ಇಂಗ್ಲೆಂಡ್‌-ಭಾರತ ಏಕದಿನ ಸರಣಿ: ಹೋರಾಟಕ್ಕೆ ರೋಹಿತ್‌ ಪಡೆ ಸಿದ್ಧ


Team Udayavani, Jul 11, 2022, 11:33 PM IST

Rohitಏಕದಿನ ಸರಣಿ ಹೋರಾಟಕ್ಕೆ ರೋಹಿತ್‌ ಶರ್ಮ ಪಡೆ ಸಿದ್ಧ

ಲಂಡನ್‌: ಟಿ20 ಸರಣಿ ಯಲ್ಲಿ ಜಯಭೇರಿ ಬಾರಿಸಿರುವ ಭಾರತೀಯ ತಂಡವು ಮಂಗಳವಾರದಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದ್ದು ಗೆಲ್ಲುವ ವಿಶ್ವಾಸದಲ್ಲಿದೆ. ಚುಟುಕು ಕ್ರಿಕೆಟ್‌ ನಲ್ಲಿ ನೀಡಿದ ಉತ್ತಮ ನಿರ್ವಹಣೆಯನ್ನು ಏಕದಿನ ಕ್ರಿಕೆಟ್‌ನಲ್ಲೂ ಪ್ರದರ್ಶಿ ಸುವ ಆತ್ಮವಿಶ್ವಾಸ ಭಾರತೀಯ ಆಟಗಾರರಲ್ಲಿದೆ.

ಭರ್ಜರಿ ಆಟದ ಪ್ರದರ್ಶನ ನೀಡುವ ಮೂಲಕ ಭಾರತವು ಟಿ20 ಸರಣಿಯನ್ನು ಗೆದ್ದುಕೊಂಡಿದೆ. ರವಿವಾರ ನಡೆದ ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಶತಕ ಸಿಡಿಸಿದರೂ ಕೊನೆ ಹಂತದಲ್ಲಿ ತಂಡ ಎಡವಿತ್ತು. ಆದರೂ ತಂಡವು 2-1 ಅಂತರದಿಂದ ಸರಣಿ ಜಯಿಸಿತ್ತು. ಇದೀಗ ಏಕದಿನ ಸರಣಿ ಯಲ್ಲೂ ರೋಹಿತ್‌ ಶರ್ಮ ಪಡೆ ಗೆಲ್ಲುವ ಉತ್ಸಾಹದಿಂದಲೇ ಹೋರಾಡಲಿದೆ.

ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ ಗಮನಾರ್ಹ ನಿರ್ವಹಣೆ ನೀಡುತ್ತಿದೆ. 2019ರ ವಿಶ್ವಕಪ್‌ ಗೆದ್ದ ಇಂಗ್ಲೆಂಡ್‌ ತಂಡ ಸುಲಭವಾಗಿ ಶರಣಾಗುವ ಸಾಧ್ಯತೆಯಿಲ್ಲ. ಹಲವು ಪ್ರಮುಖ ಆಟಗಾರರನ್ನು ಒಳಗೊಂಡ ಇಂಗ್ಲೆಂಡ್‌ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಬಲವಾಗಿದೆ.

ಇಂಗ್ಲೆಂಡ್‌ ವಿರುದ್ಧದ ಈ ಸರಣಿ ಟಿ20 ವಿಶ್ವಕಪ್‌ ಮೊದಲು ಭಾರತೀಯ ತಂಡ ಆಡಲಿರುವ 50 ಓವರ್‌ಗಳ ಸ್ಪರ್ಧೆಯಾಗಿದೆ. ಹೀಗಾಗಿ ರೋಹಿತ್‌ ಪಡೆ ಈ ಸ್ಪರ್ಧೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಗೆಲ್ಲುವುದೇ ಗುರಿ: ರೋಹಿತ್‌
ಎಲ್ಲ ಪಂದ್ಯಗಳು ನಮ್ಮ ಪಾಲಿಗೆ ಅತೀ ಮುಖ್ಯವಾಗಿದೆ. ಏಕದಿನ ಪಂದ್ಯ ಆದ್ಯತೆಯಲ್ಲಿಲ್ಲ ಎಂಬುದನ್ನು ಅಲೋಚಿಸುವುದಿಲ್ಲ. ಆದರೆ ಪ್ರತಿಯೊಬ್ಬ ಆಟಗಾರನ ಆಟದ ಒತ್ತಡವನ್ನು ನಾವು ಗಮನದಲ್ಲಿ ಇಟ್ಟುಕೊಳ್ಳುತ್ತೇವೆ. ಈ ಕಾರಣಕ್ಕಾಗಿ ನಾವು ತಂಡದಲ್ಲಿ ಕೆಲವು ಬದಲಾವಣೆ ಮಾಡಬಹುದು. ಆದರೆ ನಮ್ಮ ಕಟ್ಟಕೊನೆಯ ಗುರಿ ಪಂದ್ಯವನ್ನು ಗೆಲ್ಲುವುದು. ಇದನ್ನು ನಾವು ಯಾವತ್ತೂ ಬಿಟ್ಟುಕೊಡುವುದಿಲ್ಲ ಎಂದು ರೋಹಿತ್‌ ಟಿ20 ಸರಣಿ ಬಳಿಕ ಹೇಳಿದ್ದಾರೆ.

ವೈಟ್‌ಬಾಲ್‌ ಕ್ರಿಕೆಟ್‌ ಆಟವನ್ನು ಅರ್ಥ ಮಾಡಿಕೊಳ್ಳುವುದು ನಮ್ಮ ಗುರಿ ಯಾಗಿದೆ. ಹೊಸ ಆಟಗಾರರು ಆಡುತ್ತಿರುವುದರಿಂದ ಹೇಗೆ ಆಡುವುದು ಎಂಬುದು ಮುಖ್ಯ. 50 ಓವರ್‌ಗಳ ಪಂದ್ಯ ಟಿ20ಯ ವಿಸ್ತರಣೆಯಾಗಿದೆ. ಟಿ20ಗೆ ಹೋಲಿಸಿದರೆ ಏಕದಿನದಲ್ಲಿ ಅಪಾಯ ಸ್ವಲ್ಪಮಟ್ಟಿಗೆ ಕಡಿಮೆ ಇರಬಹುದು ಎಂದು ರೋಹಿತ್‌ ತಿಳಿಸಿದರು.

ಏಕದಿನ ಸರಣಿ ಇಯಾನ್‌ ಮಾರ್ಗನ್‌ ಅವರಿಂದ ನಾಯಕತ್ವ ಪಡೆದ ಬಳಿಕ ಬಟ್ಲರ್‌ ಪಾಲಿಗೆ ಮೊದಲನೆಯದು ಆಗಿದೆ. ಟಿ20ಯಲ್ಲಿ ನಿರಾಶಾದಾಯಕ ನಿರ್ವಹಣೆ ನೀಡಿದ್ದರಿಂದ ಆತಿಥೇಯ ತಂಡ ಏಕದಿನ ಸರಣಿಯಲ್ಲಿ ತಿರುಗಿ ಬೀಳುವ ಸಾಧ್ಯತೆಯಿದೆ. ಬೆನ್‌ ಸ್ಟೋಕ್ಸ್‌, ಜೋ ರೂಊಊಟ್‌ ಮತ್ತು ಜಾನಿ ಬೇರ್‌ಸ್ಟೋ ತಂಡಕ್ಕೆ ಮರಳಿದ್ದರಿಂದ ಇಂಗ್ಲೆಂಡ್‌ ಬಲಿಷ್ಠವಾಗಿದೆ.

ತಂಡಗಳು
ಭಾರತ: ರೋಹಿತ್‌ ಶರ್ಮ, ಧವನ್‌, ಇಶಾನ್‌ ಕಿಶನ್‌, ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಜಡೇಜ, ಶಾರ್ದೂಲ್ ಠಾಕೂರ್, ಚಹಲ್‌, ಅಕ್ಷರ್‌ ಪಟೇಲ್‌, ಜಸ್‌ಪ್ರೀತ್‌ ಬುಮ್ರಾ, ಪ್ರಸಿದ್ಧ್ ಕೃಷ್ಣ, ಶಮಿ, ಸಿರಾಜ್‌, ಅರ್ಷದೀಪ್‌ ಸಿಂಗ್‌.

