![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 3, 2022, 9:56 AM IST
ಕಲಬುರಗಿ: ಡಾ| ಫ.ಗು. ಹಳಕಟ್ಟಿ ಹರಿದು- ಹಂಚಿಹೋಗಿದ್ದ ವಚನಗಳನ್ನು ಮೂಲ ಸೌಕರ್ಯ ಇಲ್ಲದೇ ಮನೆ, ಮಠಗಳಿಗೆ ಹೋಗಿ ವಚನಗಳನ್ನು ಸಂಗ್ರಹಣೆ ಮಾಡಿದವರು. ಅವರ ಶ್ರಮದ ಫಲವಾಗಿಯೇ ವಚನಗಳನ್ನು ತಿಳಿದುಕೊಳ್ಳಲು ಸಹಾಯವಾಗಿದೆ ಎಂದು ಮಾಜಿ ಮಹಾಪೌರ ಶರಣ ಕುಮಾರ ಮೋದಿ ಹೇಳಿದರು.
ಶನಿವಾರ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಸಮಿತಿ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ದ ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಡಾ| ಫ.ಗು. ಹಳಕಟ್ಟಿ ಬಸವಣ್ಣನವರ ವಚನಗಳನ್ನು ಒಂದುಗೂಡಿಸಿ ನಮ್ಮೆಲ್ಲರಿಗೂ ವಚನ ಸಾಹಿತ್ಯದ ಅರಿವು ಮೂಡಿಸಿದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಸಮಿತಿ ಜಿಲ್ಲಾಧ್ಯಕ್ಷ ಶಿವಲಿಂಗಪ್ಪ ಈರಣಪ್ಪಾ ಅಷ್ಟಗಿ ಮಾತನಾಡಿ, ಡಾ| ಫ.ಗು. ಹಳಕಟ್ಟಿ ಶರಣರ ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆಲ್ಲ ಅದರ ಮಹತ್ವ ತಿಳಿಯುವಂತೆ ಪ್ರಚಾರಗೊಳಿಸಿದ ಫಲವಾಗಿ ವಚನ ಸಾಹಿತ್ಯ ಜನರಿಗೆ ತಲುಪಲು ಸಾಧ್ಯವಾಯಿತು ಎಂದು ಹೇಳಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಸಂಘ ಸಂಸ್ಥೆಗಳು ಹಾಗೂ ಶಾಲೆ- ಕಾಲೇಜುಗಳನ್ನು ನಿರ್ಮಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ಜಾಗತಿಕ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವ ಮಾತನಾಡಿದರು.
ಗುಲಬರ್ಗಾ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ನಿವೃತ್ತ ಪ್ರಾಧ್ಯಾಪಕಿ ಜಯಶ್ರೀ ದಂಡೆ ಡಾ| ಫ.ಗು. ಹಳಕಟ್ಟಿ ಜೀವನದ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾಡಳಿತ ಚುನಾವಣೆಯ ಶಾಖೆ ತಹಶೀಲ್ದಾರ್ ಮಹಾಂತೇಶ ಮುಡಬಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಗಣ್ಯ ವ್ಯಕ್ತಿಗಳು ಡಾ| ಫ.ಗು.ಹಳಕಟ್ಟಿ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಹಟಗಾರ ಸಮಾಜದ ಗೌರವಾಧ್ಯಕ್ಷ ಸೂರ್ಯಕಾಂತ ಸೊನ್ನದ, ಉಪಾಧ್ಯಕ್ಷ ಸಂಗಮನಾಥ ರೇವತಗಾಂವ, ಪ್ರಧಾನ ಕಾರ್ಯದರ್ಶಿ, ವಿನೋದಕುಮಾರ ಶ. ಜೆನವೇರಿ, ಖಜಾಂಚಿ ರಾಜು ಕೋಷ್ಠಿ ಹಾಗೂ ಸಮಾಜದ ಮುಖಂಡರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.