ಬಿಜೆಪಿ ಕಚೇರಿಯಲ್ಲಿ ಭದ್ರತೆಗೆ ಅಗ್ನಿವೀರರಿಗೆ ಆದ್ಯತೆ : ವಿಜಯವರ್ಗಿಯಾ ವಿವಾದ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆ ವಿರುದ್ಧ ಆಕ್ರೋಶ ; ವರುಣ್ ಗಾಂಧಿ ತಿರುಗೇಟು

Team Udayavani, Jun 19, 2022, 6:30 PM IST

1-fsf

ನವದೆಹಲಿ: ಬಿಜೆಪಿ ಕಚೇರಿಯಲ್ಲಿ ಅಗ್ನಿವೀರರನ್ನು ಭದ್ರತೆಗಾಗಿ ನೇಮಿಸಿಕೊಳ್ಳಲು ನಾನು ಆದ್ಯತೆ ನೀಡುತ್ತೇನೆ, ನೀವು ಕೂಡ ಮಾಡಬಹುದು, ಸೇನಾ ಯೋಧರ ಮೇಲೆ ಜನರಿಗೆ ನಂಬಿಕೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರವಾಗಿ ಟೀಕೆಗಳಿಗೆ ಗುರಿಯಾಗಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೊಸತೊಂದು ವಿವಾದದಲ್ಲಿ ಸಿಲುಕಿದ್ದಾರೆ.

ಮಹಾನ್ ಸೇನೆ, ಅವರ ಶೌರ್ಯವು ಇಡೀ ಜಗತ್ತಿನಲ್ಲಿ ಅನುರಣಿಸುತ್ತದೆ, ರಾಜಕೀಯ ಕಚೇರಿಯ ‘ಚೌಕಿದಾರಿ’ ಮಾಡಲು ಭಾರತೀಯ ಸೈನಿಕನಿಗೆ ಆಹ್ವಾನ, ಅದನ್ನು ನೀಡಿದ ವ್ಯಕ್ತಿಗೆ ಅಭಿನಂದನೆಗಳು. ಭಾರತೀಯ ಸೇನೆಯು ತಾಯಿ ಭಾರತಿಯ ಸೇವೆಯ ಮಾಧ್ಯಮವಾಗಿದೆ, ಕೇವಲ ಉದ್ಯೋಗವಲ್ಲ. ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ತೀವ್ರ ವಿರೋಧ ವ್ಯಕ್ತ ಪಡಿಸಿ, ಆಕ್ರೋಶ ಹೊರ ಹಾಕಿವೆ.

ಅಗ್ನಿಪಥ್ ಯೋಜನೆಯಿಂದ ಹೊರಬಂದ ಅಗ್ನಿವೀರರು ಖಂಡಿತವಾಗಿಯೂ ತರಬೇತಿ ಮತ್ತು ಕರ್ತವ್ಯಕ್ಕೆ ಬದ್ಧರಾಗುತ್ತಾರೆ, ಸೈನ್ಯದಲ್ಲಿ ಸೇವೆಯನ್ನು ಪೂರ್ಣಗೊಳಿಸಿದ ನಂತರ ಅವರು ಯಾವ ಕ್ಷೇತ್ರಕ್ಕೆ ಹೋಗುತ್ತಾರೆಯೋ ಅವರ ಶ್ರೇಷ್ಠತೆಯನ್ನು ಬಳಸಿಕೊಳ್ಳಲಾಗುತ್ತದೆ. ಅದು ಸ್ಪಷ್ಟವಾಗಿ ನಾನು ಅರ್ಥಮಾಡಿಕೊಂಡಿದ್ದೇನೆ. ಟೂಲ್‌ಕಿಟ್‌ಗೆ ಸಂಬಂಧಿಸಿದವರು ನನ್ನ ಹೇಳಿಕೆಯನ್ನು ತಿರುಚುವ ಮೂಲಕ ವೀರ ಯೋಧರನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದಾರೆ.ಇದು ದೇಶದ ಸೈನಿಕರಿಗೆ ಅವಮಾನ ಮಾಡಿದಂತಾಗುತ್ತದೆ. ವೀರ ಯೋಧರ ವಿರುದ್ಧದ ಈ ಟೂಲ್‌ಕಿಟ್ ಗ್ಯಾಂಗ್‌ನ ಷಡ್ಯಂತ್ರಗಳ ಬಗ್ಗೆ ರಾಷ್ಟ್ರಕ್ಕೆ ಚೆನ್ನಾಗಿ ತಿಳಿದಿದೆ ಎಂದು ಟೀಕೆಗಳ ಕುರಿತಾಗಿ ಕೈಲಾಶ್ ವಿಜಯವರ್ಗಿಯಾ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಅಗ್ನಿವೀರ್ ನೋಂದಣಿ ಜೂನ್ 24 ರಿಂದ; ಬೆಂಕಿ ಹಚ್ಚುವವರಿಗೆ ಜಾಗವಿಲ್ಲ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.