ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ


Team Udayavani, Jul 4, 2022, 3:08 PM IST

ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ

ಬಂಗಾರಪೇಟೆ: ತಾಲೂಕಿನ ಗ್ರಾಪಂಗಳಲ್ಲಿ ಇ ಹಾಗೂ ಬಿ ಖಾತೆಗಳ ಅಕ್ರಮ, ನರೇಗಾ ಕಾಮಗಾರಿಗಳಲ್ಲಿ ನಡೆ ದಿರುವ ಭ್ರಷ್ಟಾಚಾರ ತನಿಖೆಗೆ ವಿಶೇಷ ತಂಡ ರಚನೆ, ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ರೈತ ಸಂಘವು ಪಟ್ಟಣದಲ್ಲಿನ ತಾಪಂ ಕಚೇರಿ ಮುಂದೆ ಪ್ರತಿಭಟಿಸಿತು.

ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ತಹಶೀಲ್ದಾರ್‌ ಎಂ.ದಯಾನಂದ್‌ಗೆ ಮನವಿ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟ್ಯಂತರ ರೂ. ಅನುದಾನ ಗ್ರಾಪಂಗಳಿಗೆ ಬಿಡುಗಡೆ ಮಾಡುತ್ತಿದ್ದರೂ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳಿಗೆ ಹಳ್ಳಿಗಳು ಜ್ಞಾಪಕಕ್ಕೆ ಬರುತ್ತವೆ ಎಂದು ವ್ಯಂಗ್ಯವಾಡಿದರು.

ನಿವೇಶನ ರಹಿತ ಬಡವರಿಗೆ ನೀಡಬೇಕಾದ ನಿವೇಶನಗಳು ಬಲಾಡ್ಯರ ಪಾಲಾಗುತ್ತಿವೆ. ಒಂದು ಸೈಟ್‌ಗಾಗಿ ಜನ ಕಚೇರಿಗಳಿಗೆ ಅಲೆದು ಸುಸ್ತಾದರೂ ಸಿಗುತ್ತಿಲ್ಲ ಎಂದು ಹೇಳಿದರು.

ಇ, ಬಿ-ಖಾತೆಯಲ್ಲಿ ಅಕ್ರಮ: ಕಡಿಮೆ ಬೆಲೆಯಲ್ಲಿ ನಿವೇಶನ ನೀಡುತ್ತೇವೆ ಎಂದು ಬಡವರನ್ನು ವಂಚಿಸಿ ಗ್ರಾಪಂ ವ್ಯಾಪ್ತಿಗಳಲ್ಲಿ ಗಲ್ಲಿಗೊಂದು ಅಕ್ರಮ ಲೇಔಟ್‌ ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಂತಹ ದೊಡ್ಡ ದಂಧೆಯೇ ನಡೆಯುತ್ತಿದೆ. ಅದಕ್ಕೆ ಬೆಂಗಾವಲಾಗಿ ಅಧಿಕಾರಿಗಳು ನಿಂತಿದ್ದಾರೆ. ಯಾವುದೇ ಖಾತೆ ಮಾಡಬೇಕಾದರೆ ಸಂಬಂಧಪಟ್ಟ ಪಿಡಿಒಗಳು ಸ್ಥಳ ಪರಿಶೀಲನೆ ಮಾಡಿ ದಾಖಲೆಗಳನ್ನು ನೀಡಬೇಕು. ಕಾನೂನು ಬದ್ಧವಾಗಿ ಮಾಡಬೇಕು. ಅದನ್ನು ಬಿಟ್ಟು ಕೆರೆ, ರಾಜಕಾಲುವೆ, ಗೋಮಾಳ, ಗುಂಡು ತೋಪು ಗಳಿಗೂ ಖಾತೆ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳ ವರ್ಗಾವಣೆ ಆಗಲಿ: ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಗ್ರಾಪಂಗಳಲ್ಲಿ ಹೆಜ್ಜೆ ಹೆಜ್ಜೆಗೂ ನಡೆಯುವ ಭ್ರಷ್ಟಾಚಾರ ಅಲ್ಲಿನ ಕೆಳಹಂತದ ಬಿಲ್‌ಕಲೆಕ್ಟರ್‌, ವಾಟರ್‌ವೆುನ್‌, ಕಂಪ್ಯೂಟರ್‌ ಆಪರೇಟರ್‌ಗಳ ಪಾತ್ರ ಬಹುದೊಡ್ಡದಾ ಗಿದೆ. ಭ್ರಷ್ಟಾಚಾರ ನಿಲ್ಲಬೇಕು, ಹಳ್ಳಿಗಳ ಅಭಿವೃದ್ಧಿ ಆಗಬೇಕಾದರೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಅಧಿ ಕಾರಿಗಳ ವರ್ಗಾವಣೆ ಆಗಲೇಬೇಕು ಎಂದು ಒತ್ತಾಯಿಸಿದರು.

ಯೋಜನೆ ದುರ್ಬಳಕೆ: ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ, ಜನಸಾಮಾನ್ಯರ ಸಮಸ್ಯೆ ಆಲಿಸಿ, ಪರಿಹಾರ ನೀಡುವ ಗ್ರಾಮಸಭೆಗಳು ಛಾಯಾಚಿತ್ರಕ್ಕೆ ಸೀಮಿತವಾಗಿವೆ. ಹಳ್ಳಿಗಳಿಗೆ ಚರಂಡಿ, ವಿದ್ಯುತ್‌ ದೀಪ, ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಯಾಗುವ 15ನೇ ಹಣಕಾಸಿನ ಯೋಜನೆ ದುರ್ಬಳಕೆ ಆಗಿದ್ದು, ತನಿಖೆ ಮಾಡಬೇಕು ಎಂದು ಹೇಳಿದರು.

ಗ್ರಾಪಂಗಳಲ್ಲಿ ನಡೆದಿರುವ ಇ, ಬಿ ಖಾತೆಗಳ ಅಕ್ರಮ ಹಾಗೂ ನರೇಗಾದ ಕಾಮಗಾರಿಗಳಲ್ಲಿ ನಡೆದಿ ರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಾರದೊ ಳಗೆ ವಿಶೇಷ ತಂಡ ರಚನೆ ಮಾಡಬೇಕು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ನೀಡಿ ಆಗ್ರಹಿಸಿದರು.

ಹೋರಾಟದಲ್ಲಿ ತಾಲೂಕು ಅಧ್ಯಕ್ಷ ಮರಗಲ್‌ ಮುನಿಯಪ್ಪ, ಬೂದಿಕೋಟೆ ಅನಿಲ್‌, ತಾಲೂಕು ಅಧ್ಯಕ್ಷ ಚಲಪತಿ, ಐತಾಂಡಹಳ್ಳಿ ಮುನ್ನಾ, ರಾಮಸಾಗರ ಸಂದೀಪ್‌ಗೌಡ, ಸಂದೀಪ್‌ರೆಡ್ಡಿ, ಬೂದಿಕೋಟೆ ನಾಗಯ್ಯ, ಮುನಿರಾಜು, ಕಾಮಸಮುದ್ರ ಮುನಿಕೃಷ್ಣ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಸುರೇಶ್‌ಬಾಬು, ವೇಣು, ಗಿರೀಶ್‌, ನಾಗೇಶ್‌, ತೇಜಸ್‌, ತೆರ್ನಹಳ್ಳಿ ಆಂಜಿನಪ್ಪ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್‌, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮುಂತಾದವರಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.