![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 1, 2022, 8:02 PM IST
ಬಂಟ್ವಾಳ : ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿ ಅಪ್ಪ ಮಗ ಇಬ್ಬರು ಆರೋಪಿಗಳನ್ನು ಬಂದಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ ಮೌಲ್ಯದ ಮಾಂಸವನ್ನು ವಶಕ್ಕೆ ಪಡೆದ ಘಟನೆ ಜುಲೈ 1 ರ ಶುಕ್ರವಾರ ಮುಂಜಾನೆ ನಡೆದಿದೆ.
ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್ ಬಂಧಿತ ಆರೋಪಿಗಳು. ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಸ್ಥಳೀಯ ರಿಂದ ಮಾಹಿತಿ ಲಭ್ಯವಾಗಿತ್ತು.
ಕದ್ದು ತಂದ ದನಗಳನ್ನು ಇವರ ಮನೆಯಲ್ಲಿ ವಧೆ ಮಾಡಲಾಗುತ್ತಿತ್ತು, ಅ ಬಳಿಕ ಮಾಂಸ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಪೋಲಿಸರಿಗೆ ಲಭ್ಯವಾಗಿತ್ತು ಈ ಹಿನ್ನೆಲೆಯಲ್ಲಿ ಎಸ್ ಐ.ಅವಿನಾಶ್ ನೇತ್ರತ್ವದ ನಗರ ಠಾಣಾ ಪೋಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಪರಾರಿಯಾಗದಂತೆ ಬಂಧಿಸಿದ್ದಾರೆ.
ಅನೇಕ ಬಾರಿ ದಾಳಿ ನಡೆದಾಗ ಆರೋಪಿಗಳು ಪರಾರಿಯಾಗುತ್ತಾರೆ ಸೊತ್ತುಗಳು ವಶಕ್ಕೆ ಪಡೆಯುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬಂಟ್ವಾಳ ತಾಲೂಕಿನ ಪೋಲೀಸರ ಕಾರ್ಯತತ್ಪರತೆಯಿಂದ ಅಕ್ರಮ ದಂಧೆಯ ಬಹುತೇಕ ಅರೋಪಿಗಳು ಬಂಧನವಾಗುತ್ತಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.