ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ


Team Udayavani, Jul 5, 2022, 6:42 PM IST

ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

ಪಿರಿಯಾಪಟ್ಟಣ: ರಾಜಾಸ್ಥಾನದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಹಿಂದೂ ಜಾಗರಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪಟ್ಟಣದ ಮಸಣೀಕಮ್ಮ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ಸರ್ಕಲ್‌ಬಳಿ ಮಾನವ ಸರಪಳಿ ನಿರ್ಮಾಣ ಮಾಡಿ ಕೆಲ ಸಮಯ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪರಿಸರ ಹೋರಾಟಗಾರರ ಹಾಗೂ ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಮಾತನಾಡಿ  ದೇಶದಲ್ಲಿ ಮುಸ್ಲಿಂ ಭಯೋತ್ಪಾದನೆ ಹೆಚ್ಚಾಗುತ್ತಿದ್ದು ಇದು ನಿಲ್ಲಬೇಕು. ರಾಜಾಸ್ಥಾನದಲ್ಲಿ ಆದ ಘಟನೆಗಳು ಕರ್ನಾಟಕದಲ್ಲಿಯೂ ನಡೆಯಲಾರಂಭಿಸಿವೆ. ಮುಸ್ಲಿಂ ಮೂಲಭೂತವಾದಿಗಳಿಂದ ದೇಶದಲ್ಲಿ ಆಶಾಂತಿ ಉಂಟಾಗುತ್ತಿದ್ದು. ಬಹುಸಂಖ್ಯಾತ ಹಿಂದುಗಳು ಹೆದರಿ ಬದುಕುವ ದಿನಗಳು ದೂರವಿಲ್ಲ ಆದ್ದರಿಂದ ಅಲ್ಲಿ ನಡೆದರೆ ನಮಗೇನು ಎನ್ನುವ ಬದಲು ಪ್ರತಿಯೊಬ್ಬ ಹಿಂದೂವು ಕನ್ನಯ್ಯ ಹತ್ಯೆಯಿಂದ ಜಾಗೃತರಾಗಿ ಹೋರಾಟ ನಡೆಸಬೇಕು ಎಂದು ತಿಳಿಸಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಇವರ ಹೆಸರಿನಲ್ಲಿಯೂ ದೇವರುಗಳಿದ್ದಾರೆ ಇವರನ್ನು ಮೂಲಭೂತ ಭಯೋತ್ಪಾದಕರು ಬಿಡುವುದಿಲ್ಲ ಮುಂದಿನ ಹೀಗೆ ಮೂಲಭೂತವಾದಿಗಳಿಗೆ ಸಹಕಾರ ನೀಡಿದರೆ ಮುಂದೊಂದು ದಿನ ಇವರ ಮೇಲು ಅವರು ದಾಳಿ ಮಾಡುತ್ತಾರೆ ಎಂದು ತಿಳಿಸಿದರು.

ರಾಷ್ಟ್ರೀಯ ತಂಬಾಕು ಮಂಡಳಿ ಉಪಾಧ್ಯಕ್ಷರಾದ ಮಾಜಿ ಶಾಸಕ ಎಚ್.ಸಿ.ಬಸವರಾಜಪ್ಪ ಮಾತನಾಡಿ, ದೇಶದಲ್ಲಿ ಆಶಾಂತಿ ಉಂಟುಮಾಡುವ ಸಂಘಟನೆಗಳನ್ನು ನಿಷೇಧಿಸಬೇಕು, ಮುಸ್ಲಿಂ ಮೂಲಭೂತವಾದಿಗಳಿಂದ ದೇಶಕ್ಕೆ ಆಪಾಯಿದೆ. ಹಿಂದೂಗಳು ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು.

ಹಿಂದೂ ಜಾಗರ ವೇದಿಕೆಯ  ಪ್ರಾಂತ ಮಾತೃ ಸುರಕ್ಷಾ ಪ್ರಮುಖ್ ಭ.ಗಣರಾಜ್ ಭಟ್ ಕೆದಿಲ ಮಾತನಾಡಿ, ಶಾಂತಿಯುತ ಸಹಬಾಳ್ವೆಯ ಸಮಾಜಕ್ಕೆ  ಭಯೋತ್ಪಾದನಾ ಚಟುವಟಿಕೆಗಳು ಮಾರಕವಾಗಿದ್ದು  ಇಂತಹ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು. ಜಿಹಾದ್, ಐಸಿಸ್‌ ಚಟುವಟಿಕೆ ನಡೆಸುವವರ ಬಗ್ಗೆ ತನಿಖೆಯಾಗಬೇಕು ಮತ್ತು ಕನ್ನಯ್ಯಲಾಲ್ ರಂತಹ ಅಮಾಯಕರು ಬಲಿಯಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಗ್ರಾಮಾಂತರ ಹಿಂದೂಜಾಗರಣಾ ಜಿಲ್ಲಾ ಸಂಚಾಲಕ್ ಲಕ್ಷ್ಮಿನಾರಾಯಣ, ರಾಜ್ಯ ನೀರು ಮತ್ತು ಒಳಚರಂಡಿ  ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಣ್ಣಪ್ಪ, ತಾಲೂಕು  ಕಾರ್ಯದರ್ಶಿಗಳಾದ  ಬೆಮ್ಮತ್ತಿಚಂದ್ರು, ಹೆಚ್.ಸಿ. ವೀರಭದ್ರ, ಮುಖಂಡರಾದ, ಶಿವರಾಮೇಗೌಡ,  ಪಿ.ಜೆ.ರವಿ, ಶುಭಾ ಗೌಡ, ಚನ್ನಬಸವರಾಜು,   ಬಿ.ಕೆ.ಮೈಲಾರಿ, ಮನುಗನಹಳ್ಳಿ ಮಧು, ಗೀತಾ, ಕಿತ್ತೂರು ಸ್ವಾಮಿಗೌಡ,  ಅನಿಷ್ ಸೇರಿದಂತೆ ಬಿಜೆಪಿಯ ಎಲ್ಲಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳು ಹಾಜರಿದ್ದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.