![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 29, 2022, 10:54 AM IST
ಉಡುಪಿ: ವೈಭವ್ ಫ್ಲಿಕ್ಸ್ ಅವರು ಮ್ಯಾಂಗೋ ಪಿಕ್ಕಲ್ ಎಂಟರ್ ಟೈನ್ಮೆಂಟ್ ಸಹಯೋಗದೊಂದಿಗೆ ನಿರ್ಮಾಣವಾಗಿದ್ದ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ ತೆರೆಕಂಡು ಒಂದು ತಿಂಗಳ ನಂತರವೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರದ ನಾಯಕ ನಟ ವಿನೀತ್, ನಟಿ ಚೈತ್ರಾ ಶೆಟ್ಟಿ ಮತ್ತು ನಿರ್ದೇಶಕ ರಾಹುಲ್ ಅಮೀನ್ ಬುಧವಾರ (ಜೂನ್ 29) ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರದ ವಿನೀತ್, ಚೈತ್ರಾ ಶೆಟ್ಟಿ, ರಾಹುಲ್ ಅಮೀನ್ ಅವರ ಜತೆ ಇಂದು ಸಂಜೆ 4ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಮಾತುಕತೆ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಚಿತ್ರದ ಯಶಸ್ಸು, ಸಿನಿ ಪಯಣದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.
ಚಿತ್ರ ಬಿಡುಗಡೆಯಾದ ದಿನದಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿಮಾ ಮೇ 20ರಂದು ಬಿಡುಗಡೆಯಾಗಿತ್ತು. ಜೂನ್ 13ರಂದು 25ನೇ ದಿನದ ಯಶಸ್ವಿ ಪ್ರದರ್ಶನದೊಂದಿಗೆ ಹಲವು ಚಿತ್ರಮಂದಿರಗಳಲ್ಲಿ ಒಂದು ತಿಂಗಳನ್ನು ಪೂರೈಸಿದೆ.
ಈ ಚಿತ್ರವನ್ನು ರಾಹುಲ್ ಅಮೀನ್ ನಿರ್ದೇಶಿಸಿದ್ದು, ಆನಂದ್ ಕುಂಪಲ ನಿರ್ಮಾಪಕರಾಗಿದ್ದಾರೆ. ವಿನೀತ್ ಕುಮಾರ್ ಕಥೆ ಬರೆದಿದ್ದು, ರಾಹುಲ್ ಮತ್ತು ವಿನೀತ್ ಚಿತ್ರಕಥೆ ಬರೆದಿದ್ದಾರೆ.
ಗಿರಿಗಿಟ್ ಚಿತ್ರ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಅವರ ಸಂಭಾಷಣೆ, ರಾಷ್ಟ್ರ ಪ್ರಶಸ್ತಿ ವಿಜೇತ ಪಡ್ಡಾಯಿ ಚಿತ್ರ ಖ್ಯಾತಿಯ ಕ್ಯಾಮೆರಾಮೆನ್ ವಿಷ್ಣುಪ್ರಸಾದ್ ಚಿತ್ರೀಕರಣ, ಸೃಜನ್ ಕುಮಾರ್ ತೋನ್ಸೆ ಸಂಗೀತ ನಿರ್ದೇಶಕ, ನವೀನ್ ಶೆಟ್ಟಿ ನೃತ್ಯ ಸಂಯೋಜನೆ.
ರಾಜ್ ಆ್ಯಂಡ್ ಸೌಂಡ್ಸ್ ಸಿನಿಮಾದ ನಾಯಕರಾಗಿ ವಿನೀತ್, ನಾಯಕಿಯಾಗಿ ಯಶ ಶಿವಕುಮಾರ್ ಹಾಗೂ ಕರಿಷ್ಮಾ ಅಮೀನ್ ನಟಿಸಿದ್ದಾರೆ. ಇನ್ನುಳಿದಂತೆ ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು ಮತ್ತು ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಮರ್ವಿನ್, ಪ್ರಸನ್ನ ಶೆಟ್ಟಿ ಬೈಲೂರು, ರವಿ ರಾಮಕುಂಜ, ಉಮೇಶ್ ಮಿಜಾರ್, ಚೈತ್ರ ಶೆಟ್ಟಿ ತಾರಾಗಣದಲ್ಲಿದ್ದಾರೆ.
ಸುಹಾನ್ ಪ್ರಸಾದ್, ಪವನ್ ಕುಮಾರ್, ಬಿ.ಅಶೋಕ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಅರ್ಪಿತ್ ಅಡ್ಯಾರ್, ಅಜಯ್ ಬಾಳಿಗ, ಸೀತಾರಾಮ ಶೆಟ್ಟಿ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.