ಚಾರ್ಲಿ ಕಲೆಕ್ಷನ್‌ 150 ಕೋಟಿ!: ಲಾಭದಲ್ಲಿ ಶ್ವಾನಗಳಿಗೂ ಪಾಲು


Team Udayavani, Jul 5, 2022, 12:32 PM IST

777 charlei

ನಟ ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಸಿನಿಮಾ ಇದೀಗ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ “777 ಚಾರ್ಲಿ’ಗೆ ವಿದೇಶಗಳಲ್ಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸದ್ಯ ಬಿಡುಗಡೆಯಾಗಿ 25 ದಿನಗಳನ್ನು ಪೂರೈಸಿದ ಖುಷಿಯಲ್ಲಿರುವ “777 ಚಾರ್ಲಿ’ ಚಿತ್ರತಂಡ, “25 ದಿನಗಳ ಯಶಸ್ವಿ ಸಂಭ್ರಮ’ವನ್ನು ಆಚರಿಸಿತು. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಚಿತ್ರತಂಡ “777 ಚಾರ್ಲಿ’ ಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.

ಗಳಿಕೆಯ 5% ಶ್ವಾನ ಸಂರಕ್ಷಣೆ ಕಾರ್ಯಕ್ಕೆ ಮೀಸಲು!: “777 ಚಾರ್ಲಿ’ ಸಿನಿಮಾದ ಒಟ್ಟು ಲಾಭದಲ್ಲಿ ಬಂದ 5% ರಷ್ಟು ಹಣವನ್ನು ಬೀದಿ ನಾಯಿಗಳ ಸಂರಕ್ಷಣೆಗಾಗಿ ತೆಗೆದಿಡಲು ಚಿತ್ರತಂಡ ನಿರ್ಧರಿಸಿದೆ. “777 ಚಾರ್ಲಿ’ ಸಿನಿಮಾದ 25 ದಿನದ ಸಂಭ್ರಮದಲ್ಲಿ ಚಿತ್ರತಂಡ ಇಂಥದ್ದೊಂದು ನಿರ್ಧಾರವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ನಾಗದೇವರ ಆರಾಧಕಿ ಮಿಸ್ ಇಂಡಿಯಾ ಸಿನಿ‌ ಶೆಟ್ಟಿ

ಈ ಬಗ್ಗೆ ಮಾತನಾಡಿದ ನಾಯಕ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ, “ಬೀದಿ ನಾಯಿಗಳನ್ನು ಸಂರಕ್ಷಿಸಬೇಕು ಎಂಬ ವಿಷಯವನ್ನು ನಮ್ಮ ಸಿನಿಮಾದಲ್ಲಿ ಹೇಳಿದ್ದೇವೆ. ಅದರಂತೆ ನಾವು ಕೂಡ ಅದಕ್ಕೆ ಬದ್ಧರಾಗಿದ್ದೇವೆ. “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ ಶೇಕಡ 5ರಷ್ಟು ಹಣವನ್ನು “ಚಾರ್ಲಿ’ ಹೆಸರಿನಲ್ಲಿ ಭಾರತದಾದ್ಯಂತ ಇರುವ ಸಂಘ-ಸಂಸ್ಥೆಗಳ ನೆರವಿನೊಂದಿಗೆ ಬೀದಿ ನಾಯಿಗಳ ಆರೈಕೆ ಮತ್ತು ಸಂರಕ್ಷಣೆಗಾಗಿ ವಿನಿಯೋಗಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಲಾಭಾಂಶದ 10% ಚಿತ್ರತಂಡಕ್ಕೆ ಬೋನಸ್‌: ಇನ್ನು “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ 10% ಹಣವನ್ನು ಚಿತ್ರದಲ್ಲಿ ದುಡಿದ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರಿಗಾಗಿ ತೆಗೆದಿರಿಸಲಾಗಿದೆ. ಈ ವಿಷಯವನ್ನು ಕೂಡ ಅಧಿಕೃತವಾಗಿ ಘೋಷಿಸಿರುವ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ, “”777 ಚಾರ್ಲಿ’ ಸಿನಿಮಾಕ್ಕೆ ಪ್ರತಿಯೊಬ್ಬರೂ ಕೂಡ ಅವರದ್ದೇ ಆದ ಪರಿಶ್ರಮ ಹಾಕಿದ್ದಾರೆ. ಎಲ್ಲರ ಪರಿಶ್ರಮದಿಂದಾಗಿಯೇ ಇಂಥದ್ದೊಂದು ಸಿನಿಮಾ ಮಾಡೋದಕ್ಕೆ ಸಾಧ್ಯವಾಯ್ತು. ಸಿನಿಮಾದ ಯಶಸ್ಸಿಗೆ ಅವರೆಲ್ಲರೂ ಪಾಲುದಾರರಾಗಿದ್ದಾರೆ. “777 ಚಾರ್ಲಿ’ಯ ಸಕ್ಸಸ್‌ ಸಿನಿಮಾ ತಂಡದ ಪ್ರತಿಯೊಬ್ಬರ ಜೊತೆಯೂ ಹಂಚಿಕೊಳ್ಳಬೇಕು. ಹೀಗಾಗಿ ನನ್ನನ್ನು ಹೊರತುಪಡಿಸಿ ಸಿನಿಮಾದಲ್ಲಿ ಅಭಿನಯಿಸಿರುವ ಕಲಾವಿದರು, ಕೆಲಸ ಮಾಡಿದ ತಂತ್ರಜ್ಞರು ಮತ್ತು ಕಾರ್ಮಿಕರಿಗಾಗಿ “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ ಶೇಕಡ 10ರಷ್ಟು ಹಣವನ್ನು ತೆಗೆದಿಡಲು ನಿರ್ಧರಿಸಿದ್ದೇವೆ’ ಎಂದಿದ್ದಾರೆ ರಕ್ಷಿತ್‌ ಶೆಟ್ಟಿ.

150 ಕೋಟಿ ಗಳಿಕೆ?: ಇನ್ನು ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾದ “777 ಚಾರ್ಲಿ’ ಸಿನಿಮಾ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲೂ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಇದೀಗ “777 ಚಾರ್ಲಿ’ ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರ್ಣಗೊಳಿಸಿರುವುದರಿಂದ, ಸಹಜವಾಗಿಯೇ ಸಿನಿಮಾದ ಬಾಕ್ಸಾಫೀಸ್‌ ಕಲೆಕ್ಷನ್‌ ಎಷ್ಟಾಗಿರಬಹುದು ಎಂಬ ಕುತೂಹಲ ಸಿನಿಮಾ ಮಂದಿಯಲ್ಲಿ ಮತ್ತು ಪ್ರೇಕ್ಷಕರಲ್ಲಿತ್ತು. ಆದರೆ “777 ಚಾರ್ಲಿ’ ಸಿನಿಮಾದ ಅಧಿಕೃತ ಗಳಿಕೆಯ ಮಾಹಿತಿ ಬಿಟ್ಟುಕೊಡದ ಚಿತ್ರತಂಡ, ಇಲ್ಲಿಯವರೆಗೆ ಆಗಿರುವ ಒಟ್ಟು ಗಳಿಕೆಯ ಬಗ್ಗೆ ಒಂದಷ್ಟು ಸುಳಿವನ್ನು ಬಿಟ್ಟುಕೊಟ್ಟಿದೆ. ಕನ್ನಡ ಮತ್ತು ಇತರ ಭಾಷೆಗಳ ಒಟ್ಟು ಥಿಯೇಟರಿಕಲ್‌ ಕಲೆಕ್ಷನ್‌ ಮತ್ತು ವಿದೇಶಿ ಗಳಿಕೆ ಸೇರಿದಂತೆ, 25 ದಿನಗಳವರೆಗೆ “777 ಚಾರ್ಲಿ’ ಬರೋಬ್ಬರಿ 150 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎನ್ನಲಾಗುತ್ತಿದೆ.

25 ದಿನ ಸಂಭ್ರಮ ದಲ್ಲಿ ನಿರ್ದೇಶಕ ಕಿರಣ್‌ ರಾಜ್‌, ನಾಯಕ ನಟಿ ಸಂಗೀತಾ ಶೃಂಗೇರಿ, ಬೇಬಿ ಶಾರ್ವರಿ, ಸಂಗೀತ ನಿರ್ದೇಶಕ ನೋಬಿನ್‌ ಪೌಲ್‌, ವಿತರಕ ಕಾರ್ತಿಕ್‌ ಗೌಡ ಮತ್ತಿತರರು ಚಿತ್ರದ ಬಿಡುಗಡೆಯ ನಂತರ ಸಿಗುತ್ತಿರುವ ಪ್ರತಿಕ್ರಿಯೆಗಳ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.