ಶಾಲಾ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ

ಮಕ್ಕಳಿಗೆ ಪಕ್ಕದ ಶಾಲಾ ಕಟ್ಟಡದಲ್ಲಿ ಪಾಠ ಪ್ರವಚನಕ್ಕೆ ವ್ಯವಸ್ಥೆ ಮಾಡಲಾಗಿದೆ

Team Udayavani, Jun 24, 2022, 2:21 PM IST

ಶಾಲಾ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ

ದೇವನಹಳ್ಳಿ: ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡವನ್ನು ಶೀಘ್ರವೇ ದುರಸ್ತಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೆ.ರೇವಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು, ಪ್ರಸ್ತುತ ಅಂಗನವಾಡಿ ಕಟ್ಟಡಕ್ಕೆ 3.5 ಲಕ್ಷ ರೂ. ವೆಚ್ಚದಲ್ಲಿ ಶೇಟ್‌ ಹಾಕಿ ತಾತ್ಕಾಲಿಕವಾಗಿ 1ರಿಂದ 5ನೇ ತರಗತಿವರೆಗೆ ತರಗತಿಗಳಿಗೆ ವ್ಯವಸ್ಥೆ ಮಾಡಿಕೊಡುವಂತೆ ಗ್ರಾಪಂಗೆ ತಿಳಿಸಲಾಗಿದೆ.

ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಶಿಥಿಲವಾಗಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲು ವರದಿ ತಯಾರಿಸುವಂತೆ ಸೂಚಿಸಲಾಗಿದೆ. ಶಾಲಾ ಕಟ್ಟಡದ ಮೇಲ್ಛಾವಣಿ ಕಲ್ಲಿನ ಚಪ್ಪಡಿಯಾಗಿದ್ದು, ಮಳೆಗಾಲದಲ್ಲಿ ಸೋರುತ್ತಿರುವ ಹಿನ್ನೆಲೆ ಮಕ್ಕಳಿಗೆ ಪಕ್ಕದ ಶಾಲಾ ಕಟ್ಟಡದಲ್ಲಿ ಪಾಠ ಪ್ರವಚನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಸ್‌ಡಿಎಂಸಿ ನಿಧಿ ಬಳಸಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜಿಪಂ ವತಿಯಿಂದ ನೀಡಲಾಗುವ ಅನುದಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿಯತ್ತ ಶಿಕ್ಷಕರು ಗಮನಹರಿಸಿ, ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಮಕ್ಕಳ ಕಲಿಕೆಗೆ ಅವಶ್ಯಕತೆ ಇರುವ ಟೇಬಲ್ , ಬೆಂಜ್, ಕುರ್ಚಿ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳಿಗಾಗಿ ಎಸ್‌ಡಿಎಂಸಿ ನಿಧಿಯನ್ನು ಬಳಕೆ ಮಾಡಲು ಅವಕಾಶವಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮಾರ್ಗದರ್ಶನ ಪಡೆದು ಶಾಲಾ ಅಭಿವೃದ್ಧಿಗೆ ಅಗತ್ಯ ಕೆಲಸ ಮಾಡುವಂತೆ ನಿರ್ದೇಶಿಸಿದರು.

ಅನುದಾನ ಬಳಸಿಕೊಳ್ಳಿ: ಪ್ರತಿ ಶಾಲೆಗೂ ಸಂಚಿತ ನಿಧಿ ನೀಡಲಾಗಿದೆ. ಮಕ್ಕಳ ನಿತ್ಯದ ಆಹಾರಕ್ಕೆ ಅಗತ್ಯವಿರುವ ಖರ್ಚು ವೆಚ್ಚವನ್ನು ಸಂಚಿತ ನಿಧಿಯ ಅನುದಾನ ಬಳಸಿಕೊಳ್ಳಿ. ಯಾವ ಹಣವನ್ನು ಯಾವ ಕಾರ್ಯಗಳಿಗೆ ಉಪಯೋಗಿಸಬಹುದು ಎಂಬುದರ ಕುರಿತು ಮಾಹಿತಿ ಪಡೆದು,
ಅನುಷ್ಠಾನಕ್ಕೆ ತರಲು ಮುಂದಾಗಿ ಎಂದರು.

ಕಾರಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಿಕಾ, ಎನ್‌.ರವಿ, ಯಂಬ್ರಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ಮಾರೇಗೌಡ, ಸದಸ್ಯರಾದ ಜನಕಮಣಿ, ಕೇಶವಮೂರ್ತಿ, ಸುಬ್ರಮಣಿ, ಪಿಡಿಒ ಎಸ್‌.ಕವಿತಾ, ಕಾರ್ಯದರ್ಶಿ ಯಶೋ ಧಾ ಕುಮಾರ್‌, ತಾಪಂ ಸಹಾಯಕ ಅಧಿಕಾರಿ ಸುನೀಲ್‌, ಐಇಸಿ ಸಂಯೋಜಕ ಪ್ರಕಾಶ್‌, ಶಾಲಾ ಮುಖ್ಯ ಶಿಕ್ಷಕಿ ಎ.ಎಸ್‌.ಅಕ್ಕಮಹಾದೇವಿ, ಸಹ ಶಿಕ್ಷಕಿ ಅಸ್ಕರಿ ಬೇಗಂ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.