ಆರು ತಿಂಗಳು ನೂರು ಸಿನಿಮಾ; ಸ್ಯಾಂಡಲ್ ವುಡ್ ನಲ್ಲಿ ಶತಕ ಸಂಭ್ರಮ


Team Udayavani, Jul 1, 2022, 2:44 PM IST

ಆರು ತಿಂಗಳು ನೂರು ಸಿನಿಮಾ; ಸ್ಯಾಂಡಲ್ ವುಡ್ ನಲ್ಲಿ ಶತಕ ಸಂಭ್ರಮ

ಕನ್ನಡ ಚಿತ್ರರಂಗಕ್ಕೆ ಇಂದು ನೂರರ ಸಂಭ್ರಮ! ಈ ಸಂಭ್ರಮದಲ್ಲಿ ಅನೇಕರು ಗೆದ್ದಿದ್ದಾರೆ, ಇನ್ನು ಕೆಲವರು ನೆಲೆ ಕಂಡುಕೊಂಡಿದ್ದಾರೆ, ಮತ್ತೂಂದಿಷ್ಟು ಮಂದಿಗೆ ಕಹಿ ಅನುಭವವೂ ಆಗಿದೆ.

– ಏನಿದು ನೂರರ ಸಂಭ್ರಮ ಎಂದು ನೀವು ಕೇಳಬಹುದು. 2022ರ ಮೊದಲ ಆರು ತಿಂಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಿಡುಗಡೆಯಾದ ಚಿತ್ರಗಳ ಸಂಖ್ಯೆ ಇಂದಿಗೆ (ಜು.1) 100 ಆಗುತ್ತದೆ.

ಇಂದು ಬಿಡುಗಡೆಯಾಗುತ್ತಿರುವ ಶಿವರಾಜ್‌ಕುಮಾರ್‌ ಅವರ “ಬೈರಾಗಿ’ ಈ ವರ್ಷದ ನೂರನೇ ಸಿನಿಮಾ. ಇದರಲ್ಲಿ ಈ ವರ್ಷ ಓಟಿಟಿಯಲ್ಲಿ ಬಿಡುಗಡೆಯಾದ “ಫ್ಯಾಮಿಲಿ ಪ್ಯಾಕ್‌’, “ಮ್ಯಾನ್‌ ಆಫ್ ದಿ ಮ್ಯಾಚ್‌’ ಹಾಗೂ “ಡಿಯರ್‌ ವಿಕ್ರಂ’ ಚಿತ್ರಗಳು ಕೂಡಾ ಸೇರುತ್ತವೆ. ಅಲ್ಲಿಗೆ ಆರು ತಿಂಗಳಲ್ಲಿ ಕನ್ನಡ ಚಿತ್ರರಂಗ ನೂರು ಸಿನಿಮಾಗಳಿಗೆ ಸಾಕ್ಷಿಯಾದಂತಾಗಿದೆ.

ಮೂರು ವರ್ಷಗಳ ಹಿಂದೆ ಅಂದರೆ ಕೋವಿಡ್‌ ಬರುವ ಮುಂಚೆ ಬಿಡುಗಡೆ ಕಂಡ ಚಿತ್ರಗಳ ಸಂಖ್ಯೆಗೆ ಹೋಲಿಸಿದರೆ ಈ ಸಂಖ್ಯೆಯೇನೂ ದೊಡ್ಡದ್ದಲ್ಲ. ಆದರೆ, ಕೋವಿಡ್‌ ನಂತರ ಸಾಕಷ್ಟು ಕಷ್ಟ-ನಷ್ಟಗಳನ್ನು ಅನುಭವಿಸಿದ ಕನ್ನಡ ಚಿತ್ರರಂಗ ಮತ್ತೆ ಚೇತರಿಕೆಯ ಹಾದಿಯಲ್ಲಿದೆ ಎಂಬುದಕ್ಕೆ ಈ ಸಂಖ್ಯೆ ಹೆಚ್ಚು ಮಹತ್ವ ಪಡೆಯುತ್ತದೆ.

ಬದಲಾದ ಗೆಲುವಿನ ಮಾನದಂಡ: ಬಿಡುಗಡೆಯಾದ ನೂರು ಸಿನಿಮಾಗಳಲ್ಲಿ ಎಷ್ಟು ಸಿನಿಮಾಗಳು ಗೆದ್ದಿವೆ ಎಂದರೆ ಉತ್ತರಿಸೋದು ಕಷ್ಟ. ಏಕೆಂದರೆ ಇವತ್ತು ಗೆಲುವಿನ ಮಾನದಂಡ ಬದಲಾಗಿದೆ. ಕೆಲವು ವರ್ಷಗಳ ಹಿಂದೆ ಚಿತ್ರ ಮಂದಿರಗಳಲ್ಲಿ ಓಡಿ, ಹಣ ಮಾಡಿದ ಸಿನಿಮಾಗಳಷ್ಟೇ ಹಿಟ್‌ ಸಿನಿಮಾಗಳು ಎಂದು ಪರಿಗಣಿಸಲಾಗುತ್ತಿತ್ತು. ಆದರೆ, ಕಾಲ ಬದಲಾದಂತೆ, ತಂತ್ರಜ್ಞಾನ ಮುಂದುವರೆದು, ಮನರಂಜನೆಗೆ ಹೊಸ ಹೊಸ ವೇದಿಕೆಗಳು ಸಿಗುತ್ತಿದ್ದಂತೆ ಸಿನಿಮಾದ ಗೆಲುವಿನ ಮಾನದಂಡ ಕೂಡಾ ಬದಲಾಗಿದೆ. ಇದರಿಂದಾಗಿ ಸಿನಿಮಾ ಬಿಡುಗಡೆಗೆ ಮುನ್ನವೇ ದೊಡ್ಡ ಮಟ್ಟದ ಬಿಝಿನೆಸ್‌ ಮಾಡಿ, ನಿರ್ಮಾಪಕನ ಜೇಬು ತುಂಬಿಸಿದ ಅನೇಕ ಸಿನಿಮಾಗಳು ನಮ್ಮ ಕಣ್ಣ ಮುಂದಿವೆ.

ಇದನ್ನೂ ಓದಿ:ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್‌’ ಜರ್ನಿ ಶುರು

ಹಾಗಂತ ಈ ಸಿನಿಮಾಗಳು ಚಿತ್ರಮಂದಿರಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿಲ್ಲ. ಹಾಗಾಗಿ, ಗೆಲುವು-ಸೋಲನ್ನು ನಿರ್ಧರಿಸೋದು ಕಷ್ಟ. ಆದರೆ, 2022 ಕನ್ನಡ ಚಿತ್ರರಂಗದ ಪಾಲಿಗೆ ಅದೃಷ್ಟದ ಹಾಗೂ ದೊಡ್ಡ ಗೆಲುವು ತಂದುಕೊಟ್ಟ ವರ್ಷ ಎಂಬುದರಲ್ಲಿ ಎರಡು ಮಾತಿಲ್ಲ. “ಕೆಜಿಎಫ್-2′, “777 ಚಾರ್ಲಿ’ ಚಿತ್ರಗಳು ಪರಭಾಷೆ ಕೂಡಾ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದರೆ, ಇನ್ನೊಂದಿಷ್ಟು ಕನ್ನಡ ಚಿತ್ರಗಳು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಂತೆ ಮಾಡುವಲ್ಲಿ ಯಶಸ್ವಿಯಾಗಿವೆ.

ಭರ್ಜರಿ ಓಟ: ಸದ್ಯ ಬೇರೆ ಚಿತ್ರರಂಗಗಳಿಗೆ ಹೋಲಿಕೆ ಮಾಡಿದರೆ ಕನ್ನಡ ಚಿತ್ರರಂಗದ ಓಟ ಜೋರಾಗಿಯೇ ಇದೆ. ಹೊಸಬರ, ಸ್ಟಾರ್‌ಗಳ ಸಿನಿಮಾಗಳು ಬಿಡುಗಡೆಯಾಗುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಟಾರ್‌ ಸಿನಿಮಾಗಳು ಹಾಗೂ ಹೊಸಬರ ನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗಲಿವೆ. ಆ ಚಿತ್ರಗಳು ಕೂಡಾ ಕಮಾಲ್‌ ಮಾಡಿದರೆ, ಕನ್ನಡ ಚಿತ್ರರಂಗ ಮತ್ತಷ್ಟು ಯಶಸ್ಸನ್ನು ತನ್ನದಾಗಿಸಿಕೊಳ್ಳಲಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.