ಸಾಮೂಹಿಕ ವಿವಾಹ ಪುಣ್ಯದ ಕೆಲಸ: ಜಾರಕಿಹೊಳಿ

ವೀರತಪಸ್ವಿ ವೀರಭದ್ರ ಶಿವಾಚಾರ್ಯ ಬಿಚ್ಚಾಲಿ ಮಟಮಾರಿ ಗಬ್ಬೂರು ಆಶೀರ್ವಚನ ನೀಡಿದರು.

Team Udayavani, Jun 29, 2022, 6:06 PM IST

ಸಾಮೂಹಿಕ ವಿವಾಹ ಪುಣ್ಯದ ಕೆಲಸ: ಜಾರಕಿಹೊಳಿ

ದೇವದುರ್ಗ: ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಮಕ್ಕಳಿಗೆ ಡಾ| ಬಿ.ಆರ್‌. ಅಂಬೇಡ್ಕರ್‌, ಗೌತಮ ಬುದ್ಧ, ಬಸವಣ್ಣನವರ ವಿಚಾರ ಅಳವಡಿಸಿಕೊಳ್ಳಲು ತಿಳಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಅರಕೇರಾ ಗ್ರಾಮದಲ್ಲಿ ದಿ.ಎ. ವೆಂಕಟೇಶ ನಾಯಕ ಜನ್ಮದಿನ ನಿಮಿತ್ತ ಎ. ವೆಂಕಟೇಶ ನಾಯಕ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ದ್ವೇಷ, ವೈಮನಸ್ಸು ಬಾರದ ರೀತಿಯಲ್ಲಿ ಬದುಕು ಸಾಗಿಸಿ. ಸಾಮೂಹಿಕ ವಿವಾಹ ಮಾಡುವುದು ಪುಣ್ಯದ ಕೆಲಸ. ಎಷ್ಟೇ ಹಣವಿದ್ದರೂ ಸಮಾಜಮುಖೀ ಕೆಲಸ ಕಾರ್ಯ ಮಾಡಲು ಮನಸ್ಸು ಮಾಡುವುದಿಲ್ಲ. ಸಮಾಜಕ್ಕೆ ಮಠ-ಮಾನ್ಯಗಳ ಕೊಡುಗೆ ಅಪಾರ. ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹ ಮಾಡಬೇಕು. ಮದುವೆಯಿಂದ ಬಡ ಕುಟುಂಬಗಳಿಗೆ ಆಗುತ್ತಿರುವ ಸಾಲದ ಹೊರೆ ತಗ್ಗಿಸಲು ಸಾಮೂಹಿಕ ವಿವಾಹಗಳು ಅತ್ಯವಶ್ಯ ಎಂದರು.

ಬೃಹನ್ಮಠ ಜಾಲಹಳ್ಳಿ ಜಯಶಾಂತೇಶ್ವರ ಶಿವಾಚಾರ್ಯ ಮಾತನಾಡಿ, ದಿ.ಎ. ವೆಂಕಟೇಶ ನಾಯಕ 40 ವರ್ಷ ರಾಜಕಾರಣದಲ್ಲಿ ಕಪ್ಪುಚುಕ್ಕಿ ಇಲ್ಲದಂತೆ ಸೇವೆ ಮಾಡಿ, ಜನರ ಮನಸ್ಸು ಗೆದ್ದಿದ್ದಾರೆ. ಇದೀಗ ತಂದೆಯ ಮಾರ್ಗದಲ್ಲೇ ಮಕ್ಕಳು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ವೀರತಪಸ್ವಿ ವೀರಭದ್ರ ಶಿವಾಚಾರ್ಯ ಬಿಚ್ಚಾಲಿ ಮಟಮಾರಿ ಗಬ್ಬೂರು ಆಶೀರ್ವಚನ ನೀಡಿದರು. ಮಾಜಿ ಸಂಸದ ಬಿ.ವಿ. ನಾಯಕ ಮಾತನಾಡಿ, ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದ್ದು ದ್ವೇಷ ರಾಜಕಾರಣ ಮಾಡಬಾರದು. ಅಧಿಕಾರ ಯಾರಿಗೂ ಶಾಶ್ವತಲ್ಲ ಎಂದರು. ತಂದೆ ಹಾಕಿಕೊಟ್ಟ ಮಾರ್ಗದಲ್ಲೇ ರಾಜಕಾರಣ ಮಾಡುತ್ತಿದ್ದೇವೆ. ಯಾರಿಗೂ ಕೆಟ್ಟದ್ದು, ಮಾಡುವುದಿರಲಿ ಅಂತಹ ಆಲೋಚನೆಗಳನ್ನೇ ಮಾಡುವುದಿಲ್ಲ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಎನ್‌.ಎಸ್‌. ಬೋಸರಾಜ್‌, ಎ. ರಾಜಶೇಖರ ನಾಯಕ, ಶ್ರೀದೇವಿ ಎ. ರಾಜಶೇಖರ ನಾಯಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ, ಡಾ| ಪಂಚಾಕ್ಷರ ಶಿವಾಚಾರ್ಯ ಬೃಹನ್ಮಠ ನೀಲಗಲ್‌, ಶಾಂತಮಲ್ಲ ಶಿವಾಚಾರ್ಯ 108 ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠ ರಾಯಚೂರು, ಅಡವಿಲಿಂಗ ಮಹಾರಾಜರು ವೀರಗೋಟ, ಗಂಗಪ್ಪಯ್ಯ ಪೂಜಾರಿ, ಚರಬಸವ ಸ್ವಾಮಿಗಳು ಯರಮರಸ್‌, ಅಭಿನವ ಸೋಮನಾಥ ಶಿವಾಚಾರ್ಯ ಬೃಹನ್ಮಠ ನವಲಕಲ್‌, ಸದಾಶಿವ ತಾತ ಮುಂಡರಗಿ, ಸೈಯದ್‌ ಜೈಹಿರುದ್ಧೀನ್‌ ಪಾಷಾ, ಗಿರಿಮಲ್ಲೇಶ್ವರ ತಾತನವರು ದೇವರಗುಡ್ಡ, ಶಿವಣ್ಣ ತಾತ ಮುಂಡರಗಿ, ಸಾಂಬಯಪ್ಪ ತಾತನವರು ಜಾಗಟಗಲ್‌, ಶಾಸಕ ಬಸನಗೌಡ ದದ್ದಲ್‌, ಡಿ.ಎಸ್‌. ಹೂಲಗೇರಿ, ಎಂಎಲ್ಸಿ ಶರಣಗೌಡ ಬಯ್ಯಪೂರ, ಮಾಜಿ ಶಾಸಕ ಹನುಮಂತಪ್ಪ ಆಲ್ಕೋಡ್‌, ಹಂಪಯ್ಯ ನಾಯಕ, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್‌ ಇಟಗಿ, ಪುರಸಭೆ ಅಧ್ಯಕ್ಷ ಶರಣಗೌಡ ಗೌರಂಪೇಟೆ, ವಿಎಸ್‌ಎಸ್‌ಎನ್‌ ಅಧ್ಯಕ್ಷ ನಾಗರಾಜ ಪಾಟೀಲ್‌, ಆದನಗೌಡ ಬುಂಕಲದೊಡ್ಡಿ, ಬೂತಪ್ಪ ಹೇರುಂಡಿ, ಮಹಾದೇವಪ್ಪಗೌಡ, ರಂಗಪ್ಪ ಗೋಸಲ ಇತರರು ಇದ್ದರು.

ಟಾಪ್ ನ್ಯೂಸ್

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.