ಗ್ರಾಮೀಣ ಭಾಗದಲ್ಲೂ ಕಲುಷಿತ ನೀರಿನ ಭೀತಿ!


Team Udayavani, Jun 16, 2022, 5:34 PM IST

20water

ರಾಯಚೂರು: ನಗರದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸುತ್ತಿರುವುದು ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿದೆ. ಹಳ್ಳಿಗಳಲ್ಲೂ ಕೆಲವೆಡೆ ಅಶುದ್ಧ ನೀರೇ ಬರುತ್ತಿದ್ದು, ನಮಗೂ ವಾಂತಿ  ಬಂದರೆ ಏನು ಗತಿ ಎಂಬ ಭಯ ಶುರುವಾಗಿದೆ.

ತಾಲೂಕಿನ ಗೋನಾಲ ಗ್ರಾಮದಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು, ಗ್ರಾಮದಲ್ಲೂ ವ್ಯಕ್ತಿಯೊಬ್ಬ ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಜಾಗೀರ್‌ ವೆಂಕಟಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮದ ಹತ್ತಿರ ಕೆರೆ ನಿರ್ಮಿಸಿ ಅಲ್ಲಿಂದ ಟ್ಯಾಂಕ್‌ ಮೂಲಕ ಮನೆ-ಮನೆಗೆ ನೀರು ತಲುಪಿಸಲಾಗುತ್ತಿದೆ. ಅಲ್ಲದೇ, ಈ ಕೆರೆಯಿಂದ ಪತ್ತೇಪುರ ಗ್ರಾಮಕ್ಕೂ ನೀರು ಪೂರೈಸಲಾಗುತ್ತಿದೆ.

ಗೋನಾಲ ಗ್ರಾಮದಲ್ಲಿ ಒಂದು ಸಾವಿರ ಜನಸಂಖ್ಯೆಯಿದ್ದು, ಒಂದು ಆರ್‌ಒ ಪ್ಲಾಂಟ್‌ ಅಳವಡಿಕೆ ಮಾಡಲಾಗಿದೆ. ಆದರೆ, ಇಲ್ಲಿ ಒಂದು ಕ್ಯಾನ್‌ಗೆ ಐದು ರೂ. ಕೊಡಬೇಕಿದೆ. ಬಡವರು, ಕೂಲಿ ಕಾರ್ಮಿಕರು ದುಡ್ಡು ಕೊಟ್ಟು ನೀರು ಖರೀದಿಸಲಾಗದೆ ಕೆರೆ ನೀರನ್ನೇ ಬಳಸುತ್ತಾರೆ.

ಕುಡಿಯಲು ಮಾತ್ರ ಆರ್‌ಒ ಪ್ಲಾಂಟ್‌ ನೀರು ತಂದರೂ ಅಡುಗೆಗೆ ಕೆರೆ ನೀರನ್ನೇ ಬಳಸುತ್ತಾರೆ. ಕೆರೆ ಬಳಿ ನೀರು ಶುದ್ಧೀಕರಣ ಘಟಕ ಇದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನೀರನ್ನು ಶುದ್ಧೀಕರಿಸದೇ ಹಾಗೆ ಬಿಡಲಾಗುತ್ತಿದೆ. ಈ ಕೆರೆಗೂ ತುಂಗಭದ್ರಾ ಕಾಲುವೆ ಮೂಲಕವೇ ನೀರು ಹರಿಸಲಾಗುತ್ತಿದೆ. ಈಗ ನೀರು ಹಳದಿ ಬಣ್ಣಕ್ಕೆ ತಿರುಗಿದ್ದು, ಅಂಥ ನೀರೇ ಮೂರು ದಿನಕ್ಕೊಮ್ಮೆ ಬಿಡಲಾಗುತ್ತಿದೆ. ಗ್ರಾಮದಲ್ಲಿ ನಾಲ್ವರು ಪಂಚಾಯಿತಿ ಸದಸ್ಯರಿದ್ದು, ಪಿಡಿಒ ಗಮನ ಸೆಳೆದರೂ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ತಾಂತ್ರಿಕ ಕಾರಣಗಳನ್ನು ಹೇಳುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ವಾಂತಿ ಭೇದಿ ಶುರು: ಗೋನಾಲ ಗ್ರಾಮದಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಈಗಾಗಲೇ ವೆಂಕಟೇಶ ಎನ್ನುವವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಬುಧವಾರ ಕೂಡ ಚಿಕ್ಕ ಮಗುವಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ದಿನೇದಿನೇ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಎಚ್ಚೆತ್ತುಕೊಳ್ಳಬೇಕಿದೆ ಸ್ಥಳೀಯ ಆಡಳಿತ

ನಗರದಲ್ಲಿ ಅಶುದ್ಧ ನೀರು ಪೂರೈಕೆಯಿಂದ ಸಾಕಷ್ಟು ಅವಾಂತರಗಳು ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲೂ ಅಂಥ ಪರಿಸ್ಥಿತಿ ನಿರ್ಮಾಣವಾಗದಂತೆ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಅನೇಕ ದಶಕಗಳಷ್ಟು ಹಳೆಯ ಓವರ್‌ ಹೆಡ್‌ ಟ್ಯಾಂಕ್‌ಗಳಿದ್ದು, ತುಂಗಭದ್ರಾ, ಕೃಷ್ಣಾ ನದಿ ಮೂಲಕವೇ ನೀರು ಪೂರೈಸಲಾಗುತ್ತಿದೆ. ಕೆಲ ದಿನಗಳ ಹಿಂದೆ ಗದಾರ್‌ ಗ್ರಾಮದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ನಲ್ಲಿ ಏಳು ಕೋತಿಗಳು ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ರಾಯಚೂರಿನ ರಾಂಪುರ ನೀರು ಶುದ್ಧೀಕರಣ ಘಟಕದಲ್ಲಿ ಹಲ್ಲಿಗಳು ಸತ್ತು ಬಿದ್ದಿರುವುದು ಕಣ್ಣಿಗೆ ಬಿದ್ದಿವೆ. ಹೀಗಾಗಿ ಎಲ್ಲ ಟ್ಯಾಂಕ್‌ಗಳ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ನೀರು ಶುದ್ಧೀಕರಣಕ್ಕೂ ಒತ್ತು ನೀಡಬೇಕಿದೆ.

ಗೋನಾಲ ಗ್ರಾಮದಲ್ಲಿ ಅಶುದ್ಧ ನೀರು ಪೂರೈಕೆ ವಿಚಾರ ಗಮನಕ್ಕೆ ಬಂದಿಲ್ಲ. ಅಲ್ಲಿನ ಕೆರೆ ನಿರ್ವಹಣೆ ವಿಚಾರವಾಗಿ ಟೆಂಡರ್‌ ಬೇರೆಯವರಿಗೆ ಆಗಿದೆ. ಗ್ರಾಮಸ್ಥರು ಆರ್‌ಒ ಪ್ಲಾಂಟ್‌ ನೀರು ಬಳಸುತ್ತಾರೆ. ಆದರೂ ಗ್ರಾಮಕ್ಕೆ ಭೇಟಿ ನೀಡಿ ಅಶುದ್ಧ ನೀರು ಪೂರೈಕೆ ಬಗ್ಗೆ ಕ್ರಮ ವಹಿಸಲಾಗುವುದು. –ಮಮತಾ, ಪಿಡಿಒ, ವೆಂಕಟಾಪುರ ಗ್ರಾಪಂ

ಕಳೆದ ಕೆಲ ದಿನಗಳಿಂದ ನಮ್ಮ ಊರಿಗೆ ಹಳದಿ ಬಣ್ಣಕ್ಕೆ ತಿರುಗಿದ ನೀರು ಪೂರೈಕೆಯಾಗುತ್ತಿದೆ. ಬಡ, ಕೂಲಿ ಕಾರ್ಮಿಕರು ದುಡ್ಡು ಕೊಟ್ಟು ನೀರು ಖರೀದಿಸಲಾಗದೆ ಇದೇ ನೀರು ಸೇವಿಸುತ್ತಿದ್ದಾರೆ. ಈಗಾಗಲೇ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಗ್ರಾಪಂಗೆ ದೂರಿದರೂ ಯಾವುದೇ ಕ್ರಮ ವಹಿಸುತ್ತಿಲ್ಲ. -ಸುಧಾಕರ ಗೋನಾಲ, ಗ್ರಾಮದ ಯುವಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.