![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 1, 2022, 9:14 AM IST
ಸುಳ್ಯ/ ಅರಂತೋಡು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ- ಸಂಪಾಜೆ ಗಡಿ ಭಾಗದಲ್ಲಿ ನಡುರಾತ್ರಿ ಮತ್ತೆ ಭೂಮಿ ಕಂಪಿಸುವ ಮೂಲಕ ಒಂದೇ ವಾರದಲ್ಲಿ ನಾಲ್ಕನೇ ಭಾರಿಗೆ ಭೂ ಕಂಪನದ ಅನುಭವ ಜನತೆಗೆ ಆಗಿದೆ.
ಮಧ್ಯರಾತ್ರಿ ಉಂಟಾದ ಭೀಕರ ಶಬ್ದ ಮತ್ತು ಕಂಪನದಿಂದ ಜನತೆ ನಲುಗಿ ಎಚ್ಚರಗೊಂಡಿದ್ದಾರೆ. ರಾತ್ರಿ 1.15 ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿದ್ದಾರೆ. ಸಂಪಾಜೆ, ಗುತ್ತಿಗಾರು, ಉಬರಡ್ಕ, ಗೂನಡ್ಕ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ, ಎಲಿಮಲೆ, ದರ್ಖಾಸು ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂ ಕಂಪನದ ಅನುಭವವಾಗಿದೆ.
ಇದನ್ನೂ ಓದಿ:ಕೋವಿಡ್ ವೇಳೆ ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಮಕ್ಕಳ ದಾಖಲಾತಿ ತೀವ್ರ ಕುಸಿತ
ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು ಜನರ ಆತಂಕ ಹೆಚ್ಚಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.