ಯಕ್ಸಂಬಾ ಈಗ ರಾಜಕೀಯ ಶಕ್ತಿ ಕೇಂದ್ರ

ಒಂದೇ ಪಟ rಣದ ಇಬ್ಬರು ಶಾಸಕರು, ಓರ್ವ ಸಂಸದ, ಓರ್ವ ವಿಧಾನ ಪರಿಷತ್‌ ಸದಸ್ಯ

Team Udayavani, Jun 17, 2022, 11:37 AM IST

5

ಚಿಕ್ಕೋಡಿ: ಗಡಿ ಭಾಗದ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣವು ಈಗ ರಾಜಕೀಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ. ಈಗಾಗಲೇ ಪಟ್ಟಣದಲ್ಲಿ ಇಬ್ಬರು ಶಾಸಕರು ಮತ್ತು ಓರ್ವ ಸಂಸದರು ಇದ್ದರು. ಈಗ ವಿಧಾನ ಪರಿಷತ್‌ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ ಸೇರಿ ನಾಲ್ಕು ಜನ ಪ್ರಭಾವಿ ನಾಯಕರು ಒಂದೇ ಪಟ್ಟಣದವರಾಗಿದ್ದು ವಿಶೇಷವಾಗಿದೆ.

ಚಿಕ್ಕೋಡಿ ನಗರದಿಂದ 10 ಕಿ.ಮೀ. ದೂರದಲ್ಲಿರುವ ಯಕ್ಸಂಬಾ ಪಟ್ಟಣ ಶೈಕ್ಷಣಿಕ, ಸಾಂಸ್ಕೃತಿಕ ಬೆಳವಣಿಗೆ ಜತೆಗೆ ರಾಜಕೀಯವಾಗಿ ಮೇಲುಗೈ ಸಾಧಿಸಿದೆ. ಬಹುಭಾಷಿಕರು ಇದ್ದರೂ ಸಹ ಯಕ್ಸಂಬಾ ಜನ ಕನ್ನಡವನ್ನು ಹೆಚ್ಚು ಪ್ರೀತಿಸುತ್ತಾರೆ. ಇಂತಹ ಅಪ್ಪಟ್ಟ ಗಡಿನಾಡಿನ ಪಟ್ಟಣದಲ್ಲಿ ಮೂವರು ಶಾಸಕರು ಮತ್ತು ಓರ್ವ ಸಂಸದರು ಇರುವುದು ಇತಿಹಾಸ.

ಯಕ್ಸಂಬಾ ಪಟ್ಟಣದ ಗಣೇಶ ಪ್ರಕಾಶ ಹುಕ್ಕೇರಿ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಶಾಸಕರಾಗಿದ್ದು, ಅಣ್ಣಾಸಾಹೇಬ ಶಂಕರ ಜೊಲ್ಲೆ ಸಂಸದ ಹಾಗೂ ಈಗ ಪ್ರಕಾಶ ಬಾಬಣ್ಣ ಹುಕ್ಕೇರಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಜನರು ಪ್ರತಿನಿಧಿಸುವ ಕ್ಷೇತ್ರ ಮತ್ತು ಪಕ್ಷ ಬೇರೆ ಬೇರೆಯಾದರೂ ಒಂದೇ ಪಟ್ಟಣದವರಾಗಿರುವುದು ವಿಶೇಷ. ಅದರಲ್ಲಿ ಶಶಿಕಲಾ ಜೊಲ್ಲೆ ಸಚಿವರೂ ಆಗಿದ್ದಾರೆ.

ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಶಾಸಕರಾಗಿರುವ ಗಣೇಶ ಪ್ರಕಾಶ ಹುಕ್ಕೇರಿ, ನಿಪ್ಪಾಣಿ ಕ್ಷೇತ್ರ ಪ್ರತಿನಿಧಿಸುವ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಲೋಕಸಭೆ ಸದಸ್ಯ ಅಣ್ಣಾಸಾಹೇಬ ಜೊಲ್ಲೆ, ಬುಧವಾರಷ್ಟೆ ನೂತನವಾಗಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ ನಾಲ್ವರೂ ಒಂದೇ ಪಟ್ಟಣದವರಾಗಿದ್ದರಿಂದ ಯಕ್ಸಂಬಾ ಪಟ್ಟಣ ಇಡೀ ರಾಜ್ಯದಲ್ಲಿ ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಜಾರಕಿಹೊಳಿ ಮನೆತನದಲ್ಲಿ ನಾಲ್ಕು ಜನ ಶಾಸಕರಾಗಿ ಆಯ್ಕೆಯಾಗಿದ್ದು ಇತಿಹಾಸವಾಗಿತ್ತು. ಈಗ ಇದೇ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯಕ್ಸಂಬಾ ಪಟ್ಟಣದಲ್ಲಿ ನಾಲ್ವರು ಪ್ರಭಾವಿ ನಾಯಕರಿಗೆ ಜನಾಶಿರ್ವಾದ ಲಭಿಸಿರುವುದು ಯಕ್ಸಂಬಾ ಪಟ್ಟಣದ ಗರಿಮೆ ಹಿರಿಮೆ ಹೆಚ್ಚಿಸಿದೆ.

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.