ಎಡಬಿಡದೇ ಸುರಿದ ಮಳೆ-ಬಣಗುಡುತ್ತಿವೆ ರಸ್ತೆ
Team Udayavani, Jul 10, 2022, 3:51 PM IST
ಆಳಂದ: ಜೂನ್ ತಿಂಗಳಲ್ಲೇ ಬರಬೇಕಾಗಿದ್ದ ಮಳೆ ಕಳೆದ ಮೂರು ದಿನಗಳಿಂದ ಎಡೆಬಿಡದೇ ಸುರಿಯತೊಡಗಿದ್ದರಿಂದ ಕೃಷಿ, ವ್ಯಾಪಾರ, ವಹಿವಾಟಿಗೆ ಅಡ್ಡಿಯಾಗಿದೆ.
ಜಿಲ್ಲಾಧಿಕಾರಿಗಳು ಶನಿವಾರ ಶಾಲೆ, ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಜನಜೀವನ ಜತೆಗೆ ಬಿತ್ತನೆಗೆ ಅಡ್ಡಿಯಾಗಿದೆ. ಇದರ ಜತೆಯಲ್ಲಿ ಜಾನುವಾರುಗಳಿಗೂ ಮೇಯಲು ಹೋಗದಂತಾಗಿದೆ. ಬಿತ್ತನೆ ಕೈಗೊಳ್ಳಲು ಮುಂದಾದವರಿಗೆ ದಿನದೊಡುವಂತೆ ಮಾಡಿದೆ.
ಶನಿವಾರ ಬೆಳಗ್ಗೆಯಿಂದಲೂ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಸಂಜೆಗೆ ಬಿರುಸುಗೊಂಡಿದೆ. ಇದರಿಂದ ಪಟ್ಟಣದಲ್ಲೆಡೆ ಚರಂಡಿಗಳು ತುಂಬಿ ಹರಿದಿವೆ. ರಸ್ತೆ ಮೇಲೆ ನೀರು ನಿಂತ ಪರಿಣಾಮ ಜನಸಂಚಾರಕ್ಕೆ ಪರದಾಡಿದರು.
ತಾಲೂಕಿನ ಸಾಲೆಗಾಂವ್, ಖಜೂರಿ, ನಿರಗುಡಿ, ವಿಕೆ, ಸಲಗರ, ಮಾದನಹಿಪ್ಪರಗಾ ಚಿಂಚೋಳಿ ಬಿ.ಮಡಕಿ ಸೇರಿದಂತೆ ಮೊದಲಾದ ಕಡೆ ಮಳೆಯಿಂದ ಅಸ್ತವ್ಯಸ್ತವಾಗಿದೆ. ತಾಲೂಕಿನ ಆಳಂದ ವಲಯಕ್ಕೆ 27 ಮಿ.ಮೀ, ನಿಂಬರಗಾ ವಲಯಕ್ಕೆ 33 ಮಿ.ಮೀ, ಕೋರಳ್ಳಿ 35 ಮಿ.ಮೀ, ಮಾದನಹಿಪ್ಪರಗಾ 22 ಮಿ.ಮೀ, ಸರಸಂಬಾ 42 ಮಿ.ಮೀ, ನರೋಣಾ 19.5 ಮಿ.ಮೀ, ಖಜೂರಿ 28.3 ಮಿ.ಮೀ. ಮಳೆಯಾಗಿದೆ. ಜೂನ್ ಕೊನೆ ವಾರದವರೆಗೆ ಬಿತ್ತನೆಗೆ ಪೂರಕವಾಗದ ಮಳೆಯಿಂದಾಗಿ ಜುಲೈ 1ರಂದು ಅಲ್ಲಲ್ಲಿ ಸುರಿದ ಮಳೆಯಿಂದ ಹೆಚ್ಚು ಕಡಿಮೆ ಐದು ದಿನಗಳಲ್ಲಿ ಶೇ. 30 ಬಿತ್ತನೆ ನಡೆದಿದೆ.
ಜೂನ್ ತಿಂಗಳಲ್ಲಿ ಶೇ.10, ಜುಲೈ ಆರಂಭದಲ್ಲಿ ಶೇ. 30 ಸೇರಿ ಶೇ. 40 ಬಹುತೇಕ ಬಿತ್ತನೆಯಾಗಿದ್ದು ಮಳೆ ಸುರಿಯುತ್ತಿರುವುದು ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಇದುವರೆಗೂ ಸುರಿದ ಮಳೆಯಿಂದ ಯಾವುದೇ ಜೀವಹಾನಿ ಸೇರಿದಂತೆ ಮನೆಗಳು ಕುಸಿದು ಬಿದ್ದ ಬಗ್ಗೆ ವರದಿಯಾಗಿಲ್ಲ ಎಂದು ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.