14 ವರ್ಷಗಳಲ್ಲೇ ಗರಿಷ್ಠ: ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಠೇವಣಿ ಹಣ 30,500 ಕೋಟಿಗೆ ಏರಿಕೆ

ಸತತ ಎರಡು ವರ್ಷಗಳಿಂದ ಸ್ವಿಸ್ ಬ್ಯಾಂಕ್ ನಲ್ಲಿನ ಠೇವಣಿ ಮೊತ್ತ ಹೆಚ್ಚಳವಾಗುತ್ತಿದೆ.

Team Udayavani, Jun 17, 2022, 10:32 AM IST

14 ವರ್ಷಗಳಲ್ಲೇ ಗರಿಷ್ಠ: ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಠೇವಣಿ ಹಣ 30,500 ಕೋಟಿಗೆ ಏರಿಕೆ

ಜ್ಯುರಿಚ್: ಸ್ವಿಜರ್ಲೆಂಡಿನಲ್ಲಿರುವ ಬ್ಯಾಂಕ್ ಗಳಲ್ಲಿ ಭಾರತೀಯರು ಹಾಗೂ ಭಾರತೀಯ ಮೂಲದ ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ 2021ರಲ್ಲಿ ಬರೋಬ್ಬರಿ 3.83 ಬಿಲಿಯನ್ ಸ್ವಿಸ್ ಫ್ರಾಂಕ್ ಗಳಿಗೆ (ಅಂದಾಜು 30,500 ಕೋಟಿಗೂ ಅಧಿಕ) ಏರಿಕೆಯಾಗಿದ್ದು, ಇದು ಕಳೆದ 14 ವರ್ಷಗಳಲ್ಲಿನ ಗರಿಷ್ಠ ಪ್ರಮಾಣದ್ದಾಗಿದೆ ಎಂದು ಸ್ವಿಸ್ ಬ್ಯಾಂಕ್ ನ ವಾರ್ಷಿಕ ವರದಿ ತಿಳಿಸಿದೆ.

ಇದನ್ನೂ ಓದಿ:ಚಾರ್ಲಿ ಎಂಬ ಬೂಸ್ಟರ್‌ ಡೋಸ್‌: ಮತ್ತೆ ಥಿಯೇಟರ್‌ನತ್ತ ಜನ ಜನ ಕಾಂಚಾಣ

ಸ್ವಿಸ್ ಬ್ಯಾಂಕ್ ಗ್ರಾಹಕರ ಠೇವಣಿ ಮೊತ್ತ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿರುವುದಾಗಿ ಸ್ವಿಸ್ ಸೆಂಟ್ರಲ್ ಬ್ಯಾಂಕ್ ವರದಿ ವಿವರಿಸಿದೆ. 2020ರ ಅಂತ್ಯದ ವೇಳೆ ಭಾರತೀಯ ಗ್ರಾಹಕರು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಿದ ಠೇವಣಿ ಮೊತ್ತ 20,700 ಕೋಟಿಯಷ್ಟಿತ್ತು. ಸತತ ಎರಡು ವರ್ಷಗಳಿಂದ ಸ್ವಿಸ್ ಬ್ಯಾಂಕ್ ನಲ್ಲಿನ ಠೇವಣಿ ಮೊತ್ತ ಹೆಚ್ಚಳವಾಗುತ್ತಿದೆ.

ಇದಲ್ಲದೇ ಭಾರತೀಯ ಗ್ರಾಹಕರ ಉಳಿತಾಯ ಅಥವಾ ಠೇವಣಿ ಖಾತೆಯಲ್ಲಿರುವ ಮೊತ್ತವು ಏಳು ವರ್ಷಗಳಲ್ಲಿ ಗರಿಷ್ಠ ಮೊತ್ತವಾದ 4,800 ಕೋಟಿ ರೂಪಾಯಿಗೆ ಏರಿಕೆಯಾಗಿದೆ. 2006ರಲ್ಲಿ ಸ್ವಿಸ್ ಖಾತೆಯಲ್ಲಿ ಭಾರತೀಯರ ಹಣದ ಮೊತ್ತ 50,000 ಕೋಟಿ ರೂಪಾಯಿಯಷ್ಟಿತ್ತು.

15.61 ಸಾವಿರ ಕೋಟಿ ರೂಪಾಯಿಗಳಷ್ಟು ಮೌಲ್ಯದ ಬಾಂಡ್, ಭದ್ರತೆಗಳನ್ನು ಭಾರತೀಯ ಗ್ರಾಹಕರ ಹೆಸರಿನಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಇಡಲಾಗಿದೆ. 2019ರಲ್ಲಿ ಠೇವಣಿ, ಭದ್ರತೆ ಸೇರಿದಂತೆ ಹಣದ ಮೊತ್ತ ಕುಸಿದಿದ್ದರೂ ಕೂಡಾ, 2020ರಲ್ಲಿ ಗ್ರಾಹಕರ ಠೇವಣಿ ಮೊತ್ತದಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿತ್ತು. ಆದರೆ 2021ರಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿರುವುದಾಗಿ ವರದಿ ವಿವರಿಸಿದೆ.

ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರು ಇಟ್ಟಿರುವ ಠೇವಣಿ ಹಣವನ್ನು ಕಪ್ಪು ಹಣ ಎಂಬಂತೆ ಬಿಂಬಿಸಬಾರದು ಎಂದು ಸ್ವಿಸ್ ಬ್ಯಾಂಕ್ ವರದಿಯಲ್ಲಿ ತಿಳಿಸಿದೆ. ಭಾರತೀಯರು, ಅನಿವಾಸಿ ಭಾರತೀಯರು ಬೇರೆ ದೇಶಗಳ ಮೂಲಕ ಸ್ವಿಸ್ ಬ್ಯಾಂಕ್ ಗಳಲ್ಲಿ ಇರಿಸಿರುವ ಠೇವಣಿ ಮೊತ್ತ ಇದರಲ್ಲಿ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.