ಪಿಂಚಣಿ ಸೌಲಭ್ಯಕ್ಕಾಗಿ ಅಧಿಕಾರಿಯನ್ನು ಕಾದು ಸುಸ್ತಾಗಿ ಕುಸಿದು ಬಿದ್ದ ವೃದ್ಧೆ :ಜನರ ಆಕ್ರೋಶ
Team Udayavani, Jun 20, 2022, 6:18 PM IST
ಹೊಸನಗರ: ಸಾಮಾಜಿಕ ಭದ್ರತಾ ಪಿಂಚಣಿ ಸೌಲಭ್ಯ ಮಾಡಲು ಬಂದು ಅಧಿಕಾರಿಗಾಗಿ ಕಾದು ಸುಸ್ತಾದ ವೃದ್ಧೆಯೊಬ್ಬರು ಕುಸಿದು ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಿಗ್ಗೆ 9.30ರ ಸುಮಾರಿಗೆ ಪಿಂಚಣಿ ಸೌಲಭ್ಯ ಮಾಡಿಸಲು ನಿಟ್ಟೂರು ಗ್ರಾಮ ಲೆಕ್ಕಿಗರ ಕಚೇರಿಗೆ ವೃದ್ಧೆ ಸಾಧಮ್ಮ ಬಂದಿದ್ದಾರೆ. ಅಲ್ಲದೆ ಇದಕ್ಕಾಗಿ ಹೆಬ್ಬಿಗೆಯಿಂದ ನಡೆದುಕೊಂಡೇ ಬಂದಿದ್ದರು. ಆದರೆ ಗ್ರಾಮಲೆಕ್ಕಿಗ ಮಂಜಪ್ಪ ಮಧ್ಯಾಹ್ನವಾದರೂ ಬಾರದ ಕಾರಣ ಕಾದು ಕಾದು ಸುಸ್ತಾದ ಸಾದಮ್ಮ ಅಲ್ಲೆ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳೀಯರು ವೃದ್ಧೆಯನ್ನು ಕೂಡಲೇ ನಿಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.
ಗ್ರಾಮಲೆಕ್ಕಿಗರ ವರ್ತನೆ ಬಗ್ಗೆ ಆಕ್ರೋಶಗೊಂಡ ಜನರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ತಹಶೀಲ್ದಾರ್ ವಿ.ಎಸ್.ರಾಜೀವ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಗ್ರಾಮ ಲೆಕ್ಕಿಗ ಮಂಜಪ್ಪರನ್ನು ಬೇರೆಡೆ ವರ್ಗಾಯಿಸುವ ಮೂಲಕ ತಹಶೀಲ್ದಾರ್ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಪದವೀಧರರು ಸಮಾಜಮುಖಿ ಚಿಂತಕರಾಗಲಿ; ಪ್ರೊ.ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.