ಹುಮನಾಬಾದ್: ಸದಾಶಿವ ವರದಿ ಜಾರಿಗೆ ಪ್ರತಿಭಟನೆ; ಹೆದ್ದಾರಿ ತಡೆಗೆ ಯತ್ನ
Team Udayavani, Jul 2, 2022, 2:03 PM IST
ಹುಮನಾಬಾದ್: ಸದಾಶಿವ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮಿತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 65 ತಡೆಯಲು ಮುಂದಾದ ಸಂದರ್ಭದಲ್ಲಿ ಪ್ರಮುಖ 30ಕ್ಕೂ ಅಧಿಕ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು.
ನೂರಾರು ವರ್ಷಗಳಿಂದ ಶೋಷಣೆಗೆ ಒಳಪಟ್ಟ ಸಮುದಾಯ ತನ್ನ ಹಕ್ಕಿಗಾಗಿ ಬೀದಿಗಿಳಿದಿದೆ. ಸರಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಯುವುದು ಅನಿವಾರ್ಯವಾಗುತ್ತದೆ. ಸರ್ಕಾರಗಳು ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕು. ಕೂಡಲೇ ವರದಿ ಜಾರಿಗೆ ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರ ಪ್ರಾಂಗಣದಲ್ಲಿ ಜಮಾಗೊಂಡಿದ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ ಪ್ರತಿಭಟನಾಕಾರರು ಕೆಲಹೊತ್ತು ಪ್ರವಾಸಿಮಂದಿರ ಪ್ರಾಂಗಣದಲ್ಲಿಯೇ ಪ್ರತಿಭಟನೆ ನಡೆಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.