ವಿಮಾನದಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಪ್ರತಿಭಟನೆ, CPIM, ಕಾಂಗ್ರೆಸ್ ವಾಕ್ಸಮರ
ಬಿಜೆಪಿ ಸೇರಿದಂತೆ ವಿಪಕ್ಷಗಳು ಪಿಣರಾಯಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.
Team Udayavani, Jun 14, 2022, 12:15 PM IST
ತಿರುವನಂತಪುರಂ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಘಟನೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ತುರ್ತು ಪರಿಸ್ಥಿತಿಗಿಂತ ದೊಡ್ಡ ವಿಚಾರ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ
ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ವಪ್ನಾ ಸುರೇಶ್ ವಿಚಾರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕುಟುಂಬ ಸದಸ್ಯರು ಶಾಮೀಲಾಗಿರುವುದಾಗಿ ಆರೋಪಿಸಿದ್ದರು. ನಂತರ ಬಿಜೆಪಿ ಸೇರಿದಂತೆ ವಿಪಕ್ಷಗಳು ಪಿಣರಾಯಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.
ಏತನ್ಮಧ್ಯೆ ಸಿಎಂ ಪಿಣರಾಯಿ ತಿರುವನಂತಪುರಕ್ಕೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಇಬ್ಬರು ಘೋಷಣೆ ಕೂಗಿ, ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಪಿಣರಾಯಿ ಭದ್ರತಾ ಸಿಬ್ಬಂದಿ ಮತ್ತು ಜಯರಾಜನ್, ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಿಐಎಸ್ ಎಫ್ ಗೆ ಹಸ್ತಾಂತರಿಸಿರುವುದಾಗಿ ವರದಿ ತಿಳಿಸಿದೆ.
ಮುಖ್ಯಮಂತ್ರಿಗಳ ಮೇಲೆ ದಾಳಿ ನಡೆಸುವ ವ್ಯವಸ್ಥಿತ ಸಂಚು ಇದಾಗಿದೆ ಎಂದು ಸಿಪಿಐಎಂ ಆರೋಪಿಸಿದೆ. ಆದರೆ ಇದೊಂದು ಪೊಲೀಸ್ ದಬ್ಬಾಳಿಕೆಯ ವಿರುದ್ಧದ ಸಾಂಕೇತಿಕ ಪ್ರತಿಭಟನೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಡಿ.ಸತೀಶನ್ ತಿರುಗೇಟು ನೀಡಿದ್ದಾರೆ. ಕಳೆದ ಒಂದು ವಾರದಿಂದ ಸಿಎಂ ಪಿಣರಾಯಿ 200 ಮಂದಿ ಪೊಲೀಸರ ಬೆಂಗಾವಲಿನಲ್ಲಿ ತಿರುಗಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದರು. ಈ ನಿಟ್ಟಿನಲ್ಲಿ ಪೊಲೀಸರ ದೌರ್ಜನ್ಯದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ ಎಂದು ಸತೀಶನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.