![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 24, 2022, 6:47 PM IST
ನವದೆಹಲಿ : ಕೇಂದ್ರ ಸರಕಾರ ಶುಕ್ರವಾರ ರಾ ಮುಖ್ಯಸ್ಥ (ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್) ಸಮಂತ್ ಗೋಯೆಲ್ ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಿದೆ ಮತ್ತು ಹಿರಿಯ ಐಪಿಎಸ್ ಅಧಿಕಾರಿ ತಪನ್ ಡೇಕಾ ಅವರನ್ನು ಇಂಟೆಲಿಜೆನ್ಸ್ ಬ್ಯೂರೋದ ನಿರ್ದೇಶಕರನ್ನಾಗಿ ನೇಮಿಸಿದೆ.
ಪಂಜಾಬ್ ಕೇಡರ್ನ 1984-ಬ್ಯಾಚ್ನ ಐಪಿಎಸ್ ಅಧಿಕಾರಿ ಗೋಯೆಲ್, ಜೂನ್ 30, 2023 ರವರೆಗೆ ಇರುವ ಅಧಿಕಾರಾವಧಿಯನ್ನು ಮೀರಿ ಒಂದು ವರ್ಷದ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (RAW) ಕಾರ್ಯದರ್ಶಿಯಾಗಿ ಮುಂದುವರಿಯುತ್ತಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಕಳೆದ ವರ್ಷವೂ ಗೋಯೆಲ್ಗೆ ಸೇವೆಯನ್ನು ವಿಸ್ತರಣೆ ಮಾಡಲಾಗಿತ್ತು.
ಪ್ರತ್ಯೇಕ ಆದೇಶದಲ್ಲಿ, 1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಐಪಿಎಸ್ ಅಧಿಕಾರಿ ತಪನ್ ಕುಮಾರ್ ಡೇಕಾ ಅವರು ವಿಶೇಷ ನಿರ್ದೇಶಕ ಇಂಟೆಲಿಜೆನ್ಸ್ ಬ್ಯೂರೋ ಹುದ್ದೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕರಾಗಿ ನೇಮಕಗೊಳಿಸಲಾಗಿದೆ.
ಜೂನ್ 30 ರಂದು ಕೊನೆಗೊಳ್ಳಲಿರುವ ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ಅರವಿಂದ್ ಕುಮಾರ್ ಅವರ ಉತ್ತರಾಧಿಕಾರಿಯಾಗಿ ಡೇಕಾ ಅವರು ನೇಮಕವಾಗಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.