ಸಾಮೂಹಿಕ ವಿವಾಹ ಪುಣ್ಯದ ಕೆಲಸ: ಜಾರಕಿಹೊಳಿ

ವೀರತಪಸ್ವಿ ವೀರಭದ್ರ ಶಿವಾಚಾರ್ಯ ಬಿಚ್ಚಾಲಿ ಮಟಮಾರಿ ಗಬ್ಬೂರು ಆಶೀರ್ವಚನ ನೀಡಿದರು.

Team Udayavani, Jun 29, 2022, 6:06 PM IST

ಸಾಮೂಹಿಕ ವಿವಾಹ ಪುಣ್ಯದ ಕೆಲಸ: ಜಾರಕಿಹೊಳಿ

ದೇವದುರ್ಗ: ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಮಕ್ಕಳಿಗೆ ಡಾ| ಬಿ.ಆರ್‌. ಅಂಬೇಡ್ಕರ್‌, ಗೌತಮ ಬುದ್ಧ, ಬಸವಣ್ಣನವರ ವಿಚಾರ ಅಳವಡಿಸಿಕೊಳ್ಳಲು ತಿಳಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಅರಕೇರಾ ಗ್ರಾಮದಲ್ಲಿ ದಿ.ಎ. ವೆಂಕಟೇಶ ನಾಯಕ ಜನ್ಮದಿನ ನಿಮಿತ್ತ ಎ. ವೆಂಕಟೇಶ ನಾಯಕ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ದ್ವೇಷ, ವೈಮನಸ್ಸು ಬಾರದ ರೀತಿಯಲ್ಲಿ ಬದುಕು ಸಾಗಿಸಿ. ಸಾಮೂಹಿಕ ವಿವಾಹ ಮಾಡುವುದು ಪುಣ್ಯದ ಕೆಲಸ. ಎಷ್ಟೇ ಹಣವಿದ್ದರೂ ಸಮಾಜಮುಖೀ ಕೆಲಸ ಕಾರ್ಯ ಮಾಡಲು ಮನಸ್ಸು ಮಾಡುವುದಿಲ್ಲ. ಸಮಾಜಕ್ಕೆ ಮಠ-ಮಾನ್ಯಗಳ ಕೊಡುಗೆ ಅಪಾರ. ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹ ಮಾಡಬೇಕು. ಮದುವೆಯಿಂದ ಬಡ ಕುಟುಂಬಗಳಿಗೆ ಆಗುತ್ತಿರುವ ಸಾಲದ ಹೊರೆ ತಗ್ಗಿಸಲು ಸಾಮೂಹಿಕ ವಿವಾಹಗಳು ಅತ್ಯವಶ್ಯ ಎಂದರು.

ಬೃಹನ್ಮಠ ಜಾಲಹಳ್ಳಿ ಜಯಶಾಂತೇಶ್ವರ ಶಿವಾಚಾರ್ಯ ಮಾತನಾಡಿ, ದಿ.ಎ. ವೆಂಕಟೇಶ ನಾಯಕ 40 ವರ್ಷ ರಾಜಕಾರಣದಲ್ಲಿ ಕಪ್ಪುಚುಕ್ಕಿ ಇಲ್ಲದಂತೆ ಸೇವೆ ಮಾಡಿ, ಜನರ ಮನಸ್ಸು ಗೆದ್ದಿದ್ದಾರೆ. ಇದೀಗ ತಂದೆಯ ಮಾರ್ಗದಲ್ಲೇ ಮಕ್ಕಳು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ವೀರತಪಸ್ವಿ ವೀರಭದ್ರ ಶಿವಾಚಾರ್ಯ ಬಿಚ್ಚಾಲಿ ಮಟಮಾರಿ ಗಬ್ಬೂರು ಆಶೀರ್ವಚನ ನೀಡಿದರು. ಮಾಜಿ ಸಂಸದ ಬಿ.ವಿ. ನಾಯಕ ಮಾತನಾಡಿ, ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದ್ದು ದ್ವೇಷ ರಾಜಕಾರಣ ಮಾಡಬಾರದು. ಅಧಿಕಾರ ಯಾರಿಗೂ ಶಾಶ್ವತಲ್ಲ ಎಂದರು. ತಂದೆ ಹಾಕಿಕೊಟ್ಟ ಮಾರ್ಗದಲ್ಲೇ ರಾಜಕಾರಣ ಮಾಡುತ್ತಿದ್ದೇವೆ. ಯಾರಿಗೂ ಕೆಟ್ಟದ್ದು, ಮಾಡುವುದಿರಲಿ ಅಂತಹ ಆಲೋಚನೆಗಳನ್ನೇ ಮಾಡುವುದಿಲ್ಲ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಎನ್‌.ಎಸ್‌. ಬೋಸರಾಜ್‌, ಎ. ರಾಜಶೇಖರ ನಾಯಕ, ಶ್ರೀದೇವಿ ಎ. ರಾಜಶೇಖರ ನಾಯಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ, ಡಾ| ಪಂಚಾಕ್ಷರ ಶಿವಾಚಾರ್ಯ ಬೃಹನ್ಮಠ ನೀಲಗಲ್‌, ಶಾಂತಮಲ್ಲ ಶಿವಾಚಾರ್ಯ 108 ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠ ರಾಯಚೂರು, ಅಡವಿಲಿಂಗ ಮಹಾರಾಜರು ವೀರಗೋಟ, ಗಂಗಪ್ಪಯ್ಯ ಪೂಜಾರಿ, ಚರಬಸವ ಸ್ವಾಮಿಗಳು ಯರಮರಸ್‌, ಅಭಿನವ ಸೋಮನಾಥ ಶಿವಾಚಾರ್ಯ ಬೃಹನ್ಮಠ ನವಲಕಲ್‌, ಸದಾಶಿವ ತಾತ ಮುಂಡರಗಿ, ಸೈಯದ್‌ ಜೈಹಿರುದ್ಧೀನ್‌ ಪಾಷಾ, ಗಿರಿಮಲ್ಲೇಶ್ವರ ತಾತನವರು ದೇವರಗುಡ್ಡ, ಶಿವಣ್ಣ ತಾತ ಮುಂಡರಗಿ, ಸಾಂಬಯಪ್ಪ ತಾತನವರು ಜಾಗಟಗಲ್‌, ಶಾಸಕ ಬಸನಗೌಡ ದದ್ದಲ್‌, ಡಿ.ಎಸ್‌. ಹೂಲಗೇರಿ, ಎಂಎಲ್ಸಿ ಶರಣಗೌಡ ಬಯ್ಯಪೂರ, ಮಾಜಿ ಶಾಸಕ ಹನುಮಂತಪ್ಪ ಆಲ್ಕೋಡ್‌, ಹಂಪಯ್ಯ ನಾಯಕ, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್‌ ಇಟಗಿ, ಪುರಸಭೆ ಅಧ್ಯಕ್ಷ ಶರಣಗೌಡ ಗೌರಂಪೇಟೆ, ವಿಎಸ್‌ಎಸ್‌ಎನ್‌ ಅಧ್ಯಕ್ಷ ನಾಗರಾಜ ಪಾಟೀಲ್‌, ಆದನಗೌಡ ಬುಂಕಲದೊಡ್ಡಿ, ಬೂತಪ್ಪ ಹೇರುಂಡಿ, ಮಹಾದೇವಪ್ಪಗೌಡ, ರಂಗಪ್ಪ ಗೋಸಲ ಇತರರು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.