![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 7, 2022, 7:36 PM IST
ಥಾಣೆ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಗುಂಪಿಗೆ ಮತ್ತೆ ಹಿನ್ನಡೆಯಾಗಿದ್ದು, ಥಾಣೆ ಮಹಾನಗರ ಪಾಲಿಕೆಯ (ಟಿಎಂಸಿ) ಪಕ್ಷದ 67 ಮಾಜಿ ಕಾರ್ಪೊರೇಟರ್ಗಳ ಪೈಕಿ 66 ಮಂದಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಬೆಂಬಲ ನೀಡಿದ್ದಾರೆ. ಶಿವಸೇನೆಯ ಭದ್ರಕೋಟೆಯಾಗಿದ್ದ 131 ಸದಸ್ಯ ಬಲದ ಟಿಎಂಸಿಯ ಅಧಿಕಾರಾವಧಿಯು ಸ್ವಲ್ಪ ಸಮಯದ ಹಿಂದೆ ಕೊನೆಗೊಂಡಿತ್ತು, ಈಗ ಅದರ ಚುನಾವಣೆಗಳು ನಡೆಯಲಿವೆ.
ಮಾಜಿ ಮೇಯರ್ ನರೇಶ್ ಮ್ಹಾಸ್ಕೆ ನೇತೃತ್ವದ 66 ಮಾಜಿ ಸೇನಾ ಕಾರ್ಪೊರೇಟರ್ಗಳು ಬುಧವಾರ ರಾತ್ರಿ ಮುಂಬಯಿಯ ‘ನಂದನವನ’ ಬಂಗಲೆಯಲ್ಲಿ ಸಿಎಂ ಶಿಂಧೆ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲವನ್ನು ನೀಡಿದರು ಎಂದು ಶಿಂಧೆ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಕಳೆದ ತಿಂಗಳು, ಶಿಂಧೆ ಅವರು ಸೇನೆಯ ವಿರುದ್ಧ ಬಂಡಾಯವನ್ನು ಪ್ರಾರಂಭಿಸಿದ್ದರು ಮತ್ತು ಪಕ್ಷದ ಬಹುಪಾಲು ಶಾಸಕರು ಅವರ ಪರವಾಗಿ ನಿಂತಿದ್ದರು, ಇದು ಉದ್ಧವ್ ಠಾಕ್ರೆ ನೇತೃತ್ವದ ರಾಜ್ಯದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಕ್ಕೆ ಕಾರಣವಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.