ಕತ್ತಲೆ ಕೂಪದಲ್ಲಿ ಅರಣ್ಯ ಕಾವಲು ಕ್ಯಾಂಪ್‌

ಕೆಳಹಂತದ ನೌಕರರ ಹಿತಾಸಕ್ತಿ ಮರೆತ ಅಧಿಕಾರಿಗಳು ; ಕ್ಯಾಂಪ್‌ನಲ್ಲಿ ಹಾಳಾದ ಸೋಲಾರ್‌ ದೀಪ ವ್ಯವಸ್ಥೆ

Team Udayavani, Jun 23, 2022, 1:27 PM IST

11

ಮುಧೋಳ: ಕೆಳಹಂತದ ನೌಕರರಿಗೆ ಸೂಕ್ತ ಸೌಲಭ್ಯ ಒದಗಿಸಬೇಕಾದ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗುತ್ತಿಗೆ ನೌಕರರು ಕತ್ತಲೆಯಲ್ಲಿಯೇ ಅರಣ್ಯ ಸಂರಕ್ಷಣೆಗೆ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಕರ್ನಾಟಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿರುವ ತಾಲೂಕಿನ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದ ಕಾವಲಿಗೆ ಇರುವ ಹಲಗಲಿಯ ಕ್ಯಾಂಪ್‌ಗೆ ವಿದ್ಯುತ್‌ ಸಂಪರ್ಕ ಇರದ ಕಾರಣ ಈ ಕ್ಯಾಂಪ್‌ನಲ್ಲಿ ಕಾರ್ಯನಿರ್ವಹಿಸುವ ಕೆಳಹಂತದ ನೌಕರರು ಹಾಗೂ ಗುತ್ತಿಗೆ ನೌಕರರು ರಾತ್ರಿವೇಳೆ ಜೀವ ಕೈಯಲ್ಲಿಡಿದು ಕಾರ್ಯನಿರ್ವಹಿಸಬೇಕಾಗಿದೆ.

ದೊಡ್ಡ ಪ್ರದೇಶ: ಹಲಗಲಿ ಗ್ರಾಮಕ್ಕೆ ಹೊಂದಿಕೊಂಡಿರುವ ಈ ಕಾವಲು ಕ್ಯಾಂಪ್‌ ವ್ಯಾಪ್ತಿಗೆ ದೊಡ್ಡಮಟ್ಟದ ಭೂವಿಸ್ತಾರ ಬರಲಿದೆ. ಬೀಳಗಿ ಹಾಗೂ ಮುಧೋಳ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 963691 ಹೆಕ್ಟೇರ್‌ ಪ್ರದೇಶದಲ್ಲಿ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯ ಹರಡಿಕೊಂಡಿದೆ. ಈ ಪೈಕಿ 10353 ಹೆಕ್ಟೇರ್‌ ಪ್ರದೇಶ ಹಲಗಲಿ ಗ್ರಾಮ ವ್ಯಾಪ್ತಿಗೆ ಬರಲಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಅರಣ್ಯ ಕಾವಲಿಗೆ ಗ್ರಾಮಕ್ಕೆ ಹೊಂದಿಕೊಂಡಂತೆ ಕಾವಲು ಕ್ಯಾಂಪ್‌ ನಿರ್ಮಿಸಲಾಗಿದೆ. ಆದರೆ, ಕ್ಯಾಂಪ್‌ ಗೆ ವಿದ್ಯುತ್‌ ವ್ಯವಸ್ಥೆ ಕಲ್ಪಿಸದ ಕಾರಣ ಗುತ್ತಿಗೆ ನೌಕರರು ರಾತ್ರಿಯಾದರೆ ಸಾಕು ಭಯದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.

ಹಾಳಾದ ಸೋಲಾರ್‌ ದೀಪ: ನಿರ್ಮಾಣದ ಆರಂಭದಲ್ಲಿ ಕ್ಯಾಂಪ್‌ಗೆ ಸೋಲಾರ್‌ ವ್ಯವಸ್ಥೆ ಮೂಲಕ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಹಲವು ವರ್ಷಗಳ ಬಳಿಕ ಸೂಕ್ತ ನಿರ್ವಹಣೆ ಕೊರತೆಯಿಂದ ಹಾಳಾಗಿ ಎರಡು ವರ್ಷಗಳು ಸಮೀಪಿಸುತ್ತ ಬಂದರೂ ಅಧಿಕಾರಿಗಳು ಕ್ಯಾಂಪ್‌ಗೆ ಬೆಳಕು ನೀಡುತ್ತಿಲ್ಲ.

ಮಹತ್ವದ ಕ್ಯಾಂಪ್‌: ಹಲಗಲಿ ಗ್ರಾಮದ ಸರಹದ್ದಿಗೆ ಹೊಂದಿಕೊಂಡಿರುವ ಕಾವಲು ಕ್ಯಾಂಪ್‌ ತುಂಬ ಮಹತ್ವದ್ದಾಗಿದೆ. ಎತ್ತರದ ಪ್ರದೇಶದಲ್ಲಿ ನಿರ್ಮಾಣ ಮಾಡಿರುವುದರಿಂದ ಪ್ರತಿಯೊಂದನ್ನು ಸೂಕ್ಷ್ಮವಾಗಿ ಅವಲೋಕಿಸಬಹುದು. ಈ ಕ್ಯಾಂಪ್‌ನ ಮುಂಭಾಗದಲ್ಲಿ ದೊಡ್ಡ ರಸ್ತೆ ಇರುವುದರಿಂದ ಜನರು ಕಾಡೊಳಗೆ ಹೋಗಿ ಬರುವುದನ್ನು ಗಮನಿಸಲು ಅನುಕೂಲವಾಗುತ್ತಿದೆ. ಆದರೆ, ವಿದ್ಯುತ್‌ ಕೊರತೆಯಿಂದ ರಾತ್ರಿಯಾದರೆ ಅವರ ಕೆಲಸಕ್ಕೆ ಕಷ್ಟವಾಗುತ್ತಿದೆ.

ವಿಷಜಂತುಗಳ ಕಾಟ: ಅರಣ್ಯಕ್ಕೆ ಹೊಂದಿಕೊಂಡಿರುವ ಕ್ಯಾಂಪ್‌ನಲ್ಲಿ ರಾತ್ರಿವೇಳೆ ಕಾವಲುಗಾರರು ಉಳಿದರೆ ಅವರಿಗೆ ವಿಷಜಂತುಗಳ ಕಾಟ ಹೆಚ್ಚಾಗಿದೆ. ಎಷ್ಟೋ ಬಾರಿ ಇಲ್ಲಿನ ಸಿಬ್ಬಂದಿ ವಿಷ ಸರ್ಪ ರಕ್ಷಿಸುವ ಇಲ್ಲಿನ ಸಿಬ್ಬಂದಿ ಹೇಳಿಕೊಂಡಿದ್ದಾರೆ.

ಕ್ಯಾಂಪ್‌ಗೆ ಹೆಸ್ಕಾಂನಿಂದ ವಿದ್ಯುತ್‌ ದೀಪ ಅಳವಡಿಕೆ ಕಷ್ಟ. ಸೋಲಾರ್‌ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಪ್ರಸ್ತಾವನೆ ಕಳುಹಿಸಿದ್ದೇವೆ. ಶೀಘ್ರ ವ್ಯವಸ್ಥೆ ಕಲ್ಪಿಸಲಾಗುವುದು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಹಲಗಲಿಯ ಕಾವಲು ಕ್ಯಾಂಪ್‌ ನಲ್ಲಿ ಸೋಲಾರ್‌ ವ್ಯವಸ್ಥೆ ಇಲ್ಲದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಶೀಘ್ರ ಕ್ಯಾಂಪ್‌ಗೆ ಸೋಲಾರ್‌ ದೀಪ ಅಳವಡಿಕೆಗೆ ಕ್ರಮ ಕೈಗೊಳ್ಳುತ್ತೇವೆ. –ಪ್ರಶಾಂತ ಸಂಕಿನಮಠ, ಡಿಎಫ್‌ಒ ಬಾಗಲಕೋಟೆ

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.