ಆಮೆಗತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ


Team Udayavani, Jul 3, 2022, 4:35 PM IST

tdy-17

ಹಾಸನ: ರಾಷ್ಟ್ರೀಯ ಹೆದ್ದಾರಿ 75 ರ ಹಾಸನ – ಸಕಲೇಶಪುರ ನಡುವೆ ಚತುಷ್ಪಥ ರಸ್ತೆ ನಿರ್ಮಾಣದ ಅವ್ಯವಸ್ಥೆಯ ಬಗ್ಗೆ ಶಾಸಕರು, ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ವಿಳಂಬ ದಿಂದಾಗುವ ಅನಾಹುತಗಳಿಗೆ ಎನ್‌ಎಚ್‌ಎಐ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.

ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಶನಿವಾರವೂ ಮುಂದುವರಿದ ಕೇಂದ್ರ ಪುರಸ್ಕೃತ ಯೋಜನೆಗಳ ಪಗ್ರತಿ ಪರಿಶೀಲನಾ ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಜಾನ್‌ಬಾಜ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಳೆದ ಜನವರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜೂನ್‌ ವೇಳೆಗೆ ಹಾಸನ – ಸಕಲೇಶಪುರ ನಡುವೆ ಒಂದು ಪಥ ನಿರ್ಮಾ ಣವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ಇನ್ನೂ 9 ಕಿ.ಮೀ. ನಿರ್ಮಾಣ ಬಾಕಿ ಇದೆ ಎಂದು ಹೇಳುತ್ತಿದ್ದೀರಿ. ಹೀಗಾದರೆ ಕಾಮಗಾರಿ ಮುಗಿಯುವುದು ಯಾವಾಗ ? ಈಗ ನಡೆಯುತ್ತಿರುವ ಕಾಮಗಾರಿಯೂ ಕಳಪೆ ಎಂಬ ದೂರುಗಳಿವೆ. ಈ ರಸ್ತೆ ಹತ್ತಾರುವರ್ಷ ಬಾಳಿಕೆ ಬರುತ್ತದೆಯೇ ಎಂದು ಪ್ರಜ್ವಲ್‌ ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿಗೆ ತ್ವರಿತಗೊಳಿಸಿ: ಒಟ್ಟು ಕಾಮಗಾರಿಯಲ್ಲಿ ಈವರೆಗೆ ಕೇವಲ ಶೇ. 48 ರಷ್ಟು ಮಾತ್ರ ಪ್ರಗತಿಯಾಗಿದ್ದು, ಪ್ರತಿ ಬಾರಿ ಸಭೆಯಲ್ಲಿ ವಿನಾಯ್ತಿ ಕೇಳುವುದು ಸಂಮಂಜಸವಲ್ಲ. ಜನರಿಗೆ ಉತ್ತರ ಹೇಳುವುದು ನಮಗೆ ಕಷ್ಟ. ಕನಿಷ್ಠ ಒಂದು ಪಥ ರಸ್ತೆಯನ್ನಾದರೂ ತ್ವರಿತವಾಗಿ ನಿರ್ಮಿಸಿ ಎಂದು ತಾಕೀತು ಮಾಡಿದರು. ರಸ್ತೆ ಸಮಸ್ಯೆಯಿದ ಅಪಘಾತಗಳಿಗೆ ಅಧಿಕಾರಿಗಳನ್ನ ಹೊಣೆಗಾರರನ್ನಾಗಿ ಮಾಡಿ ಎಂದು ಶಾಸಕರಾದ ಎಚ್‌.ಕೆ. ಕುಮಾರಸ್ವಾಮಿ ಇದೆ ವೇಳೆ ಒತ್ತಾಯಿಸಿದರು.

ಯಾಕೆ ಕ್ರಮ ಕೈಗೊಂಡಿಲ್ಲ ?: ಶಾಸಕ ಎ.ಟಿ.ರಾಮಸ್ವಾಮಿ ಅವರು ಮಾತನಾಡಿ, ಗುತ್ತಿಗೆ ದಾರರಿಗೆ ಸಾಮರ್ಥ್ಯ ಇಲ್ಲ ಎಂಬುದು ಈವರೆಗಿನ ಪ್ರಗತಿಯಿಂದ ಸಾಬೀತಾಗಿದೆ. ಆದರೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ? ಅಧಿಕಾರಿ ಗಳು ಹೊಣೆಗಾರಿಕೆ ವಹಿಸಿಕೊಳ್ಳಬೇಕು ಎಂದರು. ಗುತ್ತಿಗೆ ಸಂಸ್ಥೆ ಹೊಣೆ ಮಾಡಿ: ಶಾಸಕ ಎಚ್‌.ಡಿ. ರೇವಣ್ಣ ಅವರು ಮಾತನಾಡಿ, ಹಾಸನ – ಸಕಲೇಶಪುರ ರಸ್ತೆ ಕಾಮಗಾರಿ 24 ತಿಂಗಳಿನಲ್ಲಿ ಮುಗಿಯಬೇಕಾಗಿತ್ತು. ಆದರೆ ಕಾಮಗಾರಿ ಪ್ರಾರಂಭವಾಗಿ 8 ವರ್ಷಗಳಾದರೂ ಮುಗಿದಿಲ್ಲ. ಈ ಲೋಪಕ್ಕೆ ಗುತ್ತಿಗೆ ಸಂಸ್ಥೆ ಹೊಣೆ ಮಾಡಿ ಅವರಿಂದ ನಷ್ಟ ವಸೂಲಿ ಮಾಡಬೇಕು ಎಂದರು.

ಅದೇ ರಾಗ.. ಅದೇ ಹಾಡು: ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೆಶಕ ಜಾನ್‌ಬಾಜ್‌ ಅವರು, ಮುಂದಿನ ಜನವರಿ ವೇಳೆಗೆ ಒಂದು ಬದಿಯ ರಸ್ತೆ ಪೂರ್ಣಗೊಳಿಸಲಾಗುವುದು ಎಂದರು. ಅವರ ಹೇಳಿಕೆ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿ ನಿಮಗೆ ಏನು ಹೇಳಿದರೂ ಪ್ರಯೋಜನವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಜಿಪಂ ಸಿಇಒ ಕಾಂತರಾಜು, ಹೆಚ್ಚುವರಿ ಪೊಲೀಸ್‌ ಮುಖ್ಯಾಧಿಕಾರಿ ಬಿ.ಎನ್‌. ನಂದಿನಿ ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.