ಭಾರತದ ಆರ್ಥಿಕತೆಯ ಭದ್ರಕೋಟೆ ಎಂಎಸ್‌ಎಂಇ : ಇಂದು ವಿಶ್ವ ಎಂಎಸ್‌ಎಂಇ ದಿನ


Team Udayavani, Jun 27, 2022, 6:15 AM IST

ಭಾರತದ ಆರ್ಥಿಕತೆಯ ಭದ್ರಕೋಟೆ ಎಂಎಸ್‌ಎಂಇ : ಇಂದು ವಿಶ್ವ ಎಂಎಸ್‌ಎಂಇ ದಿನ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ) ದಿನವನ್ನು ಜೂನ್‌ 27ರಂದು ಆಚರಿಸಲಾಗುತ್ತದೆ. ಭಾರತೀಯ ಎಂಎಸ್‌ಎಂಇ ವಲಯವು ರಾಷ್ಟ್ರೀಯ ಆರ್ಥಿಕ ರಚನೆಯ ಬೆನ್ನೆಲು ಬಾಗಿದೆ ಮತ್ತು ಜಾಗತಿಕ ಆರ್ಥಿಕ ಆಘಾತ ಗಳು ಮತ್ತು ಪ್ರತಿಕೂಲಗಳನ್ನು ನಿವಾರಿಸಲು ಇದು ಸ್ಥಿತಿ ಸ್ಥಾಪಕತ್ವವನ್ನು ಒದಗಿ ಸುವ ಮೂಲಕ ಭಾರತೀಯ ಆರ್ಥಿಕತೆಯ ಭದ್ರ ಕೋಟೆ ಯಾಗಿ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿದೆ.

ದೇಶದ ಭೌಗೋಳಿಕ ವಿಸ್ತಾರದಲ್ಲಿ ಸುಮಾರು 63.4 ಮಿಲಿಯ ಘಟಕಗಳೊಂದಿಗೆ ಎಂಎಸ್‌ಎಂಇ ಉತ್ಪಾದನ ಜಿಡಿಪಿಯ ಸುಮಾರು ಶೇ. 6.11 ಮತ್ತು ಸೇವಾ ಚಟುವಟಿಕೆಗಳಿಂದ ಜಿಡಿಪಿಯ ಶೇ. 24.63 ಮತ್ತು ಭಾರತದ ಉತ್ಪಾದನೆಯ ಶೇ. 33.4ರಷ್ಟು ಕೊಡುಗೆ ನೀಡುತ್ತಿವೆ. ಎಂಎಸ್‌ಎಂಇಗಳು ಸುಮಾರು 120 ಮಿಲಿಯ ಜನರಿಗೆ ಉದ್ಯೋಗ ಒದಗಿಸಲು ಸಮರ್ಥ ವಾಗಿವೆ ಮತ್ತು ಭಾರತದ ಒಟ್ಟಾರೆ ರಫ್ತಿನ ಶೇ. 45ರಷ್ಟು ಕೊಡುಗೆ ನೀಡುತ್ತಿವೆ. ವಲಯವು ಸತತವಾಗಿ ಶೇ. 10ಕ್ಕಿಂತ ಹೆಚ್ಚಿನ ಬೆಳವಣಿಗೆ ದರವನ್ನು ಕಾಯ್ದುಕೊಂಡಿದೆ. ಸುಮಾರು ಶೇ. 20 ಎಂಎಸ್‌ಎಂಇಗಳು ಗ್ರಾಮೀಣ ಪ್ರದೇಶಗಳಿಂದ ಹೊರಗಿವೆ. ಇದು ಎಂಎಸ್‌ಎಂಇ ವಲಯದಲ್ಲಿ ಗಮ ನಾರ್ಹವಾದ ಗ್ರಾಮೀಣ ಉದ್ಯೋಗಿಗಳ ನಿಯೋಜನೆಯನ್ನು ಸೂಚಿಸುತ್ತದೆ ಹಾಗೂ ಸುಸ್ಥಿರ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಮತ್ತು ದೊಡ್ಡ ಪ್ರಮಾಣದ ಉದ್ಯೋಗವನ್ನು ಸೃಷ್ಟಿಸುವಲ್ಲಿ ಈ ಉದ್ಯಮಗಳ ಪ್ರಾಮುಖ್ಯತೆಯ ಪ್ರದರ್ಶನ ವಾಗಿದೆ.

ಅಭಿವೃದ್ಧಿಗೆ 20 ಲಕ್ಷ ಕೋ. ರೂ. ಪ್ಯಾಕೇಜ್‌
ಕೇಂದ್ರ ಸರಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಕಾರ್ಮಿಕರು, ಮಧ್ಯಮ ವರ್ಗ ಮತ್ತು ಇತರರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುಧಾರಣೆಗಳನ್ನು ಜಾರಿಗೆ ತರಲು ಆತ್ಮನಿರ್ಭರ ಭಾರತ ಅಭಿಯಾನ (ಎಬಿಎ) ಅಡಿಯಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್‌ ಅನ್ನು ಘೋಷಿಸಿದೆ.

ಎಂಎಸ್‌ಎಂಇಗೆ ಹೊಸ ವ್ಯಾಖ್ಯಾನ (2020)
ಅತೀ ಸಣ್ಣ ಕೈಗಾರಿಕೆ: ಒಂದು ಕೋಟಿ ರೂಪಾಯಿ ವರೆಗಿನ ಹೂಡಿಕೆ ಮತ್ತು 5 ಕೋಟಿ ರೂಪಾಯಿ ವರೆಗಿನ ವಹಿವಾಟು ಹೊಂದಿರುವ ಕಂಪೆನಿ
ಸಣ್ಣ ಕೈಗಾರಿಕೆ: 10 ಕೋಟಿ ರೂಪಾಯಿ ವರೆಗಿನ ಹೂಡಿಕೆ ಹಾಗೂ 50 ಕೋಟಿ ರೂ. ವರೆಗಿನ ವಹಿವಾಟು ಹೊಂದಿರುವ ಕಂಪೆನಿ
ಮಧ್ಯಮ ಕೈಗಾರಿಕೆ: 20 ಕೋಟಿ ರೂಪಾಯಿ ವರೆಗಿನ ಹೂಡಿಕೆ ಹಾಗೂ 200 ಕೋಟಿ ರೂಪಾಯಿ ವರೆಗಿನ ವಹಿವಾಟನ್ನು ಹೊಂದಿರುವ ಕಂಪೆನಿ ಇದರ ಜತೆಗೆ ವಹಿವಾಟು ಮತ್ತು ಹೂಡಿಕೆ ಯ ಮಾನದಂಡಗಳು ಸಂಯೋಜಿತವಾಗಿವೆ.

ಉದ್ಯಮ ನೋಂದಣಿ ಮತ್ತು ನವೀಕರಣ
ಎಲ್ಲ ಪ್ರಸ್ತುತ ಉದ್ಯೋಗ್‌ ಆಧಾರ್‌ ನೋಂದಾಯಿಸಿದ ಘಟಕಗಳು ಉದ್ಯಮ್‌ ಆಧಾರ್‌ MSME ಪೋರ್ಟಲ್‌ https://udyamregistration.gov.in ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು. 2021ರ ಎಪ್ರಿಲ್‌ 1ರಿಂದ ಉದ್ಯಮ ನೋಂದಣಿ ಸಂಖ್ಯೆಯನ್ನು ಹೊಂದಿರುವ ವ್ಯಕ್ತಿ ಅಥವಾ ಉದ್ಯಮವು ಪ್ರತೀ ಹಣಕಾಸು ವರ್ಷದ ಕೊನೆಯಲ್ಲಿ ಹೊಸದಾಗಿ ಆನ್‌ಲೈನ್‌ನಲ್ಲಿ ತನ್ನ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಅಂತಹ ಉದ್ಯಮ ಅಥವಾ ವ್ಯಕ್ತಿಯು ತಮ್ಮ ಆದಾಯ ತೆರಿಗೆ ರಿಟರ್ನ್ ಮತ್ತು ಹಿಂದಿನ ಹಣಕಾಸು ವರ್ಷದ ಜಿಎಸ್‌ಟಿ ರಿಟರ್ನ್ ವಿವರಗಳನ್ನು ಮತ್ತು ಸ್ವಯಂ ಘೋಷಣೆಯ ಆಧಾರದ ಮೇಲೆ ಅಗತ್ಯವಿರುವ ಇತರ ಹೆಚ್ಚುವರಿ ಮಾಹಿತಿಯನ್ನು ನವೀಕರಿಸ ಬೇಕಾಗುತ್ತದೆ.

ಸರಕಾರದ ನೀತಿಗಳು ಎಂಎಸ್‌ಎಂಇ ವಲಯವನ್ನು ಹೇಗೆ ಸುಧಾರಿಸಬಹುದು
1. ವಲಯದೊಳಗೆ ಡಿಜಿಟಲ್‌ ಅಳ ವಡಿಕೆಗೆ ಉತ್ತೇಜನ ನೀಡುವುದು
2. ಡಿಜಿಟಲ್‌ ಸಾಕ್ಷರತೆಯನ್ನು ಉತ್ತೇಜಿ ಸುವುದು
3. ಕೌಶಲದ ಸವಾಲುಗಳನ್ನು ಪರಿಹರಿ ಸುವುದು
4. ಜಿಎಸ್‌ಟಿ ಅನುಸರಣೆ ಸರಳವಾಗಿ ಸುವುದು
5. ಏಕಗವಾಕ್ಷಿ ತೆರವು ಸೌಲಭ್ಯದ ಮೂಲಕ ಎಲ್ಲ ವಿಧದ ಪರವಾನಿಗೆ ಮತ್ತು ಅನುಸರಣೆ ನಿಯಮಾವಳಿಗಳನ್ನು ಸರಾಗಗೊಳಿಸುವುದು
6. ಇ-ಕಾಮರ್ಸ್‌ ಮೂಲಕ ವಲಯವನ್ನು ವಿಶಾಲ ಮಾರುಕಟ್ಟೆಗಳಿಗೆ ಮಾರ್ಗದರ್ಶನ ಮಾಡುವ ಮಧ್ಯಸ್ಥಿಕೆಗಳನ್ನು ಮಾಡುವುದು
7. ಪರಿಣಾಮಕಾರಿ ನಿಧಿಯ ಮೂಲಕ ಹಣಕಾಸಿನ ನೆರವು
8. ಉತ್ತಮ ಮಾರುಕಟ್ಟೆ ಯೋಜನೆಗಳನ್ನು ಒದಗಿಸುವುದು.

– ಸಿಎ ನರಸಿಂಹ ನಾಯಕ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.