ಇಂಗ್ಲೆಂಡ್‌: ಬಟ್ಲರ್‌ (ನಾಯಕ), ಮೊಯಿನ್‌ ಅಲಿ, ಬೇರ್‌ಸ್ಟೋ, ಹ್ಯಾರಿ ಬ್ರೂಕ್‌, ಬ್ರೈಡನ್‌ ಕಾರ್ಸ್‌, ಸ್ಯಾಮ್‌ ಕರನ್‌, ಲಿವಿಂಗ್‌ಸ್ಟೋನ್‌, ಕ್ರೆಗ್‌ ಒವರ್ಟನ್‌, ಪಾರ್ಕಿನ್ಸನ್‌, ರೂಟ್‌, ಜೇಸನ್‌ ರಾಯ್‌, ಫಿಲ್‌ ಸಾಲ್ಟ್, ಬೆನ್‌ ಸ್ಟೋಕ್ಸ್‌, ರೀಸ್‌ ಟಾಪ್ಲೆ, ಡೇವಿಡ್‌ ವಿಲ್ಲೆ.

ಕೊಹ್ಲಿಗೆ ಗಾಯ; ಆಡುವುದು ಸಂಶಯ
ಹೊಸದಿಲ್ಲಿ: ಫಾರ್ಮ್ ಗೆ ಮರಳಲು ಒದ್ದಾಡುತ್ತಿರುವ ವಿರಾಟ್‌ ಕೊಹ್ಲಿ ಮೂರನೇ ಟಿ20 ಪಂದ್ಯದ ವೇಳೆ ತೊಡೆಸಂದು ಸೆಳೆತಕ್ಕೆ ಒಳಗಾಗಿದ್ದು ಮಂಗಳವಾರ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಕೊಹ್ಲಿಯ ಗಾಯದ ಪ್ರಮಾಣ ಹೇಗಿದೆ ಎಂಬುದು ತಿಳಿದಿಲ್ಲ, ಆದರೆ 33 ವರ್ಷದ ಅನುಭವಿ ಆಟಗಾರನಿಗೆ ಮೊದಲ ಪಂದ್ಯಕ್ಕೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಅವರು ಮುಂದಿನೆರಡು ಪಂದ್ಯಗಳಿಗೆ ಲಭ್ಯರಿರುವ ಸಾಧ್ಯತೆಯಿದೆ.ಕೊಹ್ಲಿ ಅವರು ನಾಟಿಂಗಂನಿಂದ ಲಂಡನ್‌ಗೆ ತೆರಳಿದ ತಂಡದ ಬಸ್‌ನಲ್ಲಿ ಪ್ರಯಾಣಿಸಿಲ್ಲ. ವೈದ್ಯರ ಬಳಿಕ ಅವರ ಪರಿಸ್ಥಿತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ. ಹೀಗಾಗಿ ಅವರು ತಂಡದ ಬಸ್‌ನಲ್ಲಿ ಹೋಗಿಲ್ಲ ಎನ್ನಲಾಗಿದೆ.

ಚಾರ್ಟರ್‌ ವಿಮಾನದಲ್ಲಿ ಕೆರಿಬಿಯನ್‌ಗೆ
ಕೋವಿಡ್‌ ಭಯದ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರನ್ನು ವಿಶೇಷ ಚಾರ್ಟರ್‌ ವಿಮಾನದಲ್ಲಿ ಮ್ಯಾಂಚೆಸ್ಟರ್‌ನಿಂದ ಪೋರ್ಟ್‌ ಆಫ್ ಸ್ಪೇನ್‌ಗೆ ಕಳುಹಿಸಲು ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.

ಏಕದಿನ ವೇಳಾಪಟ್ಟಿ
ದಿನ ತಂಡಗಳು ಸ್ಥಳ ಸಮಯ
ಜು. 12 ಭಾರತ-ಇಂಗ್ಲೆಂಡ್‌ ಓವಲ್‌ ಸಂ. 5.30
ಜು. 14 ಭಾರತ-ಇಂಗ್ಲೆಂಡ್‌ ಲಾರ್ಡ್ಸ್ ಸಂ. 5.30
ಜು. 17 ಭಾರತ-ಇಂಗ್ಲೆಂಡ್‌ ಮ್ಯಾಂಚೆಸ್ಟರ್‌ ಸಂ. 3.30

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.