ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಲಿ : ಸಚಿವ ಬಿ.ಸಿ.ಪಾಟೀಲ್


Team Udayavani, Jun 15, 2022, 5:24 PM IST

ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಬೇಕು. ಹೊಸ ಹೊಸ ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ಪರಿಚಯಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ರೈತ ರೈತೋದ್ಯಮಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ದುಡಿಯಬೇಕು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಖಡಕ್ ಆಗಿ ಸೂಚಿಸಿದರು.

ವಿಕಾಸ ಸೌಧದಲ್ಲಿಂದು ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಅನುಕೂಲವಾಗುವಂತೆ ತಾಂತ್ರಿಕತೆಗಳನ್ನು ಅಭಿವೃದ್ಧಿಸುವ ಕುರಿತು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಉನ್ನತಾಧಿಕಾರದ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಕೃಷಿಯಲ್ಲಿ ಡ್ರೋನ್ ಬಳಕೆ ಮೂಲಕ ಕೀಟನಾಶಕ,ಲಘುಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ, ಅವುಗಳ ಪ್ರಮಾಣ ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿ ಪಡಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಹಾಗೂ ಕ್ರೋಡೀಕರಿಸಿ ಯೋಜನಾ ವರದಿ ನೀಡಲು ಕೃಷಿ ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನಿಗಳ ತಂಡ ರಚಿಸುವ ಬಗ್ಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಿದಂತೆ ಅದರ ಅನುಷ್ಠಾನದ ಬಗ್ಗೆ ಸಭೆಯಲ್ಲಿ ಸಚಿವರು ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಚರ್ಚಿಸಿದರು.

ಇದನ್ನೂ ಓದಿ : ಅನಧಿಕೃತ ಕೋಚಿಂಗ್‌ ಸೆಂಟರ್‌ಗೆ ಬಿಇಒ ರಾಠೊಡ ದಾಳಿ

ಕೆಲ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಅನುಷ್ಠಾನ ವಿಳಂಬವಾಗುತ್ತಿರುವುದನ್ನು ಗಮನಿಸಿದ ಸಚಿವರು ಗರಂ ಆದರು. ಸಭೆಯಲ್ಲಿ ಬರೀ ಉಪಸ್ಥಿತರಾದರಷ್ಟೇ ಸಾಲದು, ಸಭೆಯ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ವಿಶ್ವವಿದ್ಯಾಲಯಗಳು ಪುಸ್ತಕದ ಪಠ್ಯವನ್ನಷ್ಟೇ ಬೋಧಿಸಲು ಮೀಸಲಾಗದೇ ಕೃಷಿ ಹೊಲ ಜಮೀನು ರೈತರ ಬಗ್ಗೆ ವಾಸ್ತವ ತಿಳಿಯಬೇಕು. ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಅಧಿಕಾರಿಗಳು ವಿಜ್ಞಾನಿಗಳು ಸಹ ಪ್ರಾತ್ಯಕ್ಷಿಕೆಗಳಲ್ಲಿ ಭಾಗವಹಿಸಿ ಹೊಸತನ್ನು ಕಲಿಯಬೇಕು. ಪ್ರಗತಿಪರ ರೈತರನ್ನು ಇಲಾಖೆಯನ್ನು ಸಹ ಹೆಚ್ಚು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಜೊತೆ ರೈತರ ಹೊಲಗಳಿಗೆ ಭೇಟಿ ನೀಡಿ ವಾಸ್ತವ ತಿಳಿದು ರೈತರ ಸಮಸ್ಯೆ ಬೆಳೆಗಳ ಬಗ್ಗೆ ಮಾಹಿತಿ ತಿಳಿದು ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು. ರೈತರ ಹೊಲಗಳಿಗೆ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವ ವೈದ್ಯರಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಎಲ್ಲಾ ವಿಶ್ವವಿದ್ಯಾಲಯಗಳು ಬೇರೆ ಬೇರೆ ಎನ್ನುವ ಭಾವನೆ ತೊರೆದು ಎಲ್ಲರ ಉದ್ದೇಶ ರೈತರ ಏಳಿಗೆ ಎಂದಾಗಬೇಕು. ಕೃಷಿ ವಿಶ್ವವಿದ್ಯಾಲಯಗಳು ಕಾಲಕ್ಕೆ ತಕ್ಕಂತೆ ರೈತರ ಅಭಿರುಚಿಗೆ ತಕ್ಕಂತೆ ಹೊಸ ತಳಿಗಳನ್ನು ಕಂಡುಹಿಡಿದು ಅದರ ಮಾಹಿತಿ ಪ್ರತಿ ಗ್ರಾಮಪಂಚಾಯಿತಿ ಮಟ್ಟಕ್ಕೂ ತಲುಪುವಂತಾಗಬೇಕು. ವಿಶ್ವವಿದ್ಯಾಲಯಗಳ ಅಧಿಕಾರಿಗಳು ಜೊತೆ ಪ್ರಗತಿಪರ ರೈತರನ್ನು ಕರೆದುಕೊಂಡು ರೈತರ ಹೊಲಗಳಿಗೆ ಹೋಗಿ ರೈತರಿಗೆ ಪ್ರೇರಣೆ ಮಾಡುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ : ಹುಕ್ಕೇರಿ : ನಿವೃತ್ತ ಪಿಎಸ್‌ಐ ಪತ್ನಿಯ ಬರ್ಬರ ಹತ್ಯೆ ; ಚಿನ್ನಾಭರಣ ದೋಚಿ ಪರಾರಿ

ಇದೇ ವೇಳೆ ರಾಜ್ಯದ ರೈತ ಸಂಪರ್ಕ ಕೇಂದ್ರಗಳಿಗೆ ಯಾವ್ಯಾವ ವಿಶ್ವವಿದ್ಯಾಗಳ ವಿಜ್ಞಾನಿಗಳು ಅಧಿಕಾರಿಗಳು ಎಷ್ಟು ಬಾರಿ ಭೇಟಿ ನೀಡಿದ್ದಾರೆ. ರೈತರ ಅಭಿಪ್ರಾಯವೇನು? ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೇ ಕೃಷಿ ಆಯುಕ್ತರು ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ವಿಶ್ವವಿದ್ಯಾಲಯಗಳಿಗೆ ಕೇಂದ್ರದಿಂದ ಬಂದಿರುವ ಅನುದಾನಗಲೆಷ್ಟು? ಅದರ ಸದ್ಬಳಕೆಯಾಗಿದೆಯೇ? ವಿಶ್ವವಿದ್ಯಾಲಯಗಳ ಪ್ರಗತಿಯ ವಿವರ ಪಡೆದು ವರದಿ ನೀಡುವಂತೆ ಸೂಚಿಸಿದರು.

ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮಾತನಾಡಿ, ಡ್ರೋನ್ ಬಳಕೆ ತಂತ್ರಜ್ಞಾನ ಬಳಕೆಯ ವರದಿ ನೀಡುವಂತೆ ಕೃಷಿ ವಿಶ್ವವಿದ್ಯಾಲಯಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಿದರು ಹಾಗೂ ಜುಲೈ ತಿಂಗಳ ಮೊದಲ ವಾರದಲ್ಲಿ ಸೆಕೆಂಡರಿ ಕೃಷಿ ಅಗ್ರಿಕಲ್ಚರ್ ಕುರಿತು ಕಾರ್ಯಾಗಾರ ಮಾಡುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕೃಷಿ ಆಯುಕ್ತ ಶರತ್ ಪಿ. ಕೃಷಿ ಇಲಾಖೆ ನಿರ್ದೇಶಕಿ ನಂದಿನಿ ಕುಮಾರಿ ಅಪರ ಕೃಷಿ ನಿರ್ದೇಶಕ ವೆಂಕಟರಮಣ ರೆಡ್ಡಿ ಸೇರಿದಂತೆ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.