ನಾಳೆ ರಾಜ್ಯವ್ಯಾಪಿ ಲೋಕ ಅದಾಲತ್‌


Team Udayavani, Jun 24, 2022, 6:32 AM IST

ನಾಳೆ ರಾಜ್ಯವ್ಯಾಪಿ ಲೋಕ ಅದಾಲತ್‌

ಬೆಂಗಳೂರು: ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿ ರುವ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಜೂ. 25ರಂದು  ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಿದ್ದು, ಸುಮಾರು ಐದು ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಿದೆ.

ಹೈಕೋರ್ಟ್‌ನ ಹಿರಿಯ ನ್ಯಾಯ ಮೂರ್ತಿಗಳು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾ| ಬಿ. ವೀರಪ್ಪ ಅವರು ಗುರುವಾರ “ಉದಯವಾಣಿ’ ಕಚೇರಿಗೆ ಭೇಟಿ ನೀಡಿದ್ದು, ಉದ್ದೇಶಿತ ಅದಾಲತನ್ನು ಸದ್ಬಳಕೆ ಮಾಡಿಕೊಳ್ಳಲು   ಮನವಿ ಮಾಡಿದರು.

ಆಸ್ತಿ ಪಾಲು, ಅಪಘಾತ ಪರಿಹಾರ ಸಹಿತ ಕೆಲವು ಸಿವಿಲ್‌ ವ್ಯಾಜ್ಯಗಳಿಗೆ ಸೀಮಿತವಾಗಿದ್ದ ಲೋಕ ಅದಾಲತ್‌ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ಕೊಂಡಿದೆ. ಕೌಟುಂಬಿಕ ಕಲಹ, ವಿವಾಹ ವಿಚ್ಛೇದನ ಸಹಿತ ವಾಣಿಜ್ಯ ನ್ಯಾಯಾಲಯಗಳ ಭೂವ್ಯಾಜ್ಯಗಳು, ರಿಯಲ್‌ ಎಸ್ಟೇಟ್‌ ಪ್ರಾಧಿಕಾರ (ರೇರಾ) ಪ್ರಕರಣಗಳು, ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ಟ್ರಾಫಿಕ್‌ ದಂಡ, ಗ್ರಾಹಕರ ಪರಿಹಾರ ವೇದಿಕೆ, ಮಾಹಿತಿ ಹಕ್ಕು ಆಯೋಗದಡಿ ಬಾಕಿ ಇರುವ ಪ್ರಕರಣಗಳನ್ನು ಈಗ ಲೋಕ ಅದಾಲತ್‌ಗಳ ಮೂಲಕ ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಕೊರೊನಾ ಸಂದರ್ಭ ದೇಶದಲ್ಲೇ ಮೊದಲ ಬಾರಿಗೆ ಮೆಗಾ ಇ-ಲೋಕ ಅದಾಲತ್‌ ನಡೆಸಿದ ಖ್ಯಾತಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕಿದೆ. ಮೂರು ವರ್ಷಗಳಲ್ಲಿ ಲಕ್ಷಗಟ್ಟಲೆ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಸಾವಿರಾರು ಕುಟುಂಬಗಳ ಬದುಕಿ ನಲ್ಲಿ ನೆಮ್ಮದಿ ಮೂಡಿಸಿದ್ದಲ್ಲದೆ ಸರಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ಜಮೆ ಮಾಡಿದೆ. ನ್ಯಾಯಾಲಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ. ನ್ಯಾಯಾಂಗದ ಅಮೂಲ್ಯ ಸಮಯವನ್ನು ಉಳಿತಾಯ ಮಾಡಿದೆ ಎಂದು ಹೇಳಿದರು.

3 ವರ್ಷಗಳಲ್ಲಿ 20 ಲಕ್ಷ ಪ್ರಕರಣಗಳ ಇತ್ಯರ್ಥ :

2020ರಿಂದ 2022 ಮಾರ್ಚ್‌ ವರೆಗೆ ಮೂರು ವರ್ಷಗಳಲ್ಲಿ ನಡೆದ ಲೋಕ ಅದಾಲತ್‌ಗಳಲ್ಲಿ 20.24 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದರಿಂದ ಸಾವಿರ ಕೋಟಿಗೂ ಹೆಚ್ಚು ಹಣವನ್ನು ಪರೋಕ್ಷವಾಗಿ ಮತ್ತು ನೇರವಾಗಿ ಸರಕಾರದ ಬೊಕ್ಕಸಕ್ಕೆ ಜಮೆ ಮಾಡಲಾಗಿದೆ. ಇದಲ್ಲದೆ ಮೋಟಾರು ವಾಹನ ಕಾಯ್ದೆಯಡಿ, ಇತರ ಪ್ರಕರಣಗಳಲ್ಲಿ, ಆಸ್ತಿ ಪಾಲುದಾರಿಕೆ ಪ್ರಕರಣಗಳಲ್ಲಿ ನೊಂದವರಿಗೆ ಕೋಟ್ಯಂತರ ರೂಪಾಯಿ ಪರಿಹಾರ ದೊರಕಿಸಿಕೊಡಲಾಗಿದೆ ಎಂದರು.

ನ್ಯಾಯಾಯಲದ ಪ್ರಕರಣಗಳು ಹೊರತುಪಡಿಸಿ ಇತರ ಇಲಾಖೆ/ಪ್ರಾಧಿಕಾರಿಗಳಲ್ಲಿ 3 ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಯ 663 ಕೋಟಿ ಪ್ರಕರಣಗಳು ಬಾಕಿ ಇದ್ದು, ಸಾವಿರ ಕೋ.ರೂ.ಗೂ ಹೆಚ್ಚು ವಸೂಲಾತಿ ಬಾಕಿ ಇದೆ. ರಾಜ್ಯ ಗ್ರಾಹಕರ ಪರಿಹಾರ ವೇದಿಕೆಯ 14 ಸಾವಿರ ಪ್ರಕರಣಗಳು, ಮಾಹಿತಿ ಹಕ್ಕು ಕಾಯ್ದೆಯಡಿಯ 30,000 ಮತ್ತು ರೇರಾ ಅಡಿಯಲ್ಲಿ 3 ಸಾವಿರ ಪ್ರಕರಣಗಳು ಬಾಕಿ ಇದ್ದು, ಇವುಗಳನ್ನು ಕೂಡ ಲೋಕ ಅದಾಲತ್‌ ಮೂಲಕ ಇತ್ಯರ್ಥಪಡಿಸಲು ಯೋಚಿಸಲಾಗಿದೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.