ಬಾಲ ಕಲಾವಿದರ ಸುರಕ್ಷತೆ: 3 ಗಂಟೆಗೊಮ್ಮೆ ಬ್ರೇಕ್‌,ಶೇ.20 ಫಿಕ್ಸೆಡ್‌ ಡೆಪಾಸಿಟ್‌

ರಿಯಾಲಿಟಿ ಶೋದಲ್ಲಿರುವ ಮಕ್ಕಳಿಗೂ ಅನ್ವಯ

Team Udayavani, Jun 26, 2022, 7:10 AM IST

thumb chid 3

ನವದೆಹಲಿ:ಮನರಂಜನಾ ಕ್ಷೇತ್ರದಲ್ಲಿ ಮಕ್ಕಳನ್ನು ಸತತ 27 ದಿನಗಳಿಗಿಂತ ಹೆಚ್ಚು ದಿನ ದುಡಿಸುವಂತಿಲ್ಲ, ಪ್ರತಿ 3 ಗಂಟೆಗಳಿಗೊಮ್ಮೆ ಬಾಲಕಲಾವಿದರಿಗೆ ವಿರಾಮ ನೀಡಬೇಕು, ಅವರ ಆದಾಯದ ಶೇ.20ರಷ್ಟನ್ನು ನಿಶ್ಚಿತ ಠೇವಣಿಯಲ್ಲಿ ಜಮೆ ಮಾಡಬೇಕು…

ಬಾಲಕಲಾವಿದರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್‌ಸಿಪಿಸಿಆರ್‌) ಶನಿವಾರ ಹೊರಡಿಸಿರುವ ಹೊಸ ಕರಡು ಮಾರ್ಗಸೂಚಿಯಲ್ಲಿ ಈ ಎಲ್ಲ ಅಂಶಗಳನ್ನು ಕಡ್ಡಾಯಗೊಳಿಸಲಾಗಿದೆ.

ಶಿಕ್ಷಣಕ್ಕೆ ಅಡ್ಡಿಯಾಗಬಾರದು:
ಚಿತ್ರೀಕರಣದಲ್ಲಿ ಭಾಗಿಯಾಗಿರುವ ಮಕ್ಕಳ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ಮಾಪಕರೇ ನೋಡಿಕೊಳ್ಳಬೇಕು. ಮನರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಕಾರಣ ಶಾಲೆಗೆ ಮಕ್ಕಳು ಗೈರಾಗಿದ್ದರೆ, ಅಂಥ ಮಕ್ಕಳಿಗಾಗಿ ನಿರ್ಮಾಪಕರೇ ಒಬ್ಬ ಖಾಸಗಿ ಟ್ಯೂಟರ್‌ ಅನ್ನು ನೇಮಕ ಮಾಡಬೇಕು. ಮಕ್ಕಳಿಗೆ ನೀಡಲಾಗುವ ವೇತನದ ಶೇ.20ರಷ್ಟನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಫಿಕ್ಸೆಡ್‌ ಡೆಪಾಸಿಟ್‌ ಆಗಿ ಜಮೆ ಮಾಡಬೇಕು.
ಬಾಲಕಲಾವಿದರು ಕೆಲಸ ಮಾಡುವ ಪರಿಸರವು ಸುರಕ್ಷಿತವಾಗಿದ್ದು, ಅವರ ಮೇಲೆ ಯಾವುದೇ ದೌರ್ಜನ್ಯಗಳು ಆಗದಂತೆ ನೋಡಿಕೊಳ್ಳಬೇಕು ಎಂದೂ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಯಾವೆಲ್ಲ ಕ್ಷೇತ್ರಗಳಿಗೆ ಅನ್ವಯ?
ಟಿವಿ ಕಾರ್ಯಕ್ರಮಗಳು, ರಿಯಾಲಿಟಿ ಶೋಗಳು, ಧಾರಾವಾಹಿಗಳು, ಸುದ್ದಿ ಮತ್ತು ಮಾಹಿತಿ ಮಾಧ್ಯಮ, ಸಿನಿಮಾಗಳು, ಒಟಿಟಿ ಪ್ಲಾಟ್‌ಫಾರಂಗಳು, ಸಾಮಾಜಿಕ ಜಾಲತಾಣಗಳು, ಪ್ರದರ್ಶನ ಕಲೆ, ಜಾಹೀರಾತು ಹಾಗೂ ವಾಣಿಜ್ಯ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿರುವ ಮಕ್ಕಳಿಗೆ ಈ ನಿಯಮಗಳು ಅನ್ವಯವಾಗುತ್ತದೆ.

ಮಾರ್ಗಸೂಚಿಯಲ್ಲಿರುವ ಕಡ್ಡಾಯ ನಿಯಮಗಳು
– ಆಯಾ ಜಿಲ್ಲಾಡಳಿತದಲ್ಲಿ ಬಾಲ ಕಲಾವಿದರ ನೋಂದಣಿ ಕಡ್ಡಾಯ
– ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ನಿರ್ಮಾಪಕರು ನೋಡಿಕೊಳ್ಳಬೇಕು
– ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು, ಶೇ.20ರಷ್ಟನ್ನು ಮಕ್ಕಳ ಹೆಸರಲ್ಲೇ ಠೇವಣಿ ಇಡಬೇಕು
– ಮಕ್ಕಳೊಂದಿಗೆ ಡ್ರೆಸ್ಸಿಂಗ್‌ ರೂಂ ಹಂಚಿಕೊಳ್ಳಲು ವಯಸ್ಕರಿಗೆ ಅವಕಾಶ ನೀಡಬಾರದು
– ಅಪಾಯಕಾರಿ ಬೆಳಕು, ಕಿರಿಕಿರಿ ಉಂಟುಮಾಡುವ ಅಥವಾ ಕಲುಷಿತ ಕಾಸೆ¾ಟಿಕ್‌ಗಳಿಂದ ಮಕ್ಕಳನ್ನು ದೂರವಿಡಬೇಕು
– ನಿರ್ಮಾಣ ಹಂತದಲ್ಲಿ ಮಕ್ಕಳ ಹಕ್ಕುಗಳ ನಿಯಮ ಪಾಲಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಬೇಕು
– ಮಕ್ಕಳ ವೈದ್ಯಕೀಯ ಫಿಟೆ°ಸ್‌ ಪ್ರಮಾಣಪತ್ರ, ಪೊಲೀಸ್‌ ದೃಢೀಕರಣ ಪತ್ರವನ್ನು ಪ್ರೊಡಕ್ಷನ್‌ ಟೀಂ ಒದಗಿಸಬೇಕು
– 6 ವರ್ಷದೊಳಗಿನ ಮಕ್ಕಳನ್ನು ಬಳಸುವುದಿದ್ದರೆ ನೋಂದಾಯಿತ ನರ್ಸ್‌ ಎಲ್ಲ ಸಮಯದಲ್ಲೂ ಅಲ್ಲಿರಬೇಕು
– ಹೆತ್ತವರು ಅಥವಾ ಪೋಷಕರು ಉಪಸ್ಥಿತಿಯಿರುವಂತೆ ನೋಡಿಕೊಳ್ಳಬೇಕು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.