ಹೋರಾಟ ತೀವ್ರ; ನಾಳೆ ಕಾಂಗ್ರೆಸ್ ರಾಜಭವನ ಚಲೋ : ಭದ್ರತೆ ಬಿಗಿ
ಗಾಂಧಿ ಫ್ಯಾಮಿಲಿ ಇರೊ ಬರೋ ಆಸ್ತಿ ದೇಶಕ್ಕಾಗಿ ತ್ಯಾಗ ಮಾಡಿದೆ...ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದರು...
Team Udayavani, Jun 15, 2022, 8:58 PM IST
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ನಾಳೆ, ಗುರುವಾರ ಕರ್ನಾಟಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.
ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಿ, ಮುತ್ತಿಗೆ ಹಾಕುತ್ತೇವೆ, ನಾಡಿದ್ದು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ ಎಂದು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುರ್ತು ಸುದ್ದಿಗೊಷ್ಠಿ ನಡೆಸಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ನಾವು ಧರಣಿ ಮಾಡಿದ್ದೆವು, ನಮ್ಮಮೇಲೆ ಕೇಸ್ ಹಾಕಿದ್ದರು. ಇವತ್ತು ಬೇಲ್ ಪಡೆದುಕೊಂಡಿದ್ದೇವೆ. ನಾಳೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸಂವಿಧಾನದವನ್ನು ಗಾಳಿಗೆ ತೂರಿ ಎಲ್ಲಾ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಪ್ರಯತ್ನಗಳು ನಡೆಯುತ್ತಿದೆ.
ಇಡಿ ರಾಹುಲ್ ಗಾಂಧಿ ವಿಚಾರಣೆ ನಡೆಸುತ್ತಿದೆ.ಒಂದೆರಡು ಗಂಟೆ ವಿಚಾರಣೆ ಮಾಡಿ ಕಳುಹಿಸಬೇಕು. ಆದರೆ 10 ರಿಂದ 14 ಗಂಟೆ ಇಡಿ ವಿಚಾರಣೆ ನಡೆಸುತ್ತಿದ್ದಾರೆ. ಇಡಿ ಮೂಲಕ ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಗೆ ಕಾಟ ಕೊಡುತ್ತಿದ್ದಾರೆ. ಸೋನಿಯಾ ಗಾಂಧಿ ಈ ದೇಶದ ಭವಿಷ್ಯಕ್ಕಾಗಿ ಒಬ್ಬ ಆರ್ಥಿಕ ತಜ್ಞರನ್ನು ಪ್ರಧಾನಿ ಮಾಡಿದರು. ತನಗೆ ಸಿಗಬೇಕಾದ ಪಿಎಂ ಹುದ್ದೆಯನ್ನು ಡಾ. ಮನಮೋಹ ಸಿಂಗ್ ಅವರಿಗೆ ನೀಡಿದರು. ರಾಹುಲ್ ಗಾಂಧಿ ಕೂಡ ಪ್ರಧಾನಿ ಆಗಬೇಕಿತ್ತು ಎಂದು ಕಿಡಿ ಕಾರಿದರು.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಫಿಡವಿಟ್ ತೆಗೆಸಿ ನೋಡಿ, ಎಷ್ಟು ಆಸ್ತಿ ಇದೆ ನಮ್ಮ ನಾಯಕರಿಗೆ ಎಂದು. ಇರುವುದಕ್ಕೆ ಒಂದು ಮನೆ ಇಲ್ಲನಮ್ಮ ನಾಯಕರಿಗೆ. ಗಾಂಧಿ ಫ್ಯಾಮಿಲಿ ಇರೊ ಬರೋ ಆಸ್ತಿ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಪಕ್ಷದ ಕಛೇರಿ ನಮಗೆ ದೇವಸ್ಥಾನ ಇದ್ದ ಹಾಗೆ ಎಂದರು.
ನವದೆಹಲಿಯ ಎಐಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರ ಪ್ರವೇಶಕ್ಕೆ ನಿರ್ಬಂಧ, ಪೊಲೀಸರ ಮೂಲಕ ಮಾಡಿಸುತ್ತಿರುವ ದೌರ್ಜನ್ಯ, ನಮ್ಮ ನಾಯಕರಿಗೆ ಕೊಡುತ್ತಿರುವ ಕಿರುಕುಳವನ್ನು ಖಂಡಿಸಿ ಜೂನ್ 16 ರಂದು ಬೆಳಗ್ಗೆ 10 ಗಂಟೆಗೆ ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯಕರ್ತ ರಿಗೆ ಕರೆ ನೀಡಲಾಗಿದೆ.
ಕೆಪಿಸಿಸಿ ಕಚೇರಿಗೆ ಡಿಸಿಪಿ ಭೀಮಾಶಂಕರ್ ಗುಳೇದ್ ಆಗಮನ
ಬೆಂಗಳೂರು ಉತ್ತರ ಡಿಸಿಪಿ ಭೀಮಾಶಂಕರ್ ಗುಳೇದ್ ಅವರು ನಾಳಿನ ಪ್ರತಿಭಟನೆ ಬಗ್ಗೆ ತಿಳಿದುಕೊಳ್ಳಲು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದರು. ಪ್ರತಿಭಟನೆ ನಡೆಸದಂತೆ ಮನವಿ ಮಾಡಲು ಬಂದಿದ್ದ ಡಿಸಿಪಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮನವಿ ಮಾಡಿ ಮನವೊಲಿಸಲು ಪ್ರಯತ್ನಿಸಿದರು.
ಕೊನೆಗೆ, ”ಪ್ರತಿಭಟನೆ ನಡೆಸುತ್ತೇವೆ,ನಮ್ಮನ್ನ ಬೇಕಾದರೆ ಬಂಧಿಸಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದು, ಪೋಲಿಸ್ ಅಧಿಕಾರಿಗಳು ವಾಪಸ್ ಹೊರತು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.