ವಿಶ್ವಕಪ್‌ ಹೀರೋ ಮಹಾನಾಮ ಮಾನವೀಯತೆ: ಪೆಟ್ರೋಲ್‌ ಗ್ರಾಹಕರಿಗೆ ಬಂಕ್‌ನಲ್ಲಿ ಚಹಾ,ಬನ್‌ ವಿತರಣೆ


Team Udayavani, Jun 21, 2022, 6:50 AM IST

ವಿಶ್ವಕಪ್‌ ಹೀರೋ ಮಹಾನಾಮ ಮಾನವೀಯತೆ: ಪೆಟ್ರೋಲ್‌ ಗ್ರಾಹಕರಿಗೆ ಬಂಕ್‌ನಲ್ಲಿ ಚಹಾ,ಬನ್‌ ವಿತರಣೆ

ಕೊಲಂಬೊ: ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಇಂಥ ಸಂದರ್ಭದಲ್ಲಿ ಕ್ರಿಕೆಟಿಗರು ನೆರವಿಗೆ ಧಾವಿಸಬೇಕು ಎಂಬ ಆಶಯ ಹೊತ್ತ ಮಾಜಿ ಆಟಗಾರ, ಲಂಕೆಯ 1996ರ ವಿಶ್ವಕಪ್‌ ಹೀರೋ ರೋಶನ್‌ ಮಹಾನಾಮ ಸ್ವತಃ ಅಖಾಡಕ್ಕೆ ಧುಮುಕಿದ್ದಾರೆ.

ಪೆಟ್ರೋಲ್‌ ಬಂಕ್‌ಗಳಲ್ಲಿ ಮೈಲುದ್ದದ ಸರತಿ ಸಾಲಿನಲ್ಲಿ ನಿಂತ ಗ್ರಾಹಕರಿಗೆ ಚಹಾ, ಬನ್‌ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಈ ಚಿತ್ರಗಳನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

“ದಿನದಿಂದ ದಿನಕ್ಕೆ ದೇಶದ ಪೆಟ್ರೋಲ್‌ ಬಂಕ್‌ಗಳಲ್ಲಿ ಗ್ರಾಹಕರ ಕ್ಯೂ ಬೆಳೆಯುತ್ತಿದೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿದೆ. ಇದರಿಂದ ಗ್ರಾಹಕರ ಆರೋಗ್ಯ ಹದಗೆಡುತ್ತಿದೆ. ಹೀಗೆ ಸರತಿ ಸಾಲಲ್ಲಿ ನಿಂತವರಿಗೆ ದಯವಿಟ್ಟು ಸಹಾಯ ಮಾಡಿ’ ಎಂದು ಮಹಾನಾಮ ಟ್ವೀಟ್‌ ಮಾಡಿದ್ದರು. ಇದೀಗ ಸ್ವತಃ ಅವರೇ ಈ ಕೆಲಸದ ಮೂಲಕ ಮಾದರಿಯಾಗಿದ್ದಾರೆ.

ವಿಜೇರಾಮ ಮಠ ಹಾಗೂ ವಾರ್ಡ್‌ಪ್ಲೇಸ್‌ ಸುತ್ತಮುತ್ತಲಿನ ಪೆಟ್ರೋಲ್‌ ಬಂಕ್‌ಗಳಲ್ಲಿ ಮಹಾಮಾನ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸಿದ ಈ ಮಾಜಿ ಕ್ರಿಕೆಟಿಗನೇ ನಿಜವಾದ ಹೀರೋ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತೈಲವನ್ನು ಆಮದು ಮಾಡಿಕೊಳ್ಳಲು ಶ್ರೀಲಂಕಾ ಹೆಣಗಾಡುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ತೈಲ ದಾಸ್ತಾನು ಮುಗಿಯುವ ಸಂಭವವಿದೆ. ಹೀಗಾಗಿ ಜನರು ಸರತಿ ಸಾಲಲ್ಲಿ ನಿಂತು ಪೆಟ್ರೋಲ್‌, ಡೀಸೆಲ್‌ ಖರೀದಿಸುತ್ತಿದ್ದಾರೆ.

ಓಪನರ್‌ ರೋಶನ್‌ ಮಹಾನಾಮ 52 ಟೆಸ್ಟ್‌ ಹಾಗೂ 213 ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.