![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 25, 2022, 10:13 AM IST
ಅರಂತೋಡು/ ಮಡಿಕೇರಿ: ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನ ಅನುಭವವಾಗಿದ್ದು, ಸ್ಥಳೀಯರಲ್ಲಿ ಮತ್ತೆ ಆತಂಕ ಹುಟ್ಟಸಿದೆ.
ಬೆಳಗ್ಗೆ ಸುಮಾರು 9.10ಕ್ಕೆ ಭೂಕಂಪನದ ಅನುಭವವಾಗಿದ್ದು, ಸುಮಾರು 45 ಸೆಕೆಂಡುಗಳ ಕಾಲ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಇದರಿಂದಾಗಿ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿವೆ. ಕೆಲವೆಡೆ ಗೋಡೆ ಸಣ್ಣದಾಗಿ ಬಿರುಕುಬಿಟ್ಟಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೂಕಂಪನದ ಪರಿಣಾಮ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಪಿ. ಕೆ. ಅಬೂಸಾಲಿ ಅವರ ಮನೆ ಗೋಡೆಗಳು ಬಿರುಕು ಬಿಟ್ಟಿವೆ ಎಂದು ತಿಳಿದು ಬಂದಿದೆ.
ಮಡಿಕೇರಿ ತಾಲೂಕು ಹಾಗೂ ಕೊಡಗು ಗಡಿಗೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಸುಳ್ಯ , ಮರ್ಕಂಜ , ಪೆರಾಜೆ , ಗೂನಡ್ಕ , ಕಲ್ಲುಗುಂಡಿ , ಅರಂತೋಡು , ತೊಡಿಕಾನ ,ಐವರ್ನಾಡು , ಸಂಪಾಜೆ ಭಾಗದಲ್ಲೂ ಕಂಪಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
You seem to have an Ad Blocker on.
To continue reading, please turn it off or whitelist Udayavani.