![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 29, 2022, 2:33 PM IST
ಕುಣಿಗಲ್: ಪುರಸಭೆ ಮಾಜಿ ಅಧ್ಯಕ್ಷೆ ಪತಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ ಚಿನ್ನದ ಚೈನ್ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗುರುವ ಘಟನೆ ಪಟ್ಟಣದ ಚಿಕ್ಕಕೆರೆ ರೈಲ್ವೆ ಬಿಡ್ಜ್ ತೋಟದ ಬಳಿ ನಡೆದಿದೆ.
ಪಟ್ಟಣದ ಕೆಆರ್ ಎಸ್ ಆಗ್ರಹಾರ ನಿವಾಸಿ ಪುರಸಭೆ ಮಾಜಿ ಅಧ್ಯಕ್ಷೆ ನಳಿನಾ ಅವರ ಪತಿ ಬೈರಪ್ಪ ಚಿನ್ನದ ಚೈನ್ ಹಾಗೂ ಮೊಬೈಲ್ ಕಳೆದುಕೊಂಡ ವ್ಯಕ್ತಿ.
ಘಟನೆ ವಿವರ: ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಬೈರಪ್ಪ ಅವರು ತಮ್ಮ ತೋಟ ನೋಡಿಕೊಂಡು ಮನೆಗೆ ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬೈರಪ್ಪ ಅವರನ್ನು ಅಡ್ಡಗಟ್ಟಿ ಚಾಕುವಿನಿಂದ ಬೆದರಿಸಿ ಅವರ ಕತ್ತಿನಲ್ಲಿದ್ದ 60 ಗ್ರಾಂ ಚಿನ್ನದ ಚೈನ್ ಹಾಗೂ ಮೊಬೈಲ್ ಕಸಿದುಕೊಂಡರು.
ಅದೇ ಸಮಯಕ್ಕೆ ತಂದೆಯನ್ನು ಹುಡುಕಿಕೊಂಡು ಬಂದ ಮಗನನ್ನು ನೋಡಿದ ದುಷ್ಕರ್ಮಿಗಳು ಬೈಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪ್ರಕರಣದ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅವರ ಪತ್ನಿ, ಮಾಜಿ ಪುರಸಭಾ ಅಧ್ಯಕ್ಷೆ ನಳಿನಾ ತಿಳಿಸಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.