ಬದುಕುವ ಕಲೆ ಕಲಿಸಿದೆ ವೀರೇಶ್ವರ ಪುಣ್ಯಾಶ್ರಮ

ಕತ್ತಲನ್ನು ಪ್ರೀತಿಸಿ ಅಂಧ-ಅನಾಥ ಮಕ್ಕಳಿಗೆ ಬೆಳಕು ನೀಡಿದ ಉಭಯ ಶ್ರೀಗಳು: ಉಜ್ಜಯಿನಿ ಜಗದ್ಗುರು

Team Udayavani, Jun 17, 2022, 1:36 PM IST

12

ಗದಗ: ಬಹಳಷ್ಟು ಜನರು ಬೆಳಕನ್ನು ಪ್ರೀತಿ ಮಾಡುತ್ತಾರೆ. ಆದರೆ, ಉಭಯ ಶ್ರೀಗಳು ಕತ್ತಲನ್ನು ಪ್ರೀತಿ ಮಾಡಿ ಅಂಧ-ಅನಾಥ ಮಕ್ಕಳಿಗೆ ಬೆಳಕು ನೀಡಿದ್ದಾರೆ ಎಂದು ಉಜ್ಜಯಿನಿ ಪೀಠದ ಜ|ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಶ್ರೀಗಳು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ 78ನೇ ಪುಣ್ಯಸ್ಮರಣೋತ್ಸವ, ಪದ್ಮಭೂಷಣ ಡಾ|ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 12ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ ತ್ಯಾಗಿ, ಯೋಗಿ ಹಾಗೂ ಭೋಗಿಗಳಿದ್ದರೂ ಜನರು ತ್ಯಾಗಿ, ಯೋಗಿಗಳನ್ನು ಮರೆತಿಲ್ಲ. ಆದರೆ, ಭೋಗಿಗಳನ್ನು ಮರೆತಿದ್ದಾರೆ. ಭಗವಂತ ನೀಡಿದ ಕಷ್ಟಗಳಿಗೆ ಸಾಕಷ್ಟು ಜನರು ನರಳುತ್ತಾರೆ. ಉಭಯ ಗುರುಗಳಾದ ಪಂಡಿತ ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಕವಿ ಗವಾಯಿಗಳು ತಮ್ಮ ಅಂಧತ್ವವನ್ನು ಮರೆತು ನಕಾರಾತ್ಮಕವಾದ ಜೀವನವನ್ನು ಸಕಾರಾತ್ಮಕವಾಗಿ ಬದಲಾಯಿಸಿದ ಧೀಮಂತ ಉಭಯ ಗುರುಗಳಾಗಿದ್ದಾರೆ ಎಂದರು.

ಉಭಯ ಗುರುಗಳು ಅಂಗ ಪೂಜೆ ಮಾಡದೆ, ಲಿಂಗ, ಸಂಗೀತ, ಕಲೆಗಳನ್ನು ಪೂಜೆ ಮಾಡಿ ಅಂಧ-ಅನಾಥರಿಗೆ ದಾರಿ ತೋರಿಸುವ ಕೆಲಸ ಮಾಡಿದ್ದಾರೆ. ಬಹಳ ವರ್ಷಗಳ ನಂತರ ಪಂಚಾಕ್ಷರ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ, ನೂತನವಾಗಿ ನಿರ್ಮಾಣಗೊಂಡ ಗಡ್ಡಿ ತೇರಿನ ರಥೋತ್ಸವ ಜರುಗುತ್ತಿರುವುದು ಸಂತಸ ತಂದಿದೆ. ಉಭಯ ಗುರುಗಳ ಕನಸನ್ನು ಕಲ್ಲಯ್ಯಜ್ಜನವರು ನನಸಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸೂಡಿ ಜುಕ್ತಿಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ಯಲಬುರ್ಗಾದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಟ್ನೂರ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯರು, ಮೈನಳ್ಳಿಯ ಸಿದ್ಧೇಶ್ವರ ಶಿವಾಚಾರ್ಯರು, ಸವಣೂರಿನ ಚನ್ನಬಸವ ಶ್ರೀಗಳು, ಶಿಗ್ಗಾವಿಯ ಸಂಗನಬಸವ ಶ್ರೀಗಳು, ಬೈಲಹೊಂಗಲದ ಡಾ| ಮಹಾಂತಯ್ಯ ಸ್ವಾಮಿಗಳು ಆರಾದ್ರಿಮಠ, ಅಡವೀಂದ್ರಮಠದ ಮಹೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

ಪಂ| ರಾಜಗುರು ಗುರುಸ್ವಾಮಿ ಕಲಕೇರಿ, ಚಂದ್ರು ಬಾಳೀಹಳ್ಳಿಮಠ, ವೀರೇಶ ಕೂಗು, ಡಾ| ಸಂಗಮೇಶ್‌ ಕೊಳ್ಳಿಯವರ, ನಿಂಗಪ್ಪ ಕೆಂಗಾರ, ವಸಂತಗೌಡ್ರು ಪೋಲಿಸ್‌ಪಾಟೀಲ, ಅನೀಲ ಅಬ್ಬಿಗೇರಿ, ಪ್ರಶಾಂತ ಬಿ. ಶಾಬಾದಿಮಠ, ಜಯಕುಮಾರ ಹಿರೇಮಠ, ವಿ.ಎಸ್‌. ಮಾಳೇಕೊಪ್ಪಮಠ, ಪಿ.ಸಿ.ಹಿರೇಮಠ, ರಾಜಣ್ಣ ಹಂಗರಿಗಿ, ನಾಗಪ್ಪ ಚಿನಗೂಡಿ, ಪ್ರಶಾಂತ ನಾಯ್ಕರ ಅವರನ್ನು ಸನ್ಮಾನಿಸಲಾಯಿತು.

ಶ್ರೀಮಠದ ವ್ಯವಸ್ಥಾಪಕ ಹೇಮರಾಜ ಶಾಸ್ತ್ರೀಜಿ ಹೆಡಿಗ್ಗೊಂಡ ಉಪಸ್ಥಿತರಿದ್ದರು. ಇದೇ ವೇಳೆ ಗದುಗಿನ ಗುರುವರ್ಯ ವಿಡಿಯೋ ಸಿಡಿ ಹಾಗೂ ಮತ್ತೂಮ್ಮೆ ಹುಟ್ಟಿ ಬಾ ಗುರು ಪುಟ್ಟರಾಜ ಸಿಡಿ ಬಿಡುಗಡೆ ಮಾಡಲಾಯಿತು.

ಡಾ|ಪಂ|ಪುಟ್ಟರಾಜ ಕವಿಗವಾಯಿಗಳ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿಗಳು ವೇದಘೋಷ ಮಾಡಿದರು. ಮಲ್ಲಯ್ಯಸ್ವಾಮಿ ಹಿರೇಮಠ ಪ್ರಾರ್ಥಿಸಿ, ನಾಗಯ್ಯಶಾಸ್ತ್ರಿ ವಡಗೇರ ನಿರೂಪಿಸಿ, ವಿರೇಶ ಕೂಗು ಸ್ವಾಗತಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.