‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌


Team Udayavani, Jun 25, 2022, 8:58 AM IST

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

ಚಿತ್ರರಂಗದಲ್ಲಿ ಬೆಳೆಯಬೇಕು, ಹೆಸರು ಮಾಡಬೇಕು ಎಂಬ ಕನ ಸಿ ನಿಂದ ಬರುವ ಯುವಕರ ಬದುಕು ಯಾವುದೇ ಸಿನಿಮಾ ಕಥೆಗಳಿಂತ ಕಮ್ಮಿಯೇನು ಇರುವುದಿಲ್ಲ. ಹಾಗೆಯೇ ಕನ್ನಡ ಸಿನಿಮಾದಲ್ಲಿ ನಾಯಕನೊಬ್ಬ ಚಿತ್ರ ನಿರ್ದೇಶಕನಾಗುವ ಎಳೆಯ ಕಥೆಗಳು ಸಾಕಷ್ಟು ಬಂದಿವೆ. ಅಂತಹದ್ದೇ ಒಂದು ಕಥೆಯ ಎಳೆಯೊಂದಿಗೆ ವಿಭಿನ್ನ ರೀತಿಯಲ್ಲಿ ಮೂಡಿ ಬಂದಿರುವ ಹಾಸ್ಯಮಯ ಚಿತ್ರ “ಹರಿಕಥೆ ಅಲ್ಲ ಗಿರಿಕಥೆ.’

ಚಿತ್ರರಂಗದಲ್ಲಿ ತಂದೆ ಒಂದು ದೊಡ್ಡ ಹೆಸರು. ಆದರೆ ತಂದೆ ಪೂರೈಸಲಾಗದ ಸ್ವತಂತ್ರ ನಿರ್ದೇಶಕನಾಗುವ ಕನಸನ್ನು ಹೊತ್ತ ಮಗ. ಒಂದು ಸೂಪರ್‌ ಹಿಟ್‌ ಚಿತ್ರ ನೀಡಿ, ನಿರ್ದೇಶಕನಾಗುವ ಆಸೆ ಹೊತ್ತ ಗಿರಿ ಕೃಷ್ಣ ಒಂದು ಕಡೆ ಯಾ ದರೆ, ಸಿನಿಮಾದಲ್ಲಿ ದೊಡ್ಡ ವಿಲನ್‌ ಆಗಿ ಗುರುತಿಸಿಕೊಳ್ಳುವ ಹಂಬಲದ ವಿಲನ್‌ ಗಿರಿ ಮತ್ತೂಂದೆಡೆ. ಅಭಿನಯದಲ್ಲಿ ಮಿಂಚಿ ಸ್ಟಾರ್‌ ನಟಿಯಾಗಬೇಕು ಎಂದು ಒಂದು ಅವಕಾಶಕ್ಕಾಗಿ ಹಾತೊರೆಯುತ್ತಿರುವ ಗಿರಿ(ಜಾ)ಳದ್ದು ಇನ್ನೊಂದು ಟ್ರ್ಯಾಕ್‌. ಈ ಮೂವರು ಗಿರಿಗಳು ಒಂದಾಗುವ ಬಗೆ ಹೇಗೆ? ನಿರ್ದೇಶಕನಾಗೋ ಕನಸು, ಆಸೆ, ಛಲ ಹೊತ್ತ ನಾಯಕ ತನ್ನ ಗುರಿಯನ್ನು ಸಾಧಿಸುತ್ತಾನಾ? ಅದು ಹೇಗೆ? ಇವರು ಸಿನಿಮಾ ಮಾಡ್ತಾರಾ? ಎನ್ನುವ ಪ್ರಶ್ನೆಗೆ ಉತ್ತರ ಬೇಕೆಂದರೆ ಚಿತ್ರ ನೋಡಲೇ ಬೇಕು.

ಹರಿಕಥೆ ಅಲ್ಲ ಗಿರಿಕಥೆ ಚಿತ್ರ ಸಾಧನೆಯ ಆಸೆ ಹೊತ್ತ ಯುವಕರ ಹೋರಾಟದ ಕಥೆ. ಆದರೆ ಚಿತ್ರದಲ್ಲಿ ಹಾಸ್ಯ ಕಮಾಲ್‌ ಮಾಡಿದೆ. ಸರಳ ಕಥೆ, ನಿರೂಪಣೆಯ ಈ ಚಿತ್ರಕ್ಕೆ ಹಾಸ್ಯವೇ ಹೈಲೈಟ್‌ ಆಗಿದೆ. ಇನ್ನು ಚಿತ್ರದಲ್ಲಿ ಬರುವ ಕೆಲವು ಸೆಂಟಿಮೆಂಟ್‌ ದೃಶ್ಯಗಳು ಕಾಮಿಡಿಗೆ ಬ್ರೇಕ್‌ ಹಾಕಿದೆ ಅನಿಸಿದರೂ ಅದು ಕಥೆಗೆ ಪೂರಕವಾಗಿದೆ. ಸಣ್ಣ ಪುಟ್ಟ ಅಡೆತಡೆಗಳನ್ನು ದಾಟಿ, ನೋಡುಗರಿಗೆ ಮನರಂಜನೆ ನೀಡುವಲ್ಲಿ ಚಿತ್ರ ಯಶಸ್ವಿಯಾಗಿದೆ.

ಚಿತ್ರದಲ್ಲಿನ ರಿಷಭ್‌ ಶೆಟ್ಟಿ ಅವರ ಪಾತ್ರ ಹಾಗೂ ನಟನೆ ನೋಡುಗರ ಗಮನ ಸೆಳೆಯುವಂತಿದೆ. ರಚನಾ ಇಂದರ್‌ ಹಾಗೂ ತಪಸ್ವಿ ನಾಯಕಿಯರಿಬ್ಬರೂ ತಮ್ಮ ಪಾತ್ರಗಳನ್ನು ಅಚ್ಚುಕಟಾಗಿ ನಿಭಾಯಿಸಿದ್ದಾರೆ.

ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಪಾತ್ರ ಚಿತ್ರಕ್ಕೆ ತೂಕ ನೀಡುವಂತಾಗಿದ್ದು, ರಿಷಭ್‌ ಹಾಗೂ ಪ್ರಮೋದ್‌ ಶೆಟ್ಟಿ ಜೋಡಿಯ ಕಾಮಿಡಿ ಇಲ್ಲಿ ಕಮಾಲ್‌ ಮಾಡಿದೆ. ಚಿತ್ರದ 5ಡಿ ಥಾಮಸ್‌, ಮೊಬೈಲ್‌ ರಘು, ಹಾಗೂ ಇತರೆ ಪಾತ್ರಗಳು ಚಿತ್ರದ ವಿಭಿನ್ನ ಪಯಣಕ್ಕೆ ಸಾಥ್‌ ನೀಡಿದೆ. ನಿರ್ದೇಶಕರಾದ ಕರಣ್‌ ಅನಂತ್‌ ಹಾಗೂ ಅನಿರುದ್ಧ ಮಹೇಶ್‌ ಅವರು ಚೊಚ್ಚಲ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ

ವಾಣಿ ಭಟ್ಟ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

My Hero Movie Review

My Hero Movie Review; ಸೂಕ್ಷ್ಮ ಸಂದೇಶದ ಆಪ್ತ ಸಿನಿಮಾ

Taekwondo girl Review

Taekwondo girl Review; ಹಠದಲ್ಲಿ ಅರಳಿದ ಪ್ರತಿಭೆ

Laughing Buddha Review; ಬುದ್ಧನ ಕಾಮಿಡಿ ಪುರಾಣ

Laughing Buddha Review; ಬುದ್ಧನ ಕಾಮಿಡಿ ಪುರಾಣ

pepe movie review

Pepe Movie Review: ತೊರೆಯಲ್ಲಿ ಹರಿದ ನೆತ್ತರ ಕಥೆಯಿದು…

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.