ಹಣ, ಜಾತಿ ಪ್ರಭಾವ ಪ್ರಜಾತಂತ್ರಕ್ಕೆ ಮಾರಕ: ವಾಟಳ್ ನಾಗರಾಜ್
Team Udayavani, Jun 12, 2022, 7:04 PM IST
ಪಿರಿಯಾಪಟ್ಟಣ: ಚುನಾವಣೆಗಳಲ್ಲಿ ನೈತಿಕತೆ, ಪ್ರಾಮಾಣಿಕತೆ ಮರೆಯಾಗಿ ಹಣ ಮತ್ತು ಜಾತಿ ಪ್ರಭಾವ ಹೆಚ್ಚುತ್ತಿರುವುದರಿಂದ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವ ಸಂಭವ ಹೆಚ್ಚುತ್ತಿದೆ ಎಂದು ಕನ್ನಡ ಚಳುವಳಿ ಪಕ್ಷದ ಮುಖಂಡ ವಾಟಳ್ ನಾಗರಾಜ್ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೋರಾಟದ ಮೂಲಕ ರಾಜಕಾರಣ ಮಾಡಿದವನು, ಹಣ, ಜಾತಿ ಪ್ರಭಾವ ಬಳಸಿ ಎಂದೂ ರಾಜಕಾರಣ ಮಾಡಿಲ್ಲ ಹಾಗೇನಾದರೂ ಮಾಡಿದರೆ ನಾನು ನಾನು ಬಹುದೊಡ್ಡ ಹುದ್ದೆಯನ್ನು ಅಲಂಕರಿಸಬಹುದಿತ್ತು. ಆದರೆ ನೀತಿ, ನಿಯಮ, ತತ್ವ ಸಿದ್ದಾಂತ ನಂಬಿಕೆ ಇಟ್ಟು ಚುನಾವಣೆಗಳಲ್ಲಿ ಸ್ಪರ್ಧಿಸಿಕೊಂಡು ಬಂದಿದ್ದೇನೆ. ಆದರೂ ಕೂಡ ನಿರಂತರ ಸೋಲಾಗಿದೆ. ಆದರೆ ನಾನು ಸೋಲು-ಗೆಲುವುಗಳಿಗೆ ತಲೆಕೆಡಿಸಿಕೊಳ್ಳದೆ ಭ್ರಷ್ಟಚಾರದ ವಿರುದ್ದ ನನ್ನ ಸ್ಪರ್ಧೆಯನ್ನು ಮುಂದುವರಿಸಿಕೊಂಡು ಬಂದಿರುವುದಾಗಿ ತಿಳಿಸಿದರು.
ಪ್ರಜ್ಞಾವಂತ ಪದವೀಧರ ಮತದಾರರು ನನ್ನನ್ನು ಆರಿಸಿ ವಿಧಾನ ಪರಿಷತ್ತಿಗೆ ಕಳುಹಿಸಿದರೆ ವಿಧಾನ ಪರಿಷತ್ತಿನ ಘನತೆ ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ. ಪದವೀದರರ ಕ್ಷೇತ್ರ ಬಹಳ ಪವಿತ್ರವಾದುದ್ದು, ಪದವೀಧರರು ಹಣ ಜಾತಿಯ ವ್ಯಾಮೋಹಕ್ಕೆ ಬಲಿಯಾಗದೆ ಚುನಾವಣೆಯಲ್ಲಿ ಮೊದಲ ಪ್ರಾಶಸ್ಯದ ಮತವನ್ನು ನೀಡುವ ಮೂಲಕ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಾಟಳ್ ಪಕ್ಷದ ಮುಖಂಡರಾದ ಅಜೇಯ್ ಕುಮಾರ್, ಕ್ರಾಂತಿ ಕುಮಾರ್, ಪಾರ್ಥಸಾರಥಿ, ನಾರಾಯಣ್ ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.