪ್ಪರಗಾ ಸೊಸೈಟಿ ಕಾರ್ಯದರ್ಶಿ ಶಿವಾನಂದ ಪಾಟೀಲ, ಮಲ್ಲಿನಾಥ ಘಂಟೆ, ಭೋಗೇಶ ಭೊರಳ್ಳಿ ಹಾಗೂ ಆಳಂದ ತಾಲೂಕಿನ ಅನೇಕ ಸೊಸೈಟಿಗಳ ಕಾರ್ಯದರ್ಶಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.