ಅಪೂರ್ಣ ಮಾಹಿತಿ ನೀಡಿದ ಅಧಿಕಾರಿಗಳ ತರಾಟೆ

ತಾಲೂಕಿನಲ್ಲಿ 5 ದೈಹಿಕ, 10 ಮುಖ್ಯಗುರುಗಳ ಹುದ್ದೆ ಖಾಲಿ ಇದೆ

Team Udayavani, Jun 25, 2022, 5:50 PM IST

ಅಪೂರ್ಣ ಮಾಹಿತಿ ನೀಡಿದ ಅಧಿಕಾರಿಗಳ ತರಾಟೆ

ಸವದತ್ತಿ: ಕೆಆರ್‌ಡಿಎಲ್‌ ಪ್ರಭುಕುಮಾರ, ಜಿಪಂ ಎಇಇ ಎಚ್‌.ಸಿ. ತಳವಾರ ಸೇರಿ ಅಪೂರ್ಣ ಮಾಹಿತಿಯೊಂದಿಗೆ ತಾಪಂನಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಗೆ ಹಾಜರಾದ ಅಧಿಕಾರಿಗಳನ್ನು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ತರಾಟೆಗೆ ತೆಗೆದುಕೊಂಡರು.

ಒಳಾಂಗಣ ಕ್ರೀಡಾಂಗಣ ನಿರ್ಮಿಸಲು 1 ಕೋಟಿ ರೂ. ಮೀಸಲಿರಿಸಿ 6 ವರ್ಷ ಕಳೆದಿವೆ. ಕಾಮಗಾರಿ ಪೂರ್ಣಗೊಂಡಿಲ್ಲ ಏಕೆ? ಎಂದು ಮಾಮನಿ ಪ್ರಶ್ನಿಸಿದರು. ಇದಕ್ಕೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೆಂದು ಲ್ಯಾಂಡ್‌ ಆರ್ಮಿ ಪ್ರಭುಕುಮಾರ ತಿಳಿಸಿದರು. ಅನುದಾನವಿದ್ದ ಕಾಮಗಾರಿಗಳೂ ನಡೆದಿಲ್ಲ. ಸಿ.ಸಿ ರಸ್ತೆಗೆ ನಾಗಾಲೋಟ ಹಾಗೂ ಕಟ್ಟಡ ಕಾಮಗಾರಿಗೆ ಆಮೆ ಗತಿ ವೇಗವಿದೆ.

ಎಲ್ಲದಕ್ಕೂ ಸರ್ಕಾರವೇ ಮುಂಗಡ ನೀಡುವುದಾದರೆ ನಿಗಮದಿಂದ ಶೇ.3 ಕಮೀಷನ್‌ ಏಕೆ ಪಡೆಯುತ್ತೀರಿ? ಎಂದು ಅಸಮಾದಾನ ವ್ಯಕ್ತಪಡಿಸಿ, ಅ.15ಕ್ಕೆ ಕ್ರೀಡಾಂಗಣ ಉದ್ಘಾಟನೆ ಆಗಬೇಕು ಎಂದು ಮಾಮನಿ ಸೂಚಿಸಿದರು.

ನಿಮ್ಮಲ್ಲಿಯ ಹಾಗೂ ಇಲ್ಲಿ ಇರಿಸಿದ ಮಾಹಿತಿ ಬೇರೆ ಏಕೆಂದು ಜಿಪಂ ಎಇಇ ತಳವಾರ ಅವರನ್ನು ಪ್ರಶ್ನಿಸಿ, ಯರಗಟ್ಟಿ, ಸತ್ತಿಗೇರಿಗಳು ಅಭಿವೃದ್ಧಿ ಕಂಡಿಲ್ಲ. ಯರಗಟ್ಟಿಯಲ್ಲಿ ಪೈಪ್‌ಲೈನ್‌ ಒಡೆದು ರಸ್ತೆ ಮೇಲೆ ನೀರು ನಿಲ್ಲುವಂತಾಗಿದೆ. ಗುತ್ತಿಗೆದಾರನಿಗೆ ತಿಳಿಸಿ. ಇಲ್ಲವೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಜೆಜೆಎಂ ಕಾಮಗಾರಿಗೆ ಜಾಲಿಕಟ್ಟಿ, ಚಿಕ್ಕಉಳ್ಳಿಗೇರಿಯಲ್ಲಿ ಮಾತ್ರ ಚಾಲನೆ ನೀಡಲಾಗಿದೆ. ಉಳಿದವು ಗಣನೆಗಿಲ್ಲ. ಮುಂದಿನ ಸಭೆಗೆ ಗ್ರಾಮವಾರು ಮಾಹಿತಿ ಸಲ್ಲಿಸಲು
ತಿಳಿಸಿದರು.

ಶಿರಸಂಗಿ, ಮುನವಳ್ಳಿ ಸೇರಿ ಹಲವೆಡೆ ಸಣ್ಣ ರೈತರಿಗೆ ಬೀಜ-ಗೊಬ್ಬರ ಕೊರತೆ ಇದೆ. ಬೂದಿಗೊಪ್ಪ ಗ್ರಾಮದ ರಸ್ತೆ ಮೇಲಿನ 150ಕ್ಕೂ ಹೆಚ್ಚಿನ ಎಲ್ಲ ಸಮುದಾಯದ ಹೂವಿನ ವ್ಯಾಪಾರಿಗಳಿಗೆ ದೂಡುವ ಗಾಡಿಯಿಲ್ಲ. ಬೇರೆ ತಾಲೂಕಿನಲ್ಲಿ ಗಾಡಿ ವ್ಯವಸ್ಥೆಯಿದೆ. ಹೂವು ಮಾರಿ ಬದುಕು ಕಟ್ಟಿಕೊಂಡಿದ್ದಾರೆ. ಇವರಿಗೆ ತೋಟಗಾರಿಕೆ ಇಲಾಖೆಯಿಂದ ವ್ಯವಸ್ಥೆ ಕಲ್ಪಿಸಲು ಸೂಚಿದರು.

ತಾಲೂಕಿನಲ್ಲಿ 5 ದೈಹಿಕ, 10 ಮುಖ್ಯಗುರುಗಳ ಹುದ್ದೆ ಖಾಲಿ ಇದೆ. ತೆಗ್ಗಿಹಾಳ, ಜಕಬಾಳಗಳಲ್ಲಿ ನಿವೃತ್ತಿ ಕಾರಣ ಬೇರೆ ಶಿಕ್ಷಕರಿಗೆ ಅಧಿ ಕಾರ ನೀಡಲಾಗಿದೆ. ತಾಲೂಕಿನಲ್ಲಿ ಶೇ.70 ಪುಸ್ತಕ ಹಂಚಿಕೆಯಾಗಿದೆ. ಕೆಲ ಅನುದಾನರಹಿತ ಶಾಲೆಗಳಿಗೆ ಹಣ ಪಾವತಿಸದ ಕಾರಣ ಪೂರೈಕೆ ಆಗಿಲ್ಲವೆಂದು ಬಿಇಒ ಎಸ್‌.ಸಿ. ಕರೀಕಟ್ಟಿ ಸಭೆಗೆ ಮಾಹಿತಿ ನೀಡಿದಾಗ ಸಿ.ಎಂ. ಮಾಮನಿ ಚಾರಿಟೇಬಲ್‌ನಿಂದ ಆ ಶಾಲೆಗಳಿಗೆ ಪುಸ್ತಕ ಪೂರೈಸಲಾಗುವುದೆಂದು ಮಾಮನಿ ತಿಳಿಸಿದರು.

ಇಲ್ಲಿ ಕೇವಲ 9 ಇಲಾಖೆ ಚರ್ಚಿತವಾದವು. ಇನ್ನುಳಿದ ಇಲಾಖೆ ಹಾಗೂ ಮಾಹಿತಿ ಇರದವುಗಳಿಗೆ ಜು.8ರ ಕೆಡಿಪಿ ಸಭೆ ಮುಂದುವರಿಸಲಾಗುವುದು ಎಂದು ಸೂಚಿಸಲಾಯಿತು. ಈ ವೇಳೆ ಆಡಳಿತಾಧಿಕಾರಿ ಶಶಿಧರ ಕುರೇರ, ಯಶವಂತಕುಮಾರ, ಪ್ರಶಾಂತ ಪಾಟೀಲ, ಎಂ.ಎಂ. ಮಠದ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.