ಕೂಡು ರಸ್ತೆ ದುರಸ್ತಿಗೆ ಆಗ್ರಹ
Team Udayavani, Jul 8, 2022, 3:49 PM IST
ಚಿಂಚೋಳಿ: ಸೇಡಂ ಮತಕ್ಷೇತ್ರಕ್ಕೆ ಒಳಪಟ್ಟಿರುವ ತಾಲೂಕಿನ ಇರಗಪಳ್ಳಿ- ಬುರಗಪಳ್ಳಿ ಗ್ರಾಮದ ಕೂಡು ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ವಾಹನ ಗಳು ರಸ್ತೆಯಲ್ಲೇ ಸಿಲುಕಿಕೊಂಡು ಶಾಲೆ ಸಮಯಕ್ಕೆ ಹೋಗಲು ವಿದ್ಯಾರ್ಥಿ ಗಳಿಗೆ ತೊಂದರೆಯಾಗುತ್ತಿದೆ ಎಂದು ಇರಗಪಳ್ಳಿ ಶಾಲೆ, ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬುರಗಪಳ್ಳಿ ಹತ್ತಿರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ವಿದ್ಯಾರ್ಥಿಗಳು ಇರಗಪಳ್ಳಿ ಗ್ರಾಮದಿಂದ ಗಣಾಪುರ ಸರ್ಕಾರಿ ಪ್ರೌಢ ಶಾಲೆಗೆ ಟಂಟಂ ವಾಹನದಲ್ಲಿ ಬರುವ ಸಂದರ್ಭದಲ್ಲಿ ಕೆಸರಿನಲ್ಲಿ ಆಯತಪ್ಪಿ ಬಿದ್ದಿದ್ದರಿಂದ ವಿದ್ಯಾರ್ಥಿಗಳ ಬಟ್ಟೆ ಮತ್ತು ಪಠ್ಯಪುಸ್ತಕಗಳು ಕೆಸರುಮಯವಾಗಿದ್ದವು. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿನಿಯರು ಶಾಲೆಗೆ ಹೋಗದೇ ಮನೆಗೆ ತೆರಳಿದ್ದರು. ಇದನ್ನು ಗಮನಿಸಿದ ಪಾಲಕರು ಮಕ್ಕಳೊಂದಿಗೆ ಆಗಮಿಸಿ ಬುರಗಪಳ್ಳಿ ಗ್ರಾಮದ ರಸ್ತೆ ತಡೆ ನಡೆಸಿದರು.
ಇರಗಪಳ್ಳಿ ಗ್ರಾಮದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ಕಳೆದ ಎರಡು ವರ್ಷದ ಹಿಂದೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಿಸಲಾಗಿದೆ. ಆದರೆ ಸೇತುವೆಗೆ ಕೂಡು ರಸ್ತೆ ನಿರ್ಮಿಸಿಲ್ಲ. ಇದರಿಂದಾಗಿ ರಸ್ತೆ ಕೆಸರುಮಯವಾಗಿದೆ. ರಸ್ತೆಯಲ್ಲಿ ಭಾರಿ ತೆಗ್ಗುಗಳು ಬಿದ್ದಿವೆ. ಶಾಲೆಯಿಂದ ಮನೆಗೆ ಬರುವ ಸಂದರ್ಭದಲ್ಲಿ ಅಟೋಗಳು ಅನೇಕ ಸಲ ಪಲ್ಟಿಯಾಗಿವೆ ಎಂದು ಕರ್ಚಖೇಡ ಗ್ರಾಪಂ ಉಪಾಧ್ಯಕ್ಷ ಶ್ರೀಕಾಂತ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ನಾಗಪ್ಪ ಪೂಜಾರಿ, ಹಣಮಂತ ಹೊಸಮನಿ, ಇಬ್ರಾಹಿಂ ಪಟೇಲ್, ದಳಪತಿ, ಸುಭಾನರೆಡ್ಡಿ, ಕೃಷ್ಣಾರೆಡ್ಡಿ, ಶಿವರಾಜ, ಕೈಲಾಶ ಅಶೋಕ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.