![john-cena](https://www.udayavani.com/wp-content/uploads/2024/07/john-cena-415x229.jpg)
ಬೇಡ ಜಂಗಮ ಮುಖಂಡರ ಬಂಧನಕ್ಕೆ ಖಂಡನೆ
Team Udayavani, Jul 10, 2022, 5:30 PM IST
![16protest](https://www.udayavani.com/wp-content/uploads/2022/07/16protest-620x338.jpg)
ಚಿತ್ತಾಪುರ: ಬೆಂಗಳೂರಿನ ಫೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಬೇಡ ಜಂಗಮ ಸಮಾಜದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಜಂಗಮ ಸಮಾಜದ ಮುಖಂಡರನ್ನು ತಡೆದು ಬಂಧಿಸಿರುವುದು ಸಂವಿಧಾನ ವಿರೋಧಿ ಚಟುವಟಿಕೆಯಾಗಿದೆ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಖಂಡಿಸಿದರು.
ಪಟ್ಟಣದಲ್ಲಿ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇಡ ಜಂಗಮ ಸಮಾಜದವರು ಆರ್ಥಿಕವಾಗಿ ಬಡವರಾಗಿದ್ದಾರೆ. ಸಂವಿಧಾನಬದ್ಧ ಹಕ್ಕಿಗಾಗಿ ಬಹುದಿನಗಳಿಂದ ಹೋರಾಟ ಮಾಡಲಾಗುತ್ತಿದೆ. ಶಾಂತಿಯುತವಾಗಿ ಹೋರಾಟ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ ಸಲ್ಲಿಸುವ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಆದರೆ ಹೋರಾಟದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುತ್ತಿದ್ದ ಮುಖಂಡರನ್ನು ಬಂಧಿಸಿರುವುದು ಕಾನೂನು ವಿರೋಧಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ವಿಳಂಬ ನೀತಿ ಅನುಸರಿಸದೇ ಸಂಬಂಧಪಟ್ಟ ಇಲಾಖೆ ಮೂಲಕ ಬೇಡ ಜಂಗಮ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ಬಿ.ಡಿ. ಹಿರೇಮಠ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ಅವಕಾಶ ಕೊಡದೇ ಶೀಘ್ರ ಆದೇಶ ಮಾಡಬೇಕು ಎಂದು ಆಗ್ರಹಿಸಿದರು. ವಿರೂಪಾಕ್ಷಯ್ಯ ಮಠಪತಿ ತೋಟಯ್ಯ, ರಾಜಶೇಖರ ಸ್ವಾಮಿ, ಶಿವಪುತ್ರಯ್ಯ ಸ್ವಾಮಿ ನಾಲವಾರ, ಬಸಯ್ಯ ಸ್ವಾಮಿ ಹಿರೇಮಠ, ವೀರಭದ್ರಯ್ಯ ಸ್ವಾಮಿ, ತೋಟ್ಟಯ್ಯ, ಹಂಪಯ್ಯ, ರಾಜಶೇಖರ ಸ್ವಾಮಿ ಕೊಲ್ಲೂರ, ಬಸಯ್ಯ ಸ್ವಾಮಿ, ನಂದಿಕೋಲ ಮಠ ರಾವೂರ, ಕರಬಸಯ್ಯಶಾಸ್ತ್ರೀ, ಮಂಜುನಾಥ ಶಾಸ್ತ್ರೀ, ವಿರೂಪಾಕ್ಷಿ ಸ್ವಾಮಿ ದಿಗ್ಗಾಂವ ಇದ್ದರು.
ಟಾಪ್ ನ್ಯೂಸ್
![john-cena](https://www.udayavani.com/wp-content/uploads/2024/07/john-cena-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/WADI-150x75.jpg)
Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
![KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ](https://www.udayavani.com/wp-content/uploads/2024/07/KKRDB-150x83.jpg)
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
MUST WATCH
ಹೊಸ ಸೇರ್ಪಡೆ
![john-cena](https://www.udayavani.com/wp-content/uploads/2024/07/john-cena-150x83.jpg)
John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-150x100.jpg)
Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!
![Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ](https://www.udayavani.com/wp-content/uploads/2024/07/ameba-150x84.jpg)
Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ
![Odish-Neji](https://www.udayavani.com/wp-content/uploads/2024/07/Odish-Neji-150x79.jpg)
Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.