ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
Team Udayavani, Jul 1, 2022, 10:49 PM IST
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ನಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆಯನ್ನು ಈ ಹಿಂದೆ ಆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಸತತವಾಗಿ ನಿಷೇಧಿಸುತ್ತಾ ಬಂದಿತ್ತೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಪಿಸಿದ್ದಾರೆ.
ಗುಜರಾತ್ನ ಗಾಂಧಿನಗರ ಜಿಲ್ಲೆಯ ರೂಪಲ್ ಹಾಗೂ ವಾಸನ್ ಎಂಬ ಹಳ್ಳಿಗಳ ಕೆರೆಗಳ ಸೌಂದರ್ಯಾಭಿವೃದ್ಧಿ ಹಾಗೂ ಇನ್ನಿತರ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಆನಂತರ ನಡೆದ ರ್ಯಾಲಿಯಲ್ಲಿ ಮಾತನಾಡಿದರು.
ಇಂದು ಗುಜರಾತ್ನ ಅಹ್ಮದಾಬಾದ್ನಲ್ಲಿ 145ನೇ ಜಗನ್ನಾಥ ರಥೋತ್ಸವ ನಡೆಯುತ್ತಿದೆ. ಆದರೆ, ಗುಜರಾತ್ನಲ್ಲಿ 1995ಕ್ಕೂ ಮುನ್ನಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ, ರಥೋತ್ಸವಕ್ಕೆ ಅಡ್ಡಿಯೊಡ್ಡಿತ್ತು.
ರಥಯಾತ್ರೆ ಸಾಗುವ ಕಡೆಯಲ್ಲಿಲ್ಲಾ ಕರ್ಫ್ಯೂ ಜಾರಿಗೊಳಿಸುವ ಮೂಲಕ ರಥೋತ್ಸವ ನಡೆಯದಂತೆ ನೋಡಿಕೊಳ್ಳುತ್ತಿತ್ತು. ಆದರೆ, ಗುಜರಾತ್ ಜನತೆ ಬಿಜೆಪಿಗೆ ಅಧಿಕಾರ ಕೊಟ್ಟಾಗಿನಿಂದ ಪರಿಸ್ಥಿತಿ ಬದಲಾಯಿತು. ಪ್ರತಿ ವರ್ಷ ರಥೋತ್ಸವ ನಡೆಯುತ್ತಲೇ ಇದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.