![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 22, 2022, 6:45 AM IST
ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್ ಕೂಟದ ಫೈನಲ್ ಹೋರಾಟವು ಬುಧ ವಾರದಿಂದ ಬೆಂಗಳೂರಿನಲ್ಲಿ ಆರಂಭವಾ ಗಲಿದೆ. ಬಲಿಷ್ಠ ಮುಂಬಯಿ ತಂಡವು 42ನೇ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಮಧ್ಯ ಪ್ರದೇಶ ತಂಡವನ್ನು ಎದುರಿಸಲಿದೆ.
ತಂಡವು ಪ್ರಶಸ್ತಿ ಗೆಲ್ಲುವುದನ್ನು ಎದುರು ನೋಡುತ್ತಿದೆ. ಶರಣಾಗುವ ಅವಕಾಶವೇ ಇಲ್ಲ ಎಂದು ಮಧ್ಯಪ್ರದೇಶ ತಂಡದ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ಹೇಳಿದ್ದಾರೆ. ಆದರೆ ಅಮೋಲ್ ಮಜುಮಾªರ್ ಮಾರ್ಗದರ್ಶನ ಪಡೆದ ಮುಂಬಯಿ ತಂಡವು ಈ ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ್ದು ಎಲ್ಲ ಪಂದ್ಯಗಳಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಹೀಗಾಗಿ ಮುಂಬಯಿ ಸುಲಭವಾಗಿ ಶರಣಾಗುವ ಪ್ರಶ್ನೆಯೇ ಇಲ್ಲವೆಂದು ಹೇಳಬಹುದು.
ತಂಡದ ಆಟಗಾರರ ಸಾಮರ್ಥ್ಯವನ್ನು ಗಮನಿಸಿದರೆ ಮುಂಬಯಿ ತಂಡವೇ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವೆನಿಸಿದೆ. ನಾಯಕ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಅಮೋಘ ಫಾರ್ಮ್ ನಲ್ಲಿದ್ದಾರೆ,
ಸರ್ಫರಾಜ್ ಖಾನ್ ಕೇವಲ 5 ಪಂದ್ಯಗಳಲ್ಲಿ 800 ಪ್ಲಸ್ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಕ್ವಾರ್ಟರ್ಫೈನಲ್ ಮತ್ತು ಸೆಮಿಫೈನಲ್ನ ನಾಲ್ಕು ಇನ್ನಿಂಗ್ಸ್ಗಳಲ್ಲಿ ಮೂರು ಶತಕ ಬಾರಿಸಿದ ಸಾಧಕರಾಗಿದ್ದಾರೆ. ಅವರು ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಉತ್ತಮ ನಿರ್ವಹಣೆಯನ್ನೂ ನೀಡಿದ್ದರು. ಪೃಥ್ವಿ ಶಾ, ಅರ್ಮಾನ್ ಜಾಫರ್, ಸುವೇದ್ ಪಾರ್ಕರ್ ಇಷ್ಟರವರೆಗಿನ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದ್ದಾರೆ.
ಮುಂಬಯಿಯ ಬ್ಯಾಟಿಂಗ್ ಬಲಿಷ್ಠವಾಗಿದ್ದು ಶ್ರೇಷ್ಠ ನಿರ್ವಹಣೆ ನೀಡುವ ಹಲವು ಆಟಗಾರರು ತಂಡದಲ್ಲಿದ್ದಾರೆ. ಆದರೆ ತಂಡದ ಬೌಲಿಂಗ್ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಶಾಮ್ಸ್ ಮುಲಾನಿ ಮತ್ತು ಆಫ್ ಸ್ಪಿನ್ನರ್ ತನುಷ್ ಕೋಟ್ಯಾನ್ ಅವರ ನಿರ್ವಹಣೆ ಉತ್ತಮವಾಗಿಲ್ಲ.
ಮಧ್ಯ ಪ್ರದೇಶ ಇತ್ತೀಚೆಗಿನ ದಿನಗಳಲ್ಲಿ ಹೆಚ್ಚು ಸುಧಾರಿತ ತಂಡಗಳಲ್ಲಿ ಒಂದಾಗಿದೆ ಮತ್ತು ಪಂಡಿತ್ ಅವರ ಮಾರ್ಗದರ್ಶನದಲ್ಲಿ ತಂಡವು ರಣಜಿ ಟ್ರೋಫಿಯ ಫೈನಲ್ ಹಂತಕ್ಕೇರಲು ಯಶಸ್ವಿಯಾಗಿದೆ.
ಪ್ರೇಕ್ಷಕರಿಗೆ ಉಚಿತ ಪ್ರವೇಶ
ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಅಂತಿಮ ಪಂದ್ಯವನ್ನು ವೀಕ್ಷಿಸಲು ಉಚಿತ ಅವಕಾಶವಿದೆ. ಭಾಗವಹಿಸುವ ಪ್ರೇಕ್ಷಕರು 15ನೇ ಸಂಖ್ಯೆಯ ಗೇಟ್ನಿಂದ ಒಳಪ್ರವೇಶಿಸಬಹುದು. ಪಿ.3 ಸ್ಟಾಂಡ್ನಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸಬಹುದು ಎಂದು ಕೆಎಸ್ಸಿಎ ತಿಳಿಸಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.