![8-belthangady](https://www.udayavani.com/wp-content/uploads/2024/12/8-belthangady-415x249.jpg)
ಪ್ರಧಾನಿ ಪ್ರವಾಸ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಖಂಡನೀಯ: ಡಿ.ಕೆ. ಶಿವಕುಮಾರ್
Team Udayavani, Jun 20, 2022, 2:26 PM IST
![ಪ್ರಧಾನಿ ಪ್ರವಾಸ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಖಂಡನೀಯ: ಡಿ.ಕೆ. ಶಿವಕುಮಾರ್](https://www.udayavani.com/wp-content/uploads/2022/06/dkshi-6-620x342.jpg)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ಇದನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
‘ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಅವರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ ನಡೆಸುವುದಾದರೆ ಅದನ್ನು ಕ್ರಮಬದ್ಧ, ಕಾನೂನುಬದ್ಧ ರೀತಿಯಲ್ಲಿ ಮಾಡುತ್ತಾರೆ. ಆದರೆ ಸರ್ಕಾರ ಯಾಕೆ ಇಷ್ಟು ಚಿಂತಿತವಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಬಾಗುವ ನಾಗರೀಕರು. ಬೆಂಗಳೂರಿನ ವಿದ್ಯಾರ್ಥಿಗಳು ದೇಶಕ್ಕೆ ಕೀರ್ತಿ ತರುವಂತಹ ಪ್ರತಿಭಾವಂತರು. ಅವರ ವ್ಯಾಸಂಗಕ್ಕೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ನಮ್ಮ ವಿದ್ಯಾರ್ಥಿಗಳನ್ನು ಅವರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.
ಇದನ್ನೂ ಓದಿ:ರೈತರಿಗೆ ಗೊಬ್ಬರ ಕೊರತೆ ಆದಲ್ಲಿ ಅಧಿಕಾರಿಗಳ ತಲೆ ದಂಡ: ಕೇಂದ್ರ ಸಚಿವ ಖೂಬಾ ಎಚ್ಚರಿಕೆ
ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ, ‘ಪ್ರತಿಭಟನೆ ಮಾಡುವ ಹಕ್ಕು ನಮಗಿದೆ. ಕೇಂದ್ರ ಸರ್ಕಾರ ಕಾನೂನನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದು, ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ಈ ಸಂಸ್ಥೆಯ ಮಾಲೀಕತ್ವವನ್ನು ಘೋಷಿಸಿಕೊಂಡಿಲ್ಲ. ಈ ಸಂಸ್ಥೆ ಲಾಭಯೇತರ ಸಂಸ್ಥೆಯಾಗಿದ್ದು, ಸ್ವಾತಂತ್ರ್ಯದ ಸಮಯದಲ್ಲಿ ಹಾಗೂ ನಂತರ ಕಾಂಗ್ರೆಸ್ ಧ್ವನಿಯಾಗಲು ನೆಹರೂ ಅವರು ಈ ಪತ್ರಿಕೆಯನ್ನು ಆರಂಭಿಸಿದ್ದು, ನಾವು ಅದನ್ನು ಉಳಿಸಿಕೊಂಡು ಹೋಗುತ್ತಿದ್ದೇವೆ’ ಎಂದು ಡಿಕೆ ಶಿವಕುಮಾರ್ ಉತ್ತರಿಸಿದರು.
ಟಾಪ್ ನ್ಯೂಸ್
![8-belthangady](https://www.udayavani.com/wp-content/uploads/2024/12/8-belthangady-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.