ಬಕ್ರೀದ್‌ ಹಬ್ಬ ಶಾಂತಿಯುತವಾಗಿ ಆಚರಿಸಿ: ಎಸ್‌ಪಿ

ಸರ್ಕಾರದ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚನೆ ; ಶಾಂತಿ-ಸೌಹಾರ್ದತೆ ಕಾಪಾಡಿ: ಜಯಪ್ರಕಾಶ ಅಕ್ಕರಕಿ

Team Udayavani, Jul 8, 2022, 3:22 PM IST

5

ಲೋಕಾಪುರ: ಎಲ್ಲ ಸಮಾಜ ಬಾಂಧವರು ಶಾಂತಿ ಸೌಹಾರ್ದತೆಯ ಬದುಕು ನಡೆಸಬೇಕು. ಜನಜೀವನ ನೆಮ್ಮದಿಯನ್ನು ಕಾನೂನು ರೀತಿಯಲ್ಲಿ ಕಾಪಾಡುವುದು ಪೊಲೀಸ್‌ ಇಲಾಖೆ ಕರ್ತವ್ಯ. ಇದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಬಾಗಲಕೋಟೆ ನೂತನ ಎಸ್‌ಪಿ ಜಯಪ್ರಕಾಶ ಅಕ್ಕರಕಿ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ನಾನು ಬಾಗಲಕೋಟೆ ನೂತನ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಭೇಟಿ ನೀಡುತ್ತಿರುವ ಮೊದಲ ಪೊಲೀಸ್‌ ಠಾಣೆ ಇದಾಗಿದೆ. ಬಕ್ರೀದ್‌ ಹಬ್ಬವನ್ನು ಶಾಂತಿಯುತವಾಗಿ ಅಚರಿಸಲು ಎಲ್ಲ ಸಮುದಾಯದವರು ಕೈ ಜೋಡಿಸಬೇಕು. ಜು. 10ರಂದು ನಡೆಯುವ ಬಕ್ರೀದ್‌ ಆಚರಣೆಯ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾ ರ್ದತೆ ಕಾಪಾಡಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ನಿಯಮ ಕಡ್ಡಾಯ ಪಾಲಿಸಬೇಕಾಗಿದೆ ಎಂದರು.

ಅಂಜುಮನ್‌ -ಎ-ಇಸ್ಲಾಂ ಕಮೀಟಿ ಅಧ್ಯಕ್ಷ ಅಲ್ಲಾಸಾಬ ಯಾದವಾಡ ಮಾತನಾಡಿ, ಸರ್ಕಾರದ ನಿಯಮ ಪಾಲಿಸುವ ಮೂಲಕ ಬಕ್ರೀದ್‌ ಆಚರಿಸಲು ಎಲ್ಲರ ಸಹಕಾರವಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ ಕಾನೂನಿನ ನಿಯಮಾವಳಿಗಳಿಗೆ ಧಕ್ಕೆಯಾಗದಂತೆ ಬಕ್ರೀದ್‌ ಆಚರಿಸಲಾಗುವುದು ಎಂದು ಭರವಸೆ ನೀಡಿದರು.

ಸ್ಥಳೀಯ ಮುಖಂಡ ವಸಂತಗೌಡ ಪಾಟೀಲ ಮಾತನಾಡಿ, ಪಟ್ಟಣದಲ್ಲಿ ಪೂರ್ವಜ ರಿಂದಲೂ ಎಲ್ಲ ಜಾತ್ರೆ ಹಾಗೂ ರಮಜಾನ, ಬಕ್ರೀದ್‌ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಒಗ್ಗೂಡಿ ಆಚರಣೆ ಮಾಡಲಾಗುತ್ತಿದೆ. ಸಭೆ ಸಮಾರಂಭಗಳಲ್ಲಿಯೂ ಕೂಡ ಒಗ್ಗಟ್ಟಾಗಿ ಭಾಗ ವಹಿಸುವ ಮೂಲಕ ಲೋಕಾಪುರ ಭಾವೈಕ್ಯತೆಗೆ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಸನ್ಮಾನ: ನೂತನ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಪ್ರಥಮ ಬಾರಿಗೆ ಲೋಕಾಪುರ ಪೊಲೀಸ್‌ ಠಾಣೆಗೆ ಆಗಮಿಸಿದ ಜಯಪ್ರಕಾಶ ಅಕ್ಕರಕಿ ಮತ್ತು ಡಿವೈಎಸ್‌ಪಿ ಪಾಂಡುರಂಗಯ್ಯ, ಮುಧೋಳ ನೂತನ ಸಿಪಿಐ ಅಯ್ಯನಗೌಡ ಪಾಟೀಲ ಅವರನ್ನು ಪಟ್ಟಣದ ಮುಖಂಡರು ಸನ್ಮಾನಿಸಿದರು.

ಟ್ರಾಫಿಕ್‌ ನಿವಾರಣೆಗೆ ಎಸ್ಪಿ ಸೂಚನೆ: ಪಟ್ಟಣದಲ್ಲಿ ಶಿಸ್ತು ಬದ್ಧವಾಗಿ ಟ್ರಾಫಿಕ್‌ ನಿವಾರಣೆ ಮಾಡಲಾಗುತ್ತಿದೆ. ಪ್ರತಿದಿನ ರಸ್ತೆಬದಿ ವ್ಯಾಪಾರಿಗಳಿಗೂ ಮತ್ತು ಸಾರ್ವಜನಿಕರಿಗೂ ತೊಂದರೆಯಾಗದಂತೆ ಟ್ರಾಫಿಕ್‌ ನಿವಾರಣೆ ಮಾಡಬೇಕು. ಪ್ರತಿದಿನ ಸಂಜೆ ಜನದಟ್ಟಣೆ ನಿವಾರಣೆ ಇರುವ ಸಿಸಿಟಿವಿ ವಿಡಿಯೋ ದೃಶ್ಯವನ್ನು ನನಗೆ ಕಳುಹಿಸಬೇಕು ಎಂದು ಪಿಎಸ್‌ಐ ಶಿವಶಂಕರ ಮುಕರಿ ಅವರಿಗೆ ಸೂಚಿಸಿದರು.

ಡಿವೈಎಸ್‌ಪಿ ಪಾಂಡುರಂಗಯ್ಯ, ಸಿಪಿಐ ಅಯ್ಯನಗೌಡ ಪಾಟೀಲ, ಪಿಎಸ್‌ಐ ಶಿವಶಂಕರ ಮುಕರಿ, ತಾಪಂ ಮಾಜಿ ಸದಸ್ಯ ರಫೀಕ ಬೈರಕದಾರ, ಯಮನಪ್ಪ ಹೊರಟ್ಟಿ, ವಸಂತಗೌಡ ಪಾಟೀಲ, ಬಿ.ಎಲ್‌. ಬಬಲಾದಿ, ಮಹೇಶ ಹುಗ್ಗಿ, ಆನಂದ ಹವಳಖೋಡ, ಜಾಕೀರ ಅತ್ತಾರ, ಹನಮಂತ ಕುಡಚಿ, ವಿನೋದ ಘೋರ್ಪಡೆ, ಸೈಯದ್‌ ನದಾಫ, ಗುಲಾಬಸಾಬ ಅತ್ತಾರ, ರಮಜಾನ ನದಾಫ, ಸಂತೋಷ ದೇಶಪಾಂಡೆ ಇದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.