ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ಬೆಳೆಸಿಕೊಳ್ಳಿ : ಬಿ.ಎನ್‌.ವಾಸರೆ


Team Udayavani, Jun 22, 2022, 3:57 PM IST

ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ಬೆಳೆಸಿಕೊಳ್ಳಿ : ಬಿ.ಎನ್‌.ವಾಸರೆ

ಶಿರಸಿ: ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್‌.ವಾಸರೆ ಹೇಳಿದರು.

ಬುಧವಾರ ಇಲ್ಲಿನ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಕ.ಸಾ.ಪ. ಜಿಲ್ಲೆ ಹಾಗೂ ಶಿರಸಿ ತಾಲ್ಲೂಕು ಘಟಕ ಆಯೋಜಿಸಿದ್ದ ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ನೆರವೇರಿಸಿ ಮಾತನಾಡಿದರು.

ಕನ್ನಡ ಭಾಷೆ ಯಲ್ಲಿ ನೂರಕ್ಕೆ ನೂರು ಅಂಕ ಪಡೆಯುವುದು ಸುಲಭದ ಮಾತಲ್ಲ. ಅಂತಹ ಸಂದರ್ಭದಲ್ಲೂ ಕಷ್ಟ ಪಟ್ಟು ಓದಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಾಹಿತ್ಯ ಪರಿಷತ್ ರಾಜ್ಯದಲ್ಲಿ ಮೊದಲ ಬಾರಿಗೆ ಸಾಮೂಹಿಕ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ನಡೆಸುತ್ತಿದ್ದೇವೆ ಎಂದರು.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಸಾಹಿತ್ಯ ಪರಿಷತ್ ಬೆಳೆದಿದೆ. ಸಾಹಿತ್ಯ ಪರಿಷತ್ ನ ಧ್ಯೇಯೋದ್ದೇಶ ಗಳನ್ನು ಮನೆಮನೆಗೆ ಮನಮನಕ್ಕೆ ತಲುಪಿಸುವ ಕೆಲಸ ಸಾಹಿತ್ಯ ಪರಿಷತ್ ನಿಂದ ನಡೆಯುತ್ತಿದೆ ಎಂದರು.

ಗುರುಗಳನ್ನು ಗೌರವಿಸುವ ಅಥವಾ ಪ್ರೀತಿಸುವ ಮನಸ್ಥಿತಿ ವಿದ್ಯಾರ್ಥಿಗಳಿಂದ ದೂರವಾಗಿದೆ ಎನ್ನಿಸುತ್ತಿದೆ. ಗುರುಗಳನ್ನು ಗೌರವಿಸುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದು ಆದರ್ಶ ವಿದ್ಯಾರ್ಥಿಗಳ ಲಕ್ಷಣವಾಗಿದೆ.

ತಂದೆ ತಾಯಿಗಳು ನಮ್ಮ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರು ತಂದೆ ತಾಯಿಗಳನ್ನು ಪ್ರೀತಿ ಯಿಂದ ಗೌರವದಿಂದ ಕಾಣಬೇಕು. ಮನಸ್ಸು ಭಾವನೆಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು. ಇದರಲ್ಲಿ ಎಡವಿದರೆ ವಿದ್ಯಾರ್ಥಿಗಳು ದಾರಿತಪ್ಪುವ ಸಾಧ್ಯತೆ ಗಳು ಹೆಚ್ಚಿರುತ್ತದೆ‌. ವಿದ್ಯಾರ್ಥಿಗಳು ಮಾನವೀಯತೆಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ನಮ್ಮ ಪೂರ್ವಜರು ಹಾಕಿಕೊಟ್ಟ ಮಾರ್ಗದಲ್ಲೇ ನಾವು ನಡೆದರೆ ನಮ್ಮ ಬದುಕು ಹಸನಾಗುವುದರಲ್ಲಿ ಎರಡು ಮಾತಿಲ್ಲ. ಹೊರಗಿನ ಜ್ಞಾನಕ್ಕಾಗಿಯಾದರೂ ಪಠ್ಯೇತರ ಪುಸ್ತಕ ಗಳನ್ನು ಓದಬೇಕು ಎಂದರು.

ಇದನ್ನೂ ಓದಿ : ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ಮಾತನಾಡಿ, ಕನ್ನಡದ ಉಳಿವಿನ ಕೆಲಸವನ್ನು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಮೂಲಕ‌ ಮಾಡುತ್ತಿರುವ ಕೆಲಸ ಮಾದರಿಯಾಗಿದೆ.‌ ಮಾತೃಭಾಷೆ ವ್ಯಕ್ತಿತ್ವ ರೂಪಿಸುವ ಜತೆಗೆ ಸಂಸ್ಕೃತಿ ಉಳಿಸುವ ಮಾಧ್ಯಮ. ಇದರಿಂದ ವಿದ್ಯಾರ್ಥಿಗಳು ವಿಮುಖವಾಗಬಾರದು ಎಂದರು.

ಕ.ಸಾ.ಪ. ಸಂಘ-ಸಂಸ್ಥೆಗಳ ಪ್ರತಿನಿಧಿ ವೆಂಕಟೇಶ ನಾಯ್ಕ ಮಾತನಾಡಿ, ಸಾಹಿತ್ಯ ಪರಿಷತ್ ಕಾರ್ಯಚಟುವಟಿಕೆ ವಿಸ್ತರಿಸಿಕೊಳ್ಳುತ್ತಿದೆ. ಇದರ ಭಾಗವಾಗಿ ಕನ್ನಡ ಭಾಷೆಯಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗಿದೆ ಎಂದರು.

ಕ.ಸಾ.ಪ. ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾರಿಕಾಂಬಾ ದೇವಾಲಯದ ಅಧ್ಯಕ್ಷ ಆರ್.ಜಿ.ನಾಯ್ಕ, ಉಪಾಧ್ಯಕ್ಷ ಸುದೀಶ ಜೋಗಳೇಕರ, ಡಾ.ಸ್ವಾತಿ ವಿನಾಯಕ, ಕ.ಸಾ.ಪ. ಜಿಲ್ಲಾ ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಪಟಗಾರ ಇದ್ದರು.

ಕ.ಸಾ.ಪ. ತಾಲ್ಲೂಕು ಘಟಕದ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಸ್ವಾಗತಿಸಿದರು. ಕೃಷ್ಣ ಪದಕಿ ನಿರೂಪಿಸಿದರು. ಇದೇ ವೇಳೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಡಾ. ಸ್ವಾತಿ ವಿನಾಯಕ ಹಾಗೂ ಕಲಾವಿದೆ ತುಳಸಿ ಹೆಗಡೆ ಅವರನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.