ರಣಜಿ ಫೈನಲ್‌ ಇಂದಿನಿಂದ: ಮಧ್ಯಪ್ರದೇಶ ಎದುರಾಳಿ; 42ನೇ ಪ್ರಶಸ್ತಿಗಾಗಿ ಮುಂಬಯಿ ಪ್ರಯತ್ನ


Team Udayavani, Jun 22, 2022, 6:45 AM IST

ರಣಜಿ ಫೈನಲ್‌ ಇಂದಿನಿಂದ: ಮಧ್ಯಪ್ರದೇಶ ಎದುರಾಳಿ; 42ನೇ ಪ್ರಶಸ್ತಿಗಾಗಿ ಮುಂಬಯಿ ಪ್ರಯತ್ನ

ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಫೈನಲ್‌ ಹೋರಾಟವು ಬುಧ ವಾರದಿಂದ ಬೆಂಗಳೂರಿನಲ್ಲಿ ಆರಂಭವಾ ಗಲಿದೆ. ಬಲಿಷ್ಠ ಮುಂಬಯಿ ತಂಡವು 42ನೇ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಮಧ್ಯ ಪ್ರದೇಶ ತಂಡವನ್ನು ಎದುರಿಸಲಿದೆ.

ತಂಡವು ಪ್ರಶಸ್ತಿ ಗೆಲ್ಲುವುದನ್ನು ಎದುರು ನೋಡುತ್ತಿದೆ. ಶರಣಾಗುವ ಅವಕಾಶವೇ ಇಲ್ಲ ಎಂದು ಮಧ್ಯಪ್ರದೇಶ ತಂಡದ ಮುಖ್ಯ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಹೇಳಿದ್ದಾರೆ. ಆದರೆ ಅಮೋಲ್‌ ಮಜುಮಾªರ್‌ ಮಾರ್ಗದರ್ಶನ ಪಡೆದ ಮುಂಬಯಿ ತಂಡವು ಈ ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ್ದು ಎಲ್ಲ ಪಂದ್ಯಗಳಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಹೀಗಾಗಿ ಮುಂಬಯಿ ಸುಲಭವಾಗಿ ಶರಣಾಗುವ ಪ್ರಶ್ನೆಯೇ ಇಲ್ಲವೆಂದು ಹೇಳಬಹುದು.

 

ತಂಡದ ಆಟಗಾರರ ಸಾಮರ್ಥ್ಯವನ್ನು ಗಮನಿಸಿದರೆ ಮುಂಬಯಿ ತಂಡವೇ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡವೆನಿಸಿದೆ. ನಾಯಕ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್‌, ಸರ್ಫರಾಜ್ ಖಾನ್ ಅಮೋಘ ಫಾರ್ಮ್ ನಲ್ಲಿದ್ದಾರೆ,

ಸರ್ಫರಾಜ್ ಖಾನ್ ಕೇವಲ 5 ಪಂದ್ಯಗಳಲ್ಲಿ 800 ಪ್ಲಸ್‌ ರನ್‌ ಗಳಿಸಿದ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್‌ ಕ್ವಾರ್ಟರ್‌ಫೈನಲ್‌ ಮತ್ತು ಸೆಮಿಫೈನಲ್‌ನ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಬಾರಿಸಿದ ಸಾಧಕರಾಗಿದ್ದಾರೆ. ಅವರು ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಉತ್ತಮ ನಿರ್ವಹಣೆಯನ್ನೂ ನೀಡಿದ್ದರು. ಪೃಥ್ವಿ ಶಾ, ಅರ್ಮಾನ್‌ ಜಾಫ‌ರ್‌, ಸುವೇದ್‌ ಪಾರ್ಕರ್‌ ಇಷ್ಟರವರೆಗಿನ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದ್ದಾರೆ.

ಮುಂಬಯಿಯ ಬ್ಯಾಟಿಂಗ್‌ ಬಲಿಷ್ಠವಾಗಿದ್ದು ಶ್ರೇಷ್ಠ ನಿರ್ವಹಣೆ ನೀಡುವ ಹಲವು ಆಟಗಾರರು ತಂಡದಲ್ಲಿದ್ದಾರೆ. ಆದರೆ ತಂಡದ ಬೌಲಿಂಗ್‌ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಶಾಮ್ಸ್‌ ಮುಲಾನಿ ಮತ್ತು ಆಫ್ ಸ್ಪಿನ್ನರ್‌ ತನುಷ್‌ ಕೋಟ್ಯಾನ್‌ ಅವರ ನಿರ್ವಹಣೆ ಉತ್ತಮವಾಗಿಲ್ಲ.

ಮಧ್ಯ ಪ್ರದೇಶ ಇತ್ತೀಚೆಗಿನ ದಿನಗಳಲ್ಲಿ ಹೆಚ್ಚು ಸುಧಾರಿತ ತಂಡಗಳಲ್ಲಿ ಒಂದಾಗಿದೆ ಮತ್ತು ಪಂಡಿತ್‌ ಅವರ ಮಾರ್ಗದರ್ಶನದಲ್ಲಿ ತಂಡವು ರಣಜಿ ಟ್ರೋಫಿಯ ಫೈನಲ್‌ ಹಂತಕ್ಕೇರಲು ಯಶಸ್ವಿಯಾಗಿದೆ.

ಬ್ಯಾಟಿಂಗ್‌ನಲ್ಲಿ ತಂಡ ವೆಂಕಟೇಶ್‌ ಅಯ್ಯರ್‌ ಅವರನ್ನು ಕಳೆದುಕೊಂಡಿರುವುದು ದೊಡ್ಡ ಪೆಟ್ಟಾಗಬಹುದು. ವೇಗಿ ಆವೇಶ್‌ ಖಾನ್‌ ಕೂಡ ತಂಡದಲ್ಲಿಲ್ಲ. ಕುಮಾರ್‌ ಕಾರ್ತಿಕೇಯ ಬಹಳಷ್ಟು ಸಮಯ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿರುವುದು ತಂಡಕ್ಕೆ ಲಾಭವಾಗಲಿದೆ. ಹಿಮಾಂಶು ಮಂತ್ರಿ ಮತ್ತು ಅಕ್ಷತ್‌ ರಘುವಂಶಿ ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡುತ್ತಿದ್ದಾರೆ
ಅಂಕಣ ಹೇಗಿದೆ?
ಬೆಂಗಳೂರಿನಲ್ಲಿ ಇತ್ತೀಚೆಗೆ ಸತತವಾಗಿ ಮಳೆ ಬರುತ್ತಿದೆ. ಹಾಗಾಗಿ ಮಳೆ ಬಿಟ್ಟು ಕೊಟ್ಟರೆ ಮಾತ್ರ ಪಂದ್ಯ ನಡೆಯುತ್ತದೆ. ಜೂನ್‌ ತಿಂಗಳು ಸಾಮಾನ್ಯವಾಗಿ ಕರ್ನಾಟಕದಲ್ಲಿ ಮಳೆಯಿದ್ದೇ ಇರುತ್ತದೆ! ಸದ್ಯ ಅಂಕಣದಲ್ಲಿ ಅಲ್ಲಲ್ಲಿ ಸಣ್ಣಗೆ ಹುಲ್ಲಿದೆ. ಹಾಗಾಗಿ ಬೌನ್ಸ್‌ ಆಗುವುದು ಖಚಿತ. ತೇವಾಂಶದ ನೆರವೂ ಇರುವು ದರಿಂದ ವೇಗಿಗಳು ಮಿಂಚುವ ಎಲ್ಲ ಅವಕಾಶವಿದೆ.

ಪ್ರೇಕ್ಷಕರಿಗೆ ಉಚಿತ ಪ್ರವೇಶ
ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಅಂತಿಮ ಪಂದ್ಯವನ್ನು ವೀಕ್ಷಿಸಲು ಉಚಿತ ಅವಕಾಶವಿದೆ. ಭಾಗವಹಿಸುವ ಪ್ರೇಕ್ಷಕರು 15ನೇ ಸಂಖ್ಯೆಯ ಗೇಟ್‌ನಿಂದ ಒಳಪ್ರವೇಶಿಸಬಹುದು. ಪಿ.3 ಸ್ಟಾಂಡ್‌ನ‌ಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸಬಹುದು ಎಂದು ಕೆಎಸ್‌ಸಿಎ ತಿಳಿಸಿದೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.