ಕುಂದಾಣ ಬೆಟ್ಟ ಪ್ರವಾಸಿ ತಾಣವನ್ನಾಗಿಸಲು ಚಿಂತನೆ

ಜಿಪಂ ಸಿಇಒ ಈ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಸಲಹೆ ನೀಡಿದ್ದಾರೆ.

Team Udayavani, Jun 16, 2022, 5:36 PM IST

ಕುಂದಾಣ ಬೆಟ್ಟ ಪ್ರವಾಸಿ ತಾಣವನಾಗಿಸಲು ಚಿಂತನೆ

ದೇವನಹಳ್ಳಿ: ಕುಂದಾಣ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಜಿಪಂ ಚಿಂತನೆ ನಡೆಸಿದ್ದು, ಐತಿಹಾಸಿಕ ಬೆಟ್ಟವನ್ನು ಅಭಿವೃದ್ಧಿಗೊಳಿಸಲು ಶೀಘ್ರವೇ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಜಿಪಂ ಸಿಇಒ ರೇವಣಪ್ಪ ತಿಳಿಸಿದರು.

ತಾಲೂಕಿನ ಕುಂದಾಣ ಐತಿಹಾಸಿಕ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು, ಕುಂದಾಣ ಬೆಟ್ಟದ ತುತ್ತತುದಿಯಲ್ಲಿ ಚನ್ನಕೇಶವ ದೇವಾಲಯ, ಶ್ರೀ ಆಂಜನೇಯಸ್ವಾಮಿ ದೇವಾಲಯ ಮತ್ತು ನೀರಿನ ದೋಣಿ ಕಾಣ ಸಿಗುತ್ತದೆ.

ಶತಮಾನಗಳ ಇತಿಹಾಸ ಅಡಗಿಸಿಟ್ಟಿಕೊಂಡಿರುವ ಈ ಬೆಟ್ಟವು ಪ್ರವಾಸಿಗರಿಗೆ ಸೆಳೆಯುತ್ತಿದೆ. ಮಳೆಗಾಲ ದಲ್ಲಂತೂ ಇದರ ಸೌಂದರ್ಯ ಮತ್ತಷ್ಟು ಮೆರಗುಗೊಳಿಸುತ್ತದೆ. ಎತ್ತ ನೋಡಿದರೂ ಹಸಿರು ರಾಶಿಯನ್ನು ಹೊದ್ದು ಮಲಗಿರುವ ಬೆಟ್ಟವನ್ನು ಕಾಣಬಹುದು. ಬೆಟ್ಟದ ಮೇಲ್ಭಾಗದಲ್ಲಿ ಚಾರಣಿಗರನ್ನು ಕೈಬೀಸಿ ಕರೆಯುವ ಪ್ರಕೃತಿ ವಿಸ್ಮಯ ಈ ಬೆಟ್ಟದಲ್ಲಿದೆ ಎಂದರು.

ದೇವಾಲಯ ಪುನರ್‌ ಪ್ರತಿಷ್ಠಾಪನೆ: ಈ ಬೆಟ್ಟವನ್ನು ಅಭಿವೃದ್ಧಿಗೊಳಿಸಲು ಹಲವಾರು ಚಿಂತನೆ ಮಾಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆದು ಕುಂದಾಣ ಬೆಟ್ಟವನ್ನು ಅಭಿವೃದ್ಧಿಪಡಿಸಲು ಸೂಚನೆ ನೀಡುತ್ತೇನೆ. ಮುಜರಾಯಿ ಇಲಾಖೆಗೆ ಸೇರಿರುವ ಚನ್ನಕೇಶವಸ್ವಾಮಿ ದೇವಾಲಯ ಪುನರ್‌ ಪ್ರತಿಷ್ಠಾಪನೆ ಮಾಡಲು ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗುವುದು. ತುಮಕೂರಿನಲ್ಲಿ ಶಿಲಾ ಕಟ್ಟಡಗಳ ವಿನ್ಯಾಸದಾರರು ಇದ್ದಾರೆ. ಅವರನ್ನು ಕರೆಸಿ ಯಾವ ರೀತಿ ದೇವಾಲಯವನ್ನು ಪುನರ್‌ ಸ್ಥಾಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇನೆ ಎಂದರು.

ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಕುಂದಾಣ ಗ್ರಾಪಂನಿಂದ ಜಲಮಿಷನ್‌ ಯೋಜನೆಯಡಿಯಲ್ಲಿ ಬೆಟ್ಟಕ್ಕೆ ಪೈಪ್‌ಲೈನ್‌ ಮಾಡಲು ಹಾಗೂ ನರೇಗಾ ಯೋಜನೆಯಡಿಯಲ್ಲಿ ಸಂಜೀವಿನಿ ಶೆಡ್‌ ನಿರ್ಮಾಣ ಮಾಡಿ ನಾಲ್ಕು ಶೆಡ್‌ಗಳಲ್ಲಿ ತೆಂಗಿನಕಾಯಿ, ಪೂಜಾ ಸಾಮಗ್ರಿ, ಹೂವು ಮಾರಾಟ ಹಾಗೂ ಕಾಪಿ, ಟೀ ಅಂಗಡಿ ಒಳಗೊಂಡಂತೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಆಗಬೇಕು. ಹೆಚ್ಚಿನ ಜನರು ಬರುವಂತೆ ಮಾಡಬೇಕು. ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರವೇಶ ಶುಲ್ಕವನ್ನು ಹಾಕಬೇಕು.

ದೇವಾಲಯಕ್ಕೆ ಹತ್ತುವ ಮೆಟ್ಟಿಲುಗಳಿಗೆ ಗ್ರಿಲ್ಸ್‌ ಅಳವಡಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಬೇಕು ಎಂದರು. ಅಭಿವೃದ್ಧಿಗೆ ಸಲಹೆ: ಗ್ರಾಪಂ ಅಧ್ಯಕ್ಷ ನಾರಾಯ ಣಸ್ವಾಮಿ ಮಾತನಾಡಿ, ಕುಂದಾಣ ಬೆಟ್ಟಕ್ಕೆ ಸಾಕಷ್ಟು ಇತಿಹಾಸವಿದೆ. ಈ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಮಾಡಿದರೆ ಮತ್ತಷ್ಟು ಅಭಿವೃದ್ಧಿ ಆಗುತ್ತದೆ. ಜಿಪಂ ಸಿಇಒ ಈ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಸಲಹೆ ನೀಡಿದ್ದಾರೆ. ಕ್ರಿಯಾಯೋಜನೆಗಳನ್ನು ತಯಾರಿಸಿ ಜಿಪಂಗೆ ಕಳುಹಿಸಿ ಅಭಿವೃದ್ಧಿಗೊಳಿ ಸಲಾಗುವುದು ಎಂದರು. ಜಿಪಂ ಉಪಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ನರಸಿಂಹ, ಪಿಡಿಒ ಶಶಿಧರ್‌, ತಾಪಂ ಕಚೇರಿ ಪ್ರಕಾಶ್‌, ಮುಖಂಡ ನವೀನ್‌ ಹಾಗೂ ಮತ್ತಿತರರು ಇದ್ದರು.

ಕ್ರಿಯಾಯೋಜನೆ ರೂಪಿಸಲು ಜಿಪಂ ಸಿಇಒ ಸೂಚನೆ
ಜಿಪಂ ಉಪವಿಭಾಗದ ಎಂಜಿನಿಯರ್‌ ವಿಭಾಗಕ್ಕೆ ಬೆಟ್ಟದ ಅಭಿವೃದ್ಧಿಗಾಗಿ ಕ್ರಿಯಾಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ. ಗ್ರಾಪಂನಿಂದಾಗುವ ಎಲ್ಲಾ ಕೆಲಸಗಳನ್ನು ಮಾಡಲು ಅನುಮತಿಯನ್ನು ನೀಡುತ್ತೇನೆ. ಕ್ರಿಯಾಯೋಜನೆ ಮಾಡಿ ಕಳುಹಿಸಿ ಕೊಡಿ. ಈ ಬೆಟ್ಟವು ಚಾರಣಿಯರ ಬೆಟ್ಟವಾಗಿದೆ. ಈ ಬೆಟ್ಟವು ಹೊಯ್ಸಳರ ಕಾಲದಲ್ಲಿ ಚನ್ನಕೇಶವಸ್ವಾಮಿ ದೇವಾಲಯ ನಿರ್ಮಾಣವಾಗಿರುವುದು ಕಂಡು ಬರುತ್ತಿದೆ. ಹಳೆಬೀಡು, ಇತರೆ ಕಡೆಗಳಲ್ಲಿ ಚನ್ನಕೇಶವ ಸ್ವಾಮಿಯನ್ನು ನೋಡುತ್ತೇವೆ ಎಂದು ಜಿಪಂ ಸಿಇಒ ರೇವಣಪ್ಪ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